ಮುಂಡರಗಿ: ಶರಣರ ಚರಿತಾಮೃತ ಪ್ರವಚನ ಮಂಗಲ
Team Udayavani, Aug 6, 2018, 5:12 PM IST
ಮುಂಡರಗಿ: ಇಳಕಲ್ನ ಮಹಾಂತ ಜೋಳಿಗೆಯ ಸಾಮಾಜಿಕ ಹರಿಕಾರ ಡಾ| ಮಹಾಂತ ಶಿವಯೋಗಿಗಳು ತಾಯಿಯಂತಹ ಅಂತಃಕರಣ ಹೊಂದಿದ್ದರು ಎಂದು ಡಾ| ತೋಂಟದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಪಟ್ಟಣದ ಜ| ತೋಂಟದಾರ್ಯ ಮಠದಲ್ಲಿ ನಡೆದ ಶರಣರ ಚರಿತಾಮೃತ ಪ್ರವಚನ ಮಂಗಲ, ಮಾಸಿಕ ಶಿವಾನುಭವ, ಲಿಂ| ಡಾ| ಮಹಾಂತ ಶಿವಯೋಗಿಗಳ ಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಮಹಾಂತ ಶಿವಯೋಗಿಗಳು ಕೋಟಿಗೊಬ್ಬರಂತೆ ಸಿಗುತ್ತಾರೆ. ಬಸವ ತತ್ವನಿಷ್ಠರಾಗಿ ಯಾವುದೇ ಸಂದರ್ಭದಲ್ಲಿ ರಾಜಿಮಾಡಿಕೊಳ್ಳದೇ ಸಾಮಾಜಿಕ ಕಳಕಳಿ ಹೊಂದಿದ್ದರು. ಬಸವ ಪರಂಪರೆಯನ್ನು ಮುಂದುವರಿಸಿಕೊಂಡು ಬಂದರು. ಶಿಷ್ಯರನ್ನು ಮಮತಾಮೂರ್ತಿಯಂತೆ ಬೆಳೆಸುವಲ್ಲಿ ಪ್ರಮುಖ ಪತ್ರ ವಹಿಸಿದ್ದರು. ಅಲ್ಲದೇ ಒಂದು ಕಾಲದ ಜನಾಂಗವನ್ನು ಕಟ್ಟುವ ಕೆಲಸವನ್ನು ಮಹಾಂತ ಸ್ವಾಮೀಜಿ ಮಾಡಿದ್ದರು ಎಂದು ಜ| ತೋಂಟದ ಸಿದ್ದಲಿಂಗ ಸ್ವಾಮೀಜಿ ನುಡಿದರು. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ವಿರಕ್ತ ಮಠಗಳ ಪರಂಪರೆಯು ಜಾತ್ಯತೀತ್ಯ ನಿಲುವು, ಸಮಾನತೆಯ ತತ್ವಗಳು ಜನರನ್ನು ಸೆಳೆಯುತ್ತವೆ. ಬಸವ ತತ್ವದ ಅರಿವು, ಆಚಾರ, ಅನುಭಾವ ಹೆಜ್ಜೆಯನ್ನು ಜೀವನದಲ್ಲಿ ಆಚರಣೆಗೆ ಮಹಾಂತ ಸ್ವಾಮೀಜಿ ತಂದಿದ್ದರು ಎಂದ ಅವರು, ಬಸವತತ್ವ ಉಳಿಸುವ ಸವಾಲು ನಮ್ಮೆದುರಿಗೆ ಇದೆ. ಬಸವಧರ್ಮ ಪ್ರಚಾರಕರ ಕೊರತೆಯು ಎದ್ದು ಕಾಣುತ್ತಿದೆ. ಬಸವ ತತ್ವದ ಆಚಾರ, ಸಂಸ್ಕಾರವನ್ನು ಮಕ್ಕಳಿಗೆ ಕಲಿಸಲು ಮುಂದಾಗಬೇಕು ಎಂದರು.
ಇಳಕಲ್ನ ಗುರು ಮಹಾಂತ ಸ್ವಾಮೀಜಿ ಮಾತನಾಡಿ, ಬಸವತತ್ವ ಉಳಿಸಲು ಪ್ರತಿಯೊಬ್ಬರೂ ಎದೆಗೊಟ್ಟು ಕೆಲಸ ಮಾಡುವ ಅಗತ್ಯವಿದೆ. ಬಸವದಿ ಪ್ರಮಥರ ಆಶಯವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ಎಸ್.ಎಸ್. ಪಟ್ಟಣಶೆಟ್ಟರ್, ಮುದುಗಲ್ನ ಮಹಾಂತ ಸ್ವಾಮೀಜಿ ಮಾತನಾಡಿದರು. ಮಾಜಿ ಸಚಿವ ಎಸ್.ಎಸ್. ಪಾಟೀಲ, ಶ್ರೀನಿವಾಸ ಉಪ್ಪಿನಬೆಟಗೇರಿ, ಡಾ| ಶಿವಕುಮಾರ ಕುಬಸದ, ಸೊಲಭಣ್ಣ ಜೋಬಾಳಿ, ಎಚ್. ವಿರುಪಾಕ್ಷಗೌಡ, ಸೋಮೇಶ್ವರ ಉಪ್ಪಿನಬೆಟ್ಟಗೇರಿ, ಉಮೇಶಯ್ಯ ಹಿರೇಮಠ, ವಿಶ್ವನಾಥ ಉಳ್ಳಾಗಡ್ಡಿ, ಶಿವಾನಂ ಕಡಪಟ್ಟಿ, ಗಿರೀಶಗೌಡ ಪಾಟೀಲ ಮತ್ತಿತರರು ಇದ್ದರು. ಕೊಟ್ರೇಶ ಅಂಗಡಿ, ದ್ರುವಕುಮಾರ ಹೊಸಮನಿ, ನಾಗೇಶ ಹುಬ್ಬಳ್ಳಿ, ಪಾಲಾಕ್ಷಿ ಗಣದಿನ್ನಿ, ಆನಂದಗೌಡ ಪಾಟೀಲ, ಈಶ್ವರಪ್ಪ ಬೆಟಗೇರಿ ಇದ್ದರು. ಎ.ಕೆ. ಮುಲ್ಲಾನವರ ಸ್ವಾಗತಿಸಿ, ನಿರೂಪಿಸಿದರು. ಮುಂಡರಗಿ: ಜ| ತೋಂಟದಾರ್ಯ ಮಠದಲ್ಲಿ ನಡೆದ ಪ್ರವಚನ ಮಂಗಲ, ಡಾ| ಮಹಾಂತ ಶಿವಯೋಗಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ಡಾ| ತೋಂಟದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು