ದಂಡುಪಾಳ್ಯ ಮಾದರಿ ದರೋಡೆಕೋರರ ಬಂಧನ


Team Udayavani, Aug 5, 2018, 3:20 PM IST

dandupalya.jpg

ಬೆಂಗಳೂರು: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ, ದಂಡುಪಾಳ್ಯ ತಂಡದ ಮಾದರಿಯಲ್ಲಿ ದರೋಡೆ ಮಾಡುತ್ತಿದ್ದ ಐವರು ಯುವಕರನ್ನು ಭಾರತೀನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಾಜಿನಗರ ನಿವಾಸಿಗಳಾದ ಫಾರೂಕ್‌ (24), ನದೀಮ್‌ ಖಾನ್‌ (22), ನದೀಮ್‌ ಅಹಮ್ಮದ್‌ (21), ರತನ್‌ (20) ಮತ್ತು ಜವಾದ್‌ ಅಲಿ (21) ಬಂಧಿತರು. ಇವರಿಂದ 2 ಚಿನ್ನದ ಸರಗಳು, ವಿವಿಧ ಕಂಪನಿಯ 14 ವಾಚ್‌ಗಳು, ಒಂದು ಕ್ಯಾಮೆರಾ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಆ.1ರ ನಸುಕಿನಲ್ಲಿ ಭಾರತೀನಗರದ ಬಂಬೂ ಬಜಾರ್‌ ಪೆಟ್ರೋಲ್‌ ಬಂಕ್‌ ಬಳಿ ದರೋಡೆಗೆ ಸಂಚು ರೂಪಿಸಿದ್ದರು. ಈ ಮಾಹಿತಿ ಪಡೆದ ಠಾಣೆಯ ಪಿಎಸ್‌ಐ ನಯನಾ ಮತ್ತು ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣ ಹಾಗೂ ಜಂಬೂ ಬಜಾರ್‌ ರಸ್ತೆಯಲ್ಲಿ ಒಬ್ಬಂಟಿಯಾಗಿ ಸಂಚರಿಸುವ ಸಾರ್ವಜನಿಕರನ್ನು ಮಾರಕಾಸ್ತ್ರಗಳು ಹಾಗೂ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆಗೆ ಸಂಚು ರೂಪಿಸಿದ್ದರು. ಈ ವೇಳೆ ಆರೋಪಿಗಳಿಂದ ದೊಣ್ಣೆ, ರಾಡ್‌, ಖಾರದ ಪುಡಿ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಎಸಗಿದ್ದ ದರೋಡೆ ಪ್ರಕರಣದ ಕುರಿತು ಮಾಹಿತಿ ನೀಡಿದ್ದರು.ಆರೋಪಿಗಳೆಲ್ಲರೂ ಸ್ನೇಹಿತರಾಗಿದ್ದು, ಹಣ ಸಂಪಾದಿಸಿ ಮೋಜಿನ ಜೀವನ ನಡೆಸಲು ಕೃತ್ಯವೆಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದಂಡುಪಾಳ್ಯ ಮಾದರಿ ದರೋಡೆ: ಬಂಧಿತರು ಆರೋಪಿಗಳು ಜುನ್‌ 25ರಂದು ಹೆಣ್ಣೂರು ಠಾಣಾ ವ್ಯಾಪ್ತಿಯ ಎಚ್‌ಬಿಆರ್‌ ಲೇಔಟ್‌ನ 5ನೇ ಬ್ಲಾಕ್‌ ಮುಖ್ಯರಸ್ತೆಯಲ್ಲಿರುವ ಸಾಯಿಸುಮಾ ಅಪಾರ್ಟ್‌ಮೆಂಟ್‌ನ ಜೋನಾಥನ್‌ ಥಾಮಸ್‌ ಎಂಬುವರ ಮನೆಯಲ್ಲಿ ದಂಡುಪಾಳ್ಯ ಗ್ಯಾಂಗ್‌ ಮಾದರಿಯಲ್ಲಿ ದರೋಡೆ ಮಾಡಿದ್ದರು.

ಆರೋಪಿಗಳ ಪೈಕಿ ಒಬ್ಬ ಜೋನಾಥನ್‌ ಥಾಮಸ್‌ ಮನೆಗೆ ಹೋಗಿ ಕಾಲಿಂಗ್‌ ಬೆಲ್‌ ಒತ್ತಿದ್ದಾನೆ. ಆಗ ಮನೆಯಲ್ಲಿದ್ದ ಇವರು ಹೊರಗಡೆ ಹೋಗಿದ್ದ ಪತ್ನಿ ಬಂದಿರಬೇಕೆಂದು ಬಾಗಿಲು ತೆರೆದಾಗ ಆರೋಪಿ ಕುಡಿಯಲು ನೀರು ಕೇಳಿದ್ದಾನೆ. ನೀರು ತರಲು ಜೋನಾಥನ್‌ ಅಡುಗೆ ಕೋಣೆಗೆ ಹೋದಾಗ ಇತರೆ ಆರೋಪಿಗಳು ಮನೆಯೊಳಗೆ ಪ್ರವೇಶಿಸಿ ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ.

ಬಳಿಕ 2 ಚಿನ್ನದ ಸರಗಳು, 1,500 ರೂ. ನಗದು ಹಾಗೂ ಕಬೋರ್ಡ್‌ನಲ್ಲಿದ್ದ ವಿವಿಧ ಕಂಪನಿಯ 14 ವಾಚ್‌ಗಳು, ಒಂದು ಕ್ಯಾಮೆರಾ ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಜೋನಾಥನ್‌ ಥಾಮಸ್‌ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.