ಮತ್ತೆ ಮತ್ತೆ ಬಕರಾ


Team Udayavani, Aug 6, 2018, 3:10 PM IST

cuber-crimr.jpg

ಮಂಗಳೂರು: ವರ್ಷದ ಹಿಂದೆ ಎಟಿಎಂ ಕಾರ್ಡ್‌ ನಂಬರ್‌ ಹೇಳಿ ಹಣ ಕಳೆದುಕೊಂಡವರು ಮತ್ತೆ ಮತ್ತೆ ಹಣ ಕಳೆದುಕೊಂಡು ಬಕರಾಗಳಾಗುತ್ತಿದ್ದಾರೆ. ಇಂಥ ಎರಡು ದೂರುಗಳು ಮಂಗಳೂರಿನ ಸೈಬರ್‌ ಪೊಲೀಸ್‌ ಠಾಣೆಗೆ ಇತ್ತೀಚೆಗೆ ಬಂದಿವೆ.

ಕಳೆದ ಅಕ್ಟೋಬರ್‌ನಲ್ಲಿ ಸೈಬರ್‌ ಅಪರಾಧ ಪೊಲೀಸ್‌ ಠಾಣೆ ಸ್ಥಾಪನೆ ಆದ ಬಳಿಕ ಸುಮಾರು 80 ಪ್ರಕರಣಗಳು ದಾಖಲಾಗಿವೆ. ಈ ವರ್ಷದ ಜು. 6ರಿಂದ ಆ. 3ರ ನಡುವೆ 2 ಕೇಸುಗಳು ದಾಖಲಾಗಿವೆ. ಬಹುಮಾನ ಬಂದಿದೆ, ಲಾಟರಿಯಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ; ವೈವಾಹಿಕ ಸಂಬಂಧ, ವಿದೇಶದಲ್ಲಿ ಉದ್ಯೋಗಾವಕಾಶದ ಆಮಿಷ ತೋರಿಸಿ ವಂಚನೆ, ಒಟಿಪಿ ನಂಬರ್‌ ಪಡೆದು ಹಣ ಡ್ರಾ, ಬ್ಯಾಂಕ್‌ ಖಾತೆ ಹ್ಯಾಕ್‌ ಮಾಡಿ ಮೋಸ ಪ್ರಕರಣಗಳು ನಡೆಯುತ್ತಲೇ ಇವೆ. ಪ್ರತಿನಿತ್ಯ ಕನಿಷ್ಠ ಒಬ್ಬರಾದರೂ ಮೋಸ ಹೋಗುತ್ತಿದ್ದು, ಈ ಪೈಕಿ ಬಹುತೇಕ ಮಂದಿ ದೂರು ಕೊಡುವುದಿಲ್ಲ. 

ಮೋಸ ಹೋಗುವರಲ್ಲಿ ಬಹಳಷ್ಟು ಮಂದಿ ಸುಶಿಕ್ಷಿತರೇ ಆಗಿರುತ್ತಾರೆ ಹಾಗೂ ಅನಾಮಧೇಯ ಕರೆ ಅಥವಾ ಎಸ್‌ಎಂಎಸ್‌ಗಳಿಗೆ ಮಾರು ಹೋಗಿ ಆಧಾರ್‌/ ಒಟಿಪಿ ನಂಬ್ರ ನೀಡಿ ಬಕರಾಗಳಾಗುತ್ತಿದ್ದಾರೆ. ಕೆಲವರು ಅತ್ಯಾಸೆಗೆ ಬಲಿಯಾಗಿ ಮತ್ತೆ ಮತ್ತೆ ಹಣ ಕಳುಹಿಸಿ ವಂಚಿಸಲ್ಪಡುತ್ತಿರುವುದು ವಿಶೇಷ. ಐಟಿ ಇಲಾಖೆಯ ಹೆಸರಿನಲ್ಲಿ ಸಂದೇಶ ಕಳುಹಿಸಿ ಹಣವಂತರ ಬ್ಯಾಂಕ್‌ ಖಾತೆ ಮಾಹಿತಿ ಸಂಗ್ರಹಿಸುತ್ತಾರೆ ಎನ್ನುವುದು ಈಗ ಬೆಳಕಿಗೆ ಬಂದ ಹೊಸ ವಿಚಾರ.
ಜೂನ್‌, ಜುಲೈ ಐಟಿ ರಿಟರ್ನ್ಸ್ ಸಲ್ಲಿಸುವ ಅವಧಿಯಾಗಿದ್ದು, ವಂಚಕರು ಇದರ ಪ್ರಯೋಜನ ಪಡೆಯಲು ಹವಣಿಸಿದ್ದಾರೆ. ಐಟಿ ಇಲಾಖೆಯವರು ಎಂದು ನಂಬಿಸಿ ರಿಟರ್ನ್ಸ್ ಸಲ್ಲಿಸುವಂತೆ ಸಂದೇಶ ಕಳುಹಿಸುತ್ತಾರೆ. ಇದು ಸತ್ಯ ಎಂದೇ ನಂಬುವ ಕೆಲವರು ಗೌಪ್ಯ ವಿವರ ನೀಡಿ ಮೋಸ ಹೋಗಿದ್ದಾರೆ. 

ಕೋಲ್ಕತ್ತಾಕ್ಕೆ ಹೋದರೂ ಪ್ರಯೋಜನವಿಲ್ಲ
ಅನಾಮಧೇಯ ವ್ಯಕ್ತಿಗಳು ಪಶ್ಚಿಮ ಬಂಗಾಲ, ಅಸ್ಸಾಂ ಉತ್ತರ ಭಾರತದ ರಾಜ್ಯಗಳಲ್ಲಿದ್ದುಕೊಂಡು ಈ ರೀತಿಯ ವಂಚನೆ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ. ಮಂಗಳೂರಿನ ಸೈಬರ್‌ ಅಪರಾಧ ಠಾಣೆಯ ಇನ್ಸ್‌ಪೆಕ್ಟರ್‌ ಸವಿತೃತೇಜ ನೇತೃತ್ವದ ತಂಡವನ್ನು ಮಂಗಳೂರಿನ ಪೊಲೀಸ್‌ ಕಮಿಷನರ್‌ ಇತ್ತೀಚೆಗೆ ಕೊಲ್ಕತ್ತಾಕ್ಕೆ ಕಳುಹಿಸಿದ್ದರು. ತಂಡ 9 ದಿನಗಳ ಕಾಲ ಕೊಲ್ಕತ್ತಾದ ವಿವಿಧ ಭಾಗಗಳಲ್ಲಿ ಸುತ್ತಾಡಿ ಅಲ್ಲಿನ ಪೊಲೀಸರ ಸಹಾಯದಿಂದ ತನಿಖೆ ನಡೆಸಿದರೂ ಆರೋಪಿಗಳ ಸುಳಿವು ಲಭ್ಯವಾಗದೆ ಮರಳಿದೆ. 

ಅನಾಮಧೇಯ ವ್ಯಕ್ತಿಗಳ ಕರೆಯ ಜಾಡು ಹಿಡಿದು ಇಲ್ಲಿನ ಪೊಲೀಸರನ್ನು ಕೋಲ್ಕತಾಗೆ ಕಳುಹಿಸಿದರೂ ಪ್ರಯೋಜನವಾಗಿಲ್ಲ. ಕರೆ ಮಾಡಿ ಹಣ ಎಗರಿಸುವವರು ಮೊಬೈಲ್‌ ಸಿಮ್‌ ಎಸೆದು ಬೇರೆ ಸಿಮ್‌ ಉಪಯೋಗಿಸುತ್ತಾರೆ. ಸ್ಥಳೀಯ ಅಂಚೆ ಕಚೇರಿಯ ಪೋಸ್ಟ್‌ಮ್ಯಾನ್‌ ಜತೆಗೂ ಸಂಪರ್ಕ ಇರಿಸಿಕೊಂಡಿರುವುದು ತನಿಖೆಯಿಂದ ಗೊತ್ತಾಗಿದೆ. ನಾಗರಿಕರಿಗೆ ಸೈಬರ್‌ ವಂಚನೆ ಬಗ್ಗೆ ಜಾಗೃತಿ ಮೂಡಿಸುವುದೇ ಏಕೈಕ‌ ಪರಿಹಾರ.
ಟಿ.ಆರ್‌. ಸುರೇಶ್‌, ಪೊಲೀಸ್‌ ಕಮಿಷನರ್‌ 

ಜನ ಈ ರೀತಿ ಮೋಸ ಹೋಗುವುದಕ್ಕೆ ಅತಿ ಆಸೆಯೇ ಕಾರಣ. ಸುಶಿಕ್ಷಿತರು, ತಿಳಿದವರೇ ಮೋಸ ಹೋಗುತ್ತಾರೆ. ಅನಾಮಧೇಯ ಸಂದೇಶಗಳಿಗೆ ಅಥವಾ ಮೊಬೈಲ್‌ ಕರೆಗೆ ಮಾರು ಹೋಗಿ ಹಿಂದೆ ಮುಂದೆ ನೋಡದೆ ಮೊದಲು ಸ್ವಲ್ಪ ಹಣ ಕಳುಹಿಸುತ್ತಾರೆ. ಮತ್ತೆ ಮತ್ತೆ ಕರೆ ಬಂದಾಗ ಪುನಃ ಕಳುಹಿಸುತ್ತಾರೆ. ಕೊನೆಗೆ ಮೋಸ ಹೋಗಿರುವುದು ಅರಿವಾದಾಗ ಪೊಲೀಸ್‌ ಠಾಣೆಗೆ ದೂರು ಕೊಡಲು ಹೋಗುತ್ತಾರೆ. 
ಸವಿತೃತೇಜ, ಸೈಬರ್‌ ಠಾಣೆ ಇನ್ಸ್‌ಪೆಕ್ಟರ್‌

*ಹಿಲರಿ ಕ್ರಾಸ್ತಾ 

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.