ಹದಿನೈದೇ ದಿನದಲ್ಲಿ ಕನ್ನಡ ಕಲಿತ ಜಪಾನಿಗ !


Team Udayavani, Aug 5, 2018, 9:23 AM IST

kazuki.jpg

ಮಂಗಳೂರು: ಕನ್ನಡ ನಾಡಿನಲ್ಲಿದ್ದೂ ಆಂಗ್ಲ ಭಾಷಾ ವ್ಯಾಮೋಹಿ ಗಳಾಗಿರುವವರೇ ಹಲವರು. ಅಂಥದ್ದರಲ್ಲಿ ಜಪಾನ್‌ ಪ್ರಜೆಯೊಬ್ಬ ರೇಷ್ಮೆ ಬೆಳೆ ಅಧ್ಯಯನಕ್ಕಾಗಿ ಕರ್ನಾಟಕಕ್ಕೆ ಬಂದು ಹದಿನೈದೇ ದಿನದಲ್ಲಿ ಕನ್ನಡ ಕಲಿತಿದ್ದಾರೆ! ಸ್ಪಷ್ಟ ಕನ್ನಡ ಕಲಿತು ರಾಮನಗರದ ರೇಷ್ಮೆ ಬೆಳೆಗಾರರೊಂದಿಗೆ ವ್ಯವಹರಿಸುವ ಇಚ್ಛೆ ಈ ಯುವಕನದ್ದು. ಈತನಿಗೆ ಕನ್ನಡ ಕಲಿಸಿದವರು 
ಮಂಗಳೂರಿನ ಯುವಕ, ಪ್ರಸ್ತುತ ಹೊಸದಿಲ್ಲಿಯ ಡೆಲ್ಲಿ ಕನ್ನಡ ಸೀನಿಯರ್‌ ಸೆಕೆಂಡರಿ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿರುವ ಅರವಿಂದ ಬಿಜೈ.

22 ವರ್ಷದ ಕಝುಕಿ ಜಪಾನ್‌ನ ಚಿಬಾ ಮೂಲದವರು. ಜಪಾನ್‌ನ ಝೈಕಾ ಕಂಪೆನಿಯ ಮುಖಾಂತರ ರೇಷ್ಮೆ ಕುರಿತು ಅಧ್ಯಯನಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದಾರೆ.ಹೊಸದಿಲ್ಲಿಗೆ ಬಂದ ಕಝುಕಿ, ಅಲ್ಲಿನ ಝುಬಾನ್‌ ಭಾಷಾ ಕಲಿಕಾ ಸಂಸ್ಥೆಯಲ್ಲಿ  ಕನ್ನಡ ಕಲಿಕೆಯ ಇಚ್ಛೆ  ವ್ಯಕ್ತಪಡಿಸಿದ್ದಾರೆ. ಅದರಂತೆ ಸಂಸ್ಥೆಯವರು ಅರವಿಂದ ಅವರನ್ನು ಸಂಪರ್ಕಿಸಿ   ಕನ್ನಡ ಪಾಠಕ್ಕೆ ಮನವಿ ಮಾಡಿದ್ದರು. ದಿನಕ್ಕೆ 4 ಗಂಟೆಯಂತೆ 15 ದಿನಗಳ ಕಾಲ ಅರವಿಂದ ಕನ್ನಡ ಹೇಳಿಕೊಟ್ಟಿದ್ದಾರೆ. ಕಝಕಿ ಕಲಿಕಾಸಕ್ತಿ ಎಷ್ಟಿತ್ತೆಂದರೆ ಮೊದಲ ದಿನವೇ ಕನ್ನಡ ವರ್ಣಮಾಲೆಯ “ಅ’ ದಿಂದ “ಳ’ ವರೆಗೆ ಬರೆದು ತೋರಿಸಿದ್ದರಂತೆ! 

ಕನ್ನಡದಲ್ಲಿ  ಟೈಪಿಂಗ್‌
ಕಝುಕಿ ಸದ್ಯ ಕನ್ನಡ ಕೀಲಿಮಣೆಯನ್ನೂ ಕಲಿತಿದ್ದು, ಮಾರ್ಗದರ್ಶಕ ಅರವಿಂದ್‌ ಜತೆ ಮೊಬೈಲ್‌ ಮೂಲಕ ಕನ್ನಡದಲ್ಲೇ ಸಂದೇಶ ಸಂವಹನ ನಡೆಸುತ್ತಾರೆ. ಹೊಸದಿಲ್ಲಿಯ ಝುಬಾನ್‌ ಭಾಷಾ ಕಲಿಕಾ ಸಂಸ್ಥೆಯಲ್ಲಿ ಕನ್ನಡ ಕಲಿಸಿ ಎಂದು ಕೇಳಿದ ಮೊದಲ ವಿದೇಶಿಗ ಬಹುಶಃ ಕಝುಕಿ ಎಂದು ಸಂಸ್ಥೆಯವರೇ ಹೇಳುತ್ತಾರೆ. ಈ ಸಂಸ್ಥೆಯಲ್ಲಿ ಹೊರ ರಾಜ್ಯ ಅಥವಾ ವಿದೇಶಗಳಿಂದ ಆಗಮಿಸಿದವರಿಗೆ ಭಾಷೆ ಕಲಿಸಲಾಗುತ್ತದೆ. ಉರ್ದು, ಹಿಂದಿ, ಇಂಗ್ಲಿಷ್‌ ಸೇರಿದಂತೆ ವಿವಿಧ ಭಾಷೆಗಳನ್ನು ಇಲ್ಲಿ ಕಲಿಸಲಾಗುತ್ತದೆ. ಕನ್ನಡಕ್ಕೆ ಸಂಪನ್ಮೂಲ ವ್ಯಕ್ತಿಗಳಿಲ್ಲದ ಕಾರಣ ಅರವಿಂದ ಅವರ ಮೂಲಕ ಕಲಿಸಲಾಗಿದೆ.

ವಚನ ತಪ್ಪಿಲ್ಲದೆ ಓದುತ್ತಾರೆ
ಬಸವಣ್ಣನವರ “ಕಳಬೇಡ, ಕೊಲಬೇಡ… ಹುಸಿಯ ನುಡಿಯಲು ಬೇಡ..’ ವಚನವನ್ನು ಕಝುಕಿ ನಿರರ್ಗಳವಾಗಿ ಓದುತ್ತಾರೆ. ಇದನ್ನು ಅರವಿಂದ ತನ್ನಫೇಸುºಕ್‌ ಖಾತೆಯಲ್ಲಿ ವೀಡಿಯೋ ಸಮೇತ ಅಪ್‌ಲೋಡ್‌ ಮಾಡಿದ್ದಾರೆ. ಓದು ಮತ್ತು ಬರಹ ಶೀಘ್ರ
ಕಲಿತಿರುವ ಕಝುಕಿ ಮಾತನಾಡುವಾಗ ಸ್ವಲ್ಪ ತಡವರಿಸು ತ್ತಾರೆ. ಏನೇ ಕೇಳಿದರೂ ಯೋಚನೆ ಮಾಡಿ ಕನ್ನಡದಲ್ಲಿ ಉತ್ತರಿಸುತ್ತಾರೆ. 

ಕನ್ನಡದಲ್ಲೇ ವ್ಯವಹರಿಸುವ ಇಚ್ಛೆ
ರೇಷ್ಮೆ ಕುರಿತು ಅಧ್ಯಯನಕ್ಕಾಗಿ ಕರ್ನಾಟಕಕ್ಕೆ ಬಂದಿದ್ದೇನೆ. ಇಲ್ಲಿನ ವ್ಯಾವಹಾರಿಕ ಭಾಷೆ ಕನ್ನಡವಾದ್ದರಿಂದ ಅದೇ ಭಾಷೆಯಲ್ಲಿ ಜನರೊಂದಿಗೆ ಬೆರೆಯುವ ಇಚ್ಛೆ ನನ್ನದು. ಮುಂದೆ ರಾಮನಗರದ ರೇಷ್ಮೆ ಬೆಳೆಗಾರರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ ಸಮಗ್ರ ಅಧ್ಯಯನ ನಡೆಸಬೇಕೆಂಬುದೇ ಆಸೆ. 
 – ಕಝುಕಿ, ಕನ್ನಡ ಕಲಿತ ಜಪಾನಿಗ

*ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.