ಭದ್ರಾ ಡ್ಯಾಂನಲ್ಲಿ ಸೌಕರ್ಯ ಕೊರತೆ!


Team Udayavani, Aug 6, 2018, 4:49 PM IST

shiv-1.jpg

ಶಿವಮೊಗ್ಗ: ಪ್ರವಾಸಿಗರಿಂದ ತುಂಬಿ ತುಳುಕುತ್ತಿರುವ ಭದ್ರಾ ಜಲಾಶಯ ಭದ್ರತೆ, ಸೌಕರ್ಯಗಳಿಲ್ಲದೆ ನರಕ ದರ್ಶನ ಮಾಡಿಸುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದರೂ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ರಾಜಕಾರಣಿಗಳು ಮತ್ತು ವಿಐಪಿಗಳಿಗಷ್ಟೇ ಭದ್ರತೆ ಎನ್ನುವಂತಾಗಿದ್ದು ಬಾಗಿನ ಬಿಡಲು ಬರುವ ಕಾರುಗಳನ್ನು ಕಾಯುವುದಷ್ಟೇ ಪೊಲೀಸರ ಕೆಲಸವಾಗಿದೆ.

ದಾವಣಗೆರೆ ಜಿಲ್ಲೆ, ತರೀಕೆರೆ, ಭದ್ರಾವತಿಯಿಂದ ನಿತ್ಯ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದಾರೆ. ಭಾನುವಾರವಂತೂ ಕಿಕ್ಕಿರಿದು ಜನ ಸೇರಿರುತ್ತಾರೆ. ಗೇಟ್‌ ನಿಂದ ನೀರು ಹೊರಬಿಟ್ಟಿರುವುದರಿಂದ ಫೋಟೋ, ಸೆಲ್ಫಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಡ್ಯಾಂ ಒಳಗೆ ಸುಂದರ ಪ್ರಕೃತಿ ಇರುವುದರಿಂದ ನೀರಿಗಿಳಿದು ಸೆಲ್ಫಿ
ತೆಗೆದುಕೊಳ್ಳುತ್ತಿದ್ದಾರೆ. ಕೆಲ ಹುಡುಗರು ಅಪಾಯಕಾರಿ ಜಾಗಗಳಲ್ಲಿ ನಿಂತು ಫೋಟೋ ತೆಗೆದುಕೊಳ್ಳುತ್ತಿದ್ದು ಅವರಿಗೆ
ಕಡಿವಾಣ ಹಾಕುವವರು ಯಾರೂ ಇಲ್ಲದಂತಾಗಿದೆ. ಕೆಲ ಕಡೆ ಕಲ್ಲುಬಂಡೆಗಳು ಪಾಚಿಗಟ್ಟಿದ್ದು ಜಾರಿ ಬೀಳುವ ಆತಂಕ ಕೂಡ ಇದೆ. ಶನಿವಾರ ಇದೇ ರೀತಿ ಸಾಹಸ ಮಾಡಲು ಹೋದ ವ್ಯಕ್ತಿಯೊಬ್ಬ ಕಾಲುಜಾರಿ ಬಿದ್ದು ಕೈ ಮುರಿದುಕೊಂಡ ಘಟನೆ ನಡೆದಿದೆ.

ಬೇಲಿ ಇಲ್ಲ: ಜಲಾಶಯದ ಬಲಭಾಗದಿಂದ ಗೇಟ್‌ನಿಂದ ನೀರು ಹೊರಬಿಟ್ಟಿರುವುದರನ್ನು ನೋಡಲು ಪ್ರಶಸ್ತವಾದ ಸ್ಥಳವಾಗಿದೆ. ಆದರೇ ಈ ಭಾಗದಲ್ಲ ಬೇಲಿ ಇಲ್ಲ. ಈ ಭಾಗದಲ್ಲಿ ಜನರು 40 ಅಡಿಗೂ ಹೆಚ್ಚು ಎತ್ತವಿರುವ ಕಟ್ಟೆ ಪಕ್ಕದಲ್ಲೇ ನಿಂತು ಫೋಟೋ ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ. ಎಲ್ಲರಿಗಿಂತ ಉತ್ತಮ ಫೋಟೋ ಬರಲಿ ಎಂಬ ಉದ್ದೇಶದಿಂದ ರಿಸ್ಕ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಜಲಾಶಯದ ಎಡಭಾಗದಲ್ಲೂ ಅಲ್ಪ ಸ್ವಲ್ಪ ಬೇಲಿ ಇರುವುದು ಬಿಟ್ಟರೆ ಅಲ್ಲೂ ಭದ್ರತೆ ಇಲ್ಲ.

ಟಾಯ್ಲೆಟ್‌ ಇಲ್ಲ: ಜಲಾಶಯದ ಒಳಗೆ ಊಟ, ತಿಂಡಿ, ತಿನಿಸುಗಳನ್ನು ಕಟ್ಟಿಕೊಂಡು ಸಂಸಾರ ಸಮೇತ ಬರುವವರಿಗೇನೂ ಕಡಿಮೆ ಇಲ್ಲ. 4 ವರ್ಷ ನಂತರ ಡ್ಯಾಂ ಭರ್ತಿಯಾಗಿರುವುದರಿಂದ ನಿರೀಕ್ಷೆಗಿಂತಲೂ ಹೆಚ್ಚಿನ ಬರುತ್ತಿದ್ದಾರೆ. ಇಷ್ಟೆಲ್ಲಾ ಜನಕ್ಕೆ ಒಂದೇ ಒಂದು ಶೌಚಾಲಯ ಇಲ್ಲ. ಡ್ಯಾಂ ಒಳಭಾಗ ಹಾಗೂ ಹೊರಭಾಗದಲ್ಲೂ ಇಲ್ಲ.
ಐಬಿ ಕಟ್ಟಡ ವಿಐಪಿಗಳಿಗೆ ಮಾತ್ರ ಸೀಮಿತವಾಗಿದೆ.

ಇದರಿಂದ ಜನ ಬಯಲನ್ನೇ ಆಶ್ರಯಿಸಿದ್ದಾರೆ. ಜಲಬಾಧೆ ತಡೆಯದೇ ಸಾರ್ವಜನಿಕರ ಎದುರೇ ಮೂತ್ರ ವಿಸರ್ಜನೆ
ಮಾಡುವ ದೃಶ್ಯಗಳು ಸಾಮಾನ್ಯವಾಗಿದೆ. ಇನ್ನು ಬೇಲಿ ಮರೆ ಹೋಗಲೂ ಅವಕಾಶವಿಲ್ಲದಂತಾಗಿದೆ.

ಲೋಕಸಭೆ ಚುನಾವಣೆ ಹಾಗೂ ಬಾಗಿನ ಪ್ರಕೃತಿ ಕೃಪೆಯಿಂದ ಭರ್ತಿಯಾಗಿರುವ ಜಲಾಶಯಕ್ಕೆ ಬಾಗಿನ ಅರ್ಪಿಸುವ ರಾಜಕೀಯ ಜೋರಾಗಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮುಖಂಡರು ಪ್ರತ್ಯೇಕವಾಗಿ ಆಗಮಿಸಿ ಬಾಗಿನ ಅರ್ಪಿಸುವ ಜತೆಗೆ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ. ಜಲಾಶಯ ತೋರಿಸುವ ನೆಪದಲ್ಲಿ ಬಸ್‌ ವ್ಯವಸ್ಥೆ ಮಾಡಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿಸಿ ಅವರಿಗೆ ಊಟ ಹಾಕಿಸುವ ಮೂಲಕ ಮತ ಹಾಕುವಂತೆ ಪ್ರೇರೇಪಿಸಲಾಗುತ್ತಿದೆ. ಮೊದಲು ದಾವಣಗೆರೆ ಕಾಂಗ್ರೆಸ್‌ ಶಾಸಕರು, ನಂತರ ಬಿಜೆಪಿ ಶಾಸಕರು ಸಂಸದರು ಆಗಮಿಸಿ ಬಾಗಿನ ಬಿಟ್ಟು ಕಾರ್ಯಕ್ರಮ ನಡೆಸಿ ಲೋಕಸಭೆ ಚುನಾವಣೆಗೆ ರಣಕಹಳೆ ಊದಿದರು

ಗೇಟ್‌ನಿಂದ ನೀರು ಬಿಟ್ಟಿರುವುದರಿಂದ ಫೋಟೋ ತೆಗೆದುಕೊಳ್ಳಲು ತುಂಬಾ ಜನ ಬರುತ್ತಾರೆ. ಆದರೆ ಇಲ್ಲಿ ಯಾಮಾರಿದರೆ ಕೆಳಗೆ ಬೀಳ್ಳೋದು ಗ್ಯಾರಂಟಿ. ಇಷ್ಟೊಂದು ಜನ ಬಂದರೂ ಬೇಲಿ ಮಾಡಿಲ್ಲ. ಫೋಟೋ ತೆಗೆಸಿಕೊಳ್ಳಲು ಒಂದೇ ಒಂದು ಸ್ಥಳವಿಲ್ಲ.
 ಅನಿಲ್‌, ಪ್ರವಾಸಿಗ

ಬಹಳ ವರ್ಷ ಆಗಿತ್ತು ಡ್ಯಾಂ ತುಂಬಿ. ಅದಕ್ಕೆ ನೋಡಲು ಬಂದೆವು. ಇಲ್ಲಿ ಯಾವ ವ್ಯವಸ್ಥೆಯೂ ಸರಿ ಇಲ್ಲ. ಕೆಲವರು ರಸ್ತೆ ಪಕ್ಕವೇ ಮೂತ್ರ ವಿಸರ್ಜನೆ ಮಾಡುತ್ತಿರುತ್ತಾರೆ. ನಮಗೆ ಮುಜುಗರ ಆದರೂ ಸಹಿಸಿಕೊಳ್ಳಬೇಕಿದೆ. ಇಷ್ಟು ದೊಡ್ಡ ಡ್ಯಾಂನಲ್ಲಿ ಒಂದೇ ಒಂದು ಸಾರ್ವಜನಿಕ ಶೌಚಾಲಯ ಇಲ್ಲ
 ವಿದ್ಯಾ, ಪ್ರವಾಸಿ

„ಶರತ್‌ ಭದ್ರಾವತಿ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.