ವಿದ್ಯಾವಂತರಿದ್ದರೆ ಸಮುದಾಯದ ಅಭಿವೃದ್ಧಿ ಸಾಧ್ಯ


Team Udayavani, Aug 6, 2018, 12:39 PM IST

kukke-3.jpg

ರಾಮನಗರ: ಗ್ರಾಮೀಣ ಪ್ರದೇಶದಲ್ಲಿರುವ ಸಮುದಾಯದ ಜನರನ್ನು ವಿದ್ಯಾವಂತರನ್ನಾಗಿ ಮಾಡಿದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಆದಿ ಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಒಕ್ಕಲಿಗ ಸಮುದಾಯಕ್ಕೆ ಸಲಹೆ ನೀಡಿದರು. 

ನಗರದ ಹೊನ್ನಮ್ಮ ಕಲ್ಯಾಣ ಮಂಟಪದಲ್ಲಿ ಒಕ್ಕಲಿಗ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ವಿದ್ಯಾದಾನ: ಶಿಕ್ಷಣದ ಮಹತ್ವವನ್ನು ಅರಿತೇ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಗಳು ಅನೇಕ ಶಾಲೆಗಳನ್ನು ತೆರೆದು ವಿದ್ಯಾದಾನಕ್ಕೆ ಕಾರಣರಾಗಿದ್ದಾರೆ. ಇಂದು ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದರು. 

ಸಮುದಾಯಕ್ಕಾಗಿ ಸಂಘಟಿತರಾಗಿ: ವೈಯಕ್ತಿಕ ಬಿನ್ನಾಭಿಪ್ರಾಯಗಳನ್ನು ಬದಿಗಿಡಿ, ಯಾವುದೇ ಪಕ್ಷದಲ್ಲಿದ್ದರೂ ಸಮುದಾಯದ ವಿಷಯದಲ್ಲಿ ರಾಜಕಾರಣ ಮಾಡಬೇಡಿ, ಸಮುದಾಯಕ್ಕೆ ಅನ್ಯಾಯವಾದಾಗ ಹೋರಾಟಕ್ಕೆ ಮುಂದಾಗಿ ಎಂದು ಸಲಹೆ ನೀಡಿದರು. 

ಹಿಂದಿನ ಸರ್ಕಾರದಲ್ಲಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಕಿರುಕುಳ ಅಧಿಕಾರಿಗಳಿಗೆ ಗೊತ್ತಿದೆ. ಈಗಲಾದರೂ ಸಮುದಾಯ ಎಚ್ಚೆತ್ತುಕೊಳ್ಳಬೇಕು, ಒಕ್ಕಲಿಗರ ಸಂಘದ ಮತ್ತು ಒಕ್ಕಲಿಗ ಸರ್ಕಾರಿ ನೌಕರರ ಸಂಘಟನೆಗಳ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗಳಿಕೆಯ ಒಂದು ಭಾಗವನ್ನು ಸಮುದಾಯದಲ್ಲಿ ಹಿಂದುಳಿದವರ ವಿದ್ಯಾಭ್ಯಾಸಕ್ಕೆ ವಿನಿಯೋಗಿಸಿ ಎಂದರು. 

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾುತು. ವಿಶೇಷ ಸಾಧನೆ ಮಾಡಿ ಸರ್ಕಾರಿ ಸೇವೆಗೆ ಸೇರಿರುವ ಡಾ.ಕಾವ್ಯಶ್ರೀ, ಡಾ.ಚೈತ್ರಾ ಕೆ.ಗೌಡ, ಡಾ.ನೇತ್ರಾ ಕೆ.ಗೌಡ, ಶಶಿರೇಖಾ ಅವರನ್ನು ಅಭಿನಂದಿಸಲಾಯಿತು. 

ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ಪುಟ್ಟರಾಮಯ್ಯ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮೇಲಿಂಗು, ಕಾರ್ಯದರ್ಶಿ ಚೇತನ್‌ಕುಮಾರ್‌, ನಗರಸಭೆ ಉಪಾಧ್ಯಕ್ಷೆ ಮಂಗಳ, ಸದಸ್ಯರಾದ ಮಂಜುನಾಥ್‌, ಡಿ.ಕೆ.ಶಿವಕುಮಾರ್‌, ಸಿ.ಕೆ.ರವಿ, ಕೆ.ಚಂದ್ರಯ್ಯ, ಚಿಕ್ಕಶಂಕರಣ್ಣ ಇದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.