ವಿವಾದಕ್ಕೆ ಕಾರಣವಾದ ನಟಿ ನಿಧಿ ಸುಬ್ಬಯ್ಯ ಫೋಟೋ ಅಪ್ಲೋಡ್
Team Udayavani, Aug 5, 2018, 6:00 AM IST
ಮೈಸೂರು: ನಟಿ ನಿಧಿಸುಬ್ಬಯ್ಯ ಇತ್ತೀಚೆಗೆ ಮೈಸೂರು ಅರಮನೆಗೆ ಭೇಟಿ ನೀಡಿ ಅರಮನೆಯ ದರ್ಬಾರ್ ಹಾಲ್ನಲ್ಲಿ ತೆಗೆದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.
2016ರಲ್ಲಿ ಯುವ ಜೋಡಿಯೊಂದು ಅರಮನೆಯ ದರ್ಬಾರ್ ಹಾಲ್ನಲ್ಲಿ ಪ್ರಿವೆಡ್ಡಿಂಗ್ ಫೋಟೋ ಶೂಟ್ ನಡೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಘಟನೆ ನಂತರ ಅರಮನೆಯ ವೀಕ್ಷಕರಿಗೆ ಹಲವು ನಿರ್ಬಂಧಗಳನ್ನು ಹೇರಿ,ದರ್ಬಾರ್ ಹಾಲ್ ಪ್ರವೇಶಿಸದಂತೆ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. ಜತೆಗೆ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರು ಹೊರ ಆವರಣದಲ್ಲಿ ಫೋಟೋ-ಸೆಲ್ಫಿ ತೆಗೆದುಕೊಳ್ಳಲೂ ಪೊಲೀಸರು ಅಡ್ಡಿಪಡಿಸುತ್ತಾರೆ. ಆದರೂ ನಟಿ ನಿಧಿಸುಬ್ಬಯ್ಯ ಅವರಿಗೆ ನಿಷೇಧಿತ ಪ್ರದೇಶವಾದ ದರ್ಬಾರ್ ಹಾಲ್ನಲ್ಲಿ ಫೋಟೋ ತೆಗೆದುಕೊಳ್ಳಲು ಹೇಗೆ ಅವಕಾಶ ನೀಡಲಾಯಿತೆಂಬ ಪ್ರಶ್ನೆ ಕೇಳಿಬಂದಿದೆ.
ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ, ಮೈಸೂರು ಅರಮನೆ ಮಂಡಳಿ ಅಧ್ಯಕ್ಷರಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ 2003ರ ಜೂನ್ 19ರಂದು ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪ್ರವಾಸಿಗರು ಅರಮನೆ ಮಂಡಳಿಗೆ 20 ರೂ. ಶುಲ್ಕ ಪಾವತಿಸಿ ಅರಮನೆಯ ಒಳಭಾಗದಲ್ಲಿ ಫ್ಲಾಶ್ ಲೈಟ್ ಬಳಸದೆ ಛಾಯಾಚಿತ್ರ ತೆಗೆಯಲು ಅನುಮತಿ ನೀಡಲಾಗಿದೆ. 2018ರ ಮಾರ್ಚ್ 1ರಂದು ನಡೆದ ಅರಮನೆ ಮಂಡಳಿ ಸಭೆಯಲ್ಲಿ ಮೊಬೈಲ್ ಕ್ಯಾಮೆರಾ ಹಾಗೂ ಡಿಜಿಟಲ್ ಕ್ಯಾಮೆರಾಗಳಲ್ಲಿ ಫ್ಲಾಶ್ಲೈಟ್ ಬಳಸದೆ ಉಚಿತವಾಗಿ ಫೋಟೋ ತೆಗೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ