ಅಧಿಕಾರಿಗಳೇ ಗೈರಾದರೆ ಯಾರೊಡನೆ ಚರ್ಚೆ ನಡೆಸೋಣ?


Team Udayavani, Aug 5, 2018, 5:40 PM IST

5-agust-24.jpg

ಶಿಗ್ಗಾವಿ: ಅಧ್ಯಕ್ಷರು ಅಧಿಕಾರಿಗಳ ತಾಳಕ್ಕೆ ಕುಣಿಯುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆ ಸಾಮಾನ್ಯ ಸಭೆಗೆ ಬರುತ್ತಾರೆ. ಹಿಂದಿನ ಸಭೆಯಲ್ಲಿ ಕಡ್ಡಾಯ ಹಾಜರಾತಿ ಕುರಿತು ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿತ್ತಾದರೂ, ಹಲವು ಇಲಾಖೆ ಅಧಿಕಾರಿಗಳು ಮತ್ತೇ ಗೈರಾಗಿದ್ದಾರೆ. ಅವರೇ ಇಲ್ಲದ ಮೇಲೆ ಚರ್ಚಿ ನಡೆಸುವುದು ಯಾರ ಜೊತೆಗೆ? ನಿಮಗೆ ಎಲ್ಲ ಅಧಿಕಾರ ನೀಡಿದ್ದೇವೆ. ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಸಾಮಾನ್ಯ ಸಭೆಗೆ ಗೈರಾರಾದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಿ ಎಂದು ತಾಲೂಕು ಪಂಚಾಯತ್‌ ಸರ್ವ ಸದಸ್ಯರು ಪಕ್ಷ ಬೇಧವಿಲ್ಲದೇ ಅಧ್ಯಕ್ಷರ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು.

ಪಟ್ಟಣದ ತಾಲೂಕು ಪಂಚಾಯತ್‌ ಸಭಾಭವನದಲ್ಲಿ ತಾಪಂ ಅಧ್ಯಕ್ಷೆ ಪಾರವ್ವಾ ಆರೇರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ಆರಂಭದಲ್ಲಿಯೇ ಎಲ್ಲ ಸದಸ್ಯರು ಎದ್ದು ನಿಂತು ಅಧ್ಯಕ್ಷರನ್ನೇ ತರಾಟೆಗೆ ತೆಗೆದುಕೊಂಡರು. ಸಭೆಗೆ ಗೈರಾದ ಅಕ್ಷರ ದಾಸೋಹ ಅಧಿಕಾರಿ ರವಿಶೆಟ್ಟೆಪ್ಪನವರಿಗೆ ಜ್ವರ ಬಂದಿದೆ. ಸಭೆಯ ಹಾಜರಾತಿ ಕುರಿತು ಪೋನ್‌ ಮೂಲಕ ಸ್ಪಷ್ಟನೇ ನೀಡಿದ್ದಾರೆ ಎಂದು ಅಧಿಕಾರಿಗಳ ಪರ ಅಧ್ಯಕ್ಷರು ಲಾಭಿ ನಡೆಸಿದರು.

ನಿನ್ನೆ ಸಂಜೆವರೆಗೂ ಇಲ್ಲಿಯೇ ಸುತ್ತಾಡಿಕೊಂಡವರಿಗೆ ಒಮ್ಮೆಲೆ ಮೀಟಿಂಗ್‌ ಬಂದಾಗಲೇ ಜ್ವರ ಬಂದಿತೇನು ಎಂದು ಸದಸ್ಯ ಶ್ರೀಕಾಂತ ಪೂಜಾರ ಏರು ದಾಟಿಯಲ್ಲಿ ಅಧ್ಯಕ್ಷರನ್ನು ಪ್ರಶ್ನಿಸಿದರು. ಸದಸ್ಯ ವಿಶ್ವನಾಥ ಹರವಿ ಸದಸ್ಯರ ಮಾತಿಗೆ ದ್ವಿನಿಗೂಡಿಸಿ, ಆಹಾರ ವಿಭಾಗದ ಅ ಧಿಕಾರಿಗಳು ಸಭೆಗೆ ಬಂದಿಲ್ಲ. ತಾಲೂಕಿನ ಸಾಕಷ್ಟು ಬಡ ಜನರರೇಷನ್‌ ಕಾರ್ಡ್‌ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಿತ್ತು. ಅಲ್ಲದೇ ಸಿಡಿಪಿಒ ಸಹ ಸಭೆಗೆ ಗೈರಾಗಿದ್ದಾರೆ. ತಾಲೂಕಿನ ಅನೇಕ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ನಾವು ಯಾರೊಂದಿಗೆ ಮಾತನಾಡಬೇಕು ಎಂದು ಅಧ್ಯಕ್ಷರನ್ನು ಖಾರವಾಗಿ ಪ್ರಶ್ನಿಸಿದರು. ಅಧ್ಯಕ್ಷೆ ಪಾರವ್ವ ಆರೇರ ಸದಸ್ಯರ ಮಾತಿಗೆ ಉತ್ತರಿಸಿ, ಇಲಾಖೆ ಕೆಲಸದ ನಿಮಿತ್ತ ಹೊರಹೋಗಿದ್ದಾರೆ. ನಮ್ಮ ಒಪ್ಪಿಗೆಯನ್ನೂ ಪಡೆದಿದ್ದಾರೆ. ಅನಧಿಕೃತ ಗೈರಾದವರಿಗೆ ನೋಟಿಸ್‌ ನೀಡೋಣ ಎಂದು ಸದಸ್ಯರುನ್ನು ಸಮಾದಾನ ಮಾಡಲು ಎತ್ನಿಸಿದರು.

ಆಗ ಅಂದಲಗಿ ಕ್ಷೇತ್ರದ ಸದಸ್ಯ ಬಿ.ಎಸ್‌. ಹಿರೇಮಠ ಮಾತನಾಡಿ, ತಾಪಂ ಆವರಣದಲ್ಲಿನ ಇಲಾಖೆ ಕಟ್ಟಡವೊಂದು ಬಳಸದೆ ಖಾಲಿಬಿದ್ದಿದೆ. ಸಿಡಿಪಿಒ ಕಾರ್ಯಾಲಯ ಬಾಡಿಗೆ ಕಟ್ಟಡದಲ್ಲಿ ನಡೆಸುವ ಬದಲಾಗಿ ಖಾಲಿ ಇರುವ ಕಡ್ಡದಲ್ಲೆ ನಡೆಸಬಹುದಲ್ಲವೆ? ಇದರಿಂದಾಗಿ ಪ್ರತಿ ತಿಂಗಳೂ ಇಲಾಖೆಗೆ ಹಣಕಾಸಿನ ಹೊರೆಯಾಗುತ್ತಿದ್ದು, ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರು ಪೂಜಾರ ತಮ್ಮ ಟೇಬಲ್‌ ಮೇಲಿದ್ದ ಫೈಲ್‌ಒಳಗಿನ ನೋಟಿಸ್‌ಗಳನ್ನು ತೋರಿಸಿ, ಹಿಂದಿನ ಸಭೆಯಲ್ಲಿ ಗೈರಾದವರ ನೋಟಿಸ್ಸಿಗೆ ಅನುಪಾಲನಾ ವರದಿ ಸ್ಪಷ್ಟನೆಯನ್ನು ಓದಿ ಹೇಳಿದರು. ಆದರೆ, ಎಲ್ಲ ಸದಸ್ಯರು ಎದ್ದು ನಿಂತು ಒಕ್ಕೊರಲಿನಿಂದ ಎಲ್ಲ ಇಲಾಖೆ ಅಧಿಕಾರಿಗಳಿಲ್ಲದಿದ್ದರೆ ಸಭೆ ನಡೆಸಲಾಗದು ಎಂದು ಪಟ್ಟ ಹಿಡಿದರು. 

ಕಾರ್ಯ ನಿರ್ವಹಣಾಧಿಕಾರಿ ಚಂದ್ರು ಪೂಜಾರ, ಆ. 13ರಂದು ಸಭೆ ನಡೆಸಲಾಗುವುದು. ಅಧಿಕಾರಿಗಳು ಕಡ್ಡಾಯ ಇರುವಂತೆ ನೋಟಿಸ್‌ ನೀಡಲಾಗುವುದು. ಅಲ್ಲದೇ ಅನಧಿಕೃತ ಗೈರು ಹಾಜರಾದ ಅ ಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ತಾಖಿತು ಮಾಡಿದರು. ಸಭೆಗೆ ಗೈರಾದ ಅಕ್ಷರದಾಸೋಹ, ಆರೋಗ್ಯ, ಆಹಾರ ವಿಭಾಗದ ನಿರೀಕ್ಷಕರು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಎಂಟು ಇಲಾಖೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಬೇಕೆಂದು ಠರಾವಿನೊಂದಿಗೆ ಸಭೆ ಅಂತ್ಯಗೊಂಡಿತು.

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.