ಬಡವರಿಗೆ ಅನ್ಯಾಯವಾದರೆ ಸೂಕ್ತ ಕ್ರಮ: ಶಾಸಕ ಕೋಟ್ಯಾನ್
Team Udayavani, Aug 5, 2018, 12:26 PM IST
ಮೂಡಬಿದಿರೆ: ಬಡ ಜನರು ಜೀವನ ನಡೆಸುವುದೇ ಕಷ್ಟ. ಹಾಗಿರುವಾಗ ಸರಕಾರಿ ಕೆಲಸಗಳಿಗಾಗಿ ಅವರು ಬಂದಾಗ ನಾವು ಸಾಧ್ಯವಾದಷ್ಟೂ ಸೇವೆ ನೀಡಬೇಕು. ಬಡವರಿಗೆ ಅನ್ಯಾಯವಾದಲ್ಲಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಇಲ್ಲಿನ ಸಮಾಜ ಮಂದಿರದಲ್ಲಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿ, ಆರ್ಟಿಸಿಗಳಲ್ಲಿ ಹೆಸರು ಹಾಗೂ ಮಾಹಿತಿಯನ್ನು ತಪ್ಪಾಗಿ ಉಲ್ಲೇಖಿಸಲಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇದು ಮರುಕಳಿಸಬಾರದು. ನಿವೇಶನ ಮತ್ತು ಮನೆ ಇಲ್ಲದವರ ಬಗ್ಗೆ ಸಂಪೂರ್ಣ ಮಾಹಿತಿ ಸಿದ್ಧಪಡಿಸಬೇಕು. ಗ್ರಾಹಕರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸಬಾರದು. ವಿವಿಧ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ನಿಜವಾದ ಫಲಾನುಭವಿಗಳಿಗೆ ಪ್ರಯೋಜನ ತಲುಪಬೇಕು. ರಾಷ್ಟ್ರೀಯ ಕುಟುಂಬ ಪರಿಹಾರದ ಮೊತ್ತ 6 ತಿಂಗಳ ಒಳಗೆ ಸಂಬಂಧಪಟ್ಟವರ ಕೈ ತಲುಪುವಂತೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಕರಣಿಕರು ಹಾಗೂ ಪಿಡಿ ಒಗಳು ಉಪಸ್ಥಿತರಿದ್ದು, ಅಭಿವೃದ್ಧಿಗೆ ಸಂಬಂಧಿಸಿದ ಕೆಲವೊಂದು ಕಾನೂನಾತ್ಮಕ ತೊಡಕುಗಳ ಬಗ್ಗೆ ಚರ್ಚಿಸಿದರು. ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ವಿನೋದ್ ಬೆಳ್ಳೂರು, ಪುರಸಭಾ ಸದಸ್ಯರಾದ ಬಾಹುಬಲಿ ಪ್ರಸಾದ್, ನಾಗ ರಾಜ್ ಪೂಜಾರಿ, ದಿನೇಶ್ ಪೂಜಾರಿ, ಪ್ರಸಾದ್ ಕುಮಾರ್, ಮುಖಂಡರಾದ ಮೇಘನಾದ್ ಶೆಟ್ಟಿ, ಹರೀಶ್ ಎಂ.ಕೆ. ಮೊದಲಾದವರಿದ್ದರು. ಕಂದಾಯ ಅಧಿಕಾರಿ ದಿಲೀಪ್ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ