ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ


Team Udayavani, Aug 6, 2018, 12:18 PM IST

vij-2.jpg

ವಿಜಯಪುರ: ಪ್ರತಿ ತಿಂಗಳು 5ರೊಳಗೆ ಶಿಕ್ಷಕರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ವ ಶಿಕ್ಷಣ ಅಭಿಯಾನ ವಿಜಯಪುರ ಗ್ರಾಮೀಣ ವಲಯದ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಎರಡು ವಾರದಲ್ಲಿ ಬೇಡಿಕೆ ಈಡೇರಿಸುವ ಗಡುವು ನೀಡಿದರು.

ನಗರದ ಟಕ್ಕೆ ಪ್ರದೇಶದಲ್ಲಿರುವ ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಿಕ್ಷಕರು, ಸರ್ಕಾರದ ಆದೇಶದವಿದ್ದರೂ ವಿಜಯಪುರದ ಗ್ರಾಮೀಣ ವಲಯದ ಸರ್ವ ಶಿಕ್ಷಣ ಅಭಿಯಾನ ಯೋಜನೆಯ ಶಿಕ್ಷಕರ 2-3 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗುತ್ತದೆ. ಪದೇ ಪದೇ ಈ ವಿಷಯದಲ್ಲಿ ಹೋರಾಟ ಮಾಡುವುದು ಸಾಮಾನ್ಯವಾಗಿದೆ ಎಂದು ದೂರಿದರು.

ಎಸ್‌ಎಸ್‌ಎ, ಎಜಿಟಿ ಹಾಗೂ ಎನ್‌ಪಿಎಸ್‌ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಈ ಶಿಕ್ಷಕರಿಗೆ ಕಳೆದ ಎರಡು ತಿಂಗಳಿಂದ ವೇತನ ಪಾವತಿಸಿಲ್ಲ. 2005ರಿಂದ ಈ ವರೆಗೆ ಸೇವೆಗೆ ಸೇರಿದ ಶಿಕ್ಷಕರ ಮೂಲ ವೇತನ ರೂ. 31,850ರಂತೆ ನಿಗದಿ ಮಾಡುವ ಬೇಡಿಕೆ ಈಡೇರಿಲ್ಲ. ಶಿಕ್ಷಕರ ವಂತಿಗೆ ಹಣ ಕಟಾವು ಮಾಡಿದ್ದರೂ ಸರ್ಕಾರದ ಪಾಲಿನ ವಂತಿಗೆ ಹಣ ಜಮೆ ಮಾಡಿಲ್ಲ. ಕೂಡಲೇ ಶೇ. 8ರ ಬಡ್ಡಿಯೊಂದಿಗೆ ಜಮೆ ಮಾಡುವಂತೆ ಆಗ್ರಹಿಸಿದರು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕಾಯಂ ಪೂರ್ವ ಸೇವಾ ಅವಧಿ ವಿಳಂಬವಾಗಿ ಘೋಷಣೆ ಮಾಡಿದ್ದು ಆ ಅವಧಿಯ ಬಾಕಿ ವೇತನ ತಕ್ಷಣ ನೀಡಬೇಕು. 10 ವರ್ಷದ ಕಾಲಮಿತಿ ವೇತನ ಬಡ್ತಿ ವಿಳಂಬವಾಗಿ ಮಂಜೂರಿ ಮಾಡಿದ್ದು ಅವಧಿಯ ಬಾಕಿ ವೇತನವನ್ನು ಶೀಘ್ರ ಜಮೆ ಮಾಡಬೇಕು. ಶಿಕ್ಷಕರಿಗೆ ಒಂದು ವಿಶೇಷ ವೇತನ ಬಡ್ತಿ ವಿಳಂಬವಾಗಿದ್ದು,
ವಿಶೇಷ ವೇತನ ಬಡ್ತಿಯ ಬಾಕಿ ವೇತನ ಜಮೆ ಮಾಡಬೇಕು.

ಎಸ್‌ಎಸ್‌ಎ ಯೋಜನೆಯ ಶಿಕ್ಷಕರ 2008 ರಿಂದ 2011 ಅವ ಧಿವರೆಗಿನ ಕಂತುಗಳು ಶಿಕ್ಷಕರ ವೇತನದಲ್ಲಿ ಕಟಾವು ಮಾಡಿದ್ದರೂ ಅವರ ಖಾತೆಗೆ ಇನ್ನು ಜಮೆ ಆಗಿರುವುದಿಲ್ಲ. ಅದನ್ನು ತಕ್ಷಣವೇ ಅವರ ಖಾತೆಗೆ ಜಮೆ ಮಾಡಿಸಬೇಕು. ತುಟ್ಟಿಭತ್ಯೆ ಬಾಕಿ ಹಣ ಜಮೆ ಮಾಡಬೇಕು. ಬೇಡಿಗೆ ಸಂಭ್ರಮದಲ್ಲಿ ಕಾರ್ಯನಿರ್ವಹಿಸಿದ ಸುಮಾರು 105 ಶಿಕ್ಷಕರ ಗಳಿಕೆ ರಜೆ ಜಮೆ ಮಾಡಿ ಸೇವಾಪುಸ್ತಕದಲ್ಲಿ ನಮೂದಿಸಬೇಕು.

ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಕಚೇರಿಗೆ ಬಿಲ್‌ ಸಲ್ಲಿಸಿದರೂ ಮಂಜೂರು ಮಾಡಿಲ್ಲ. ತಕ್ಷಣ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ನಿವೃತ್ತಿ ವೇತನ ಸಹಿತವಾಗಿ 2005ರಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೂ ಇಲಾಖೆ ಅನುಮತಿ ಸಹಿತ ನೇಮಕಗೊಂಡಿರುವ ಶಿಕ್ಷಕರ ನಿವೃತ್ತಿ ವೇತನ ಸಹಿತವಾಗಿ ಎಲ್ಲ ಆರ್ಥಿಕ ಸೌಲಭ್ಯ ಕಲ್ಪಿಸಬೇಕು
ಎಂದ ಆಗ್ರಹಿಸಿದರು. 

ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌. ಎನ್‌. ಹುರಳಿ, ಶಿಕ್ಷಕರ ವೇತನ ಬಿಡುಗಡೆ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಬರುವ ಒಂದು ವಾರದಲ್ಲೇ ಪರಿಹರಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಶಿಕ್ಷಕರ ಸಂಘದ ಗ್ರಾಮೀಣ ವಲಯದ ಅಧ್ಯಕ್ಷ ಎ.ಎನ್‌. ಬಗಲಿ, ಕಾರ್ಯದರ್ಶಿ ಎ.ಆರ್‌. ಮಾಶ್ಯಾಳ, ಆರ್‌.ಎಸ್‌. ಬನಸೋಡೆ, ಅಶೋಕ ಬೂದಿಹಾಳ, ಎಂ.ಎಸ್‌. ಟಕ್ಕಳಕಿ, ಮಹಾಂತೇಶ ಕದ್ದಿ, ಬಸವರಾಜ ಪಡಗನೂರ,
ಹನುಮಂತ ಕಾಲೆಬಾಗ, ಪರಮೇಶ್ವರ ಗದ್ಯಾಳ, ಅನಿಲ ಗುಡೆಪ್ಪಗೋಳ, ಅಡಿವೆಪ್ಪ ಸಾಹುಕಾರ, ವಿ.ಎಸ್‌. ನಿಂಗರೆಡ್ಡಿ, ಶಿವಶರಣಪ್ಪ ತಡಲಗಿ, ಪ್ರಕಾಶ ಕುಲಂಗಿ, ಕುಮಾರ ಗಳತಗಿ, ಎಸ್‌.ಎನ್‌. ಬಾಗಲಕೋಟೆ, ವಿ.ಎಸ್‌. ಕಪಟಕರ, ಎಂ.ಎಚ್‌. ಜಮಾದಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.