ಕೆಜಿಎಫ್ಗೆ ತಮನ್ನಾ
Team Udayavani, Aug 6, 2018, 5:59 PM IST
“ಕೆಜಿಎಫ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ತಿಗೊಂಡು, ಇನ್ನೊಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ. ಅದೂ ಮುಗಿದು ಬಿಟ್ಟರೆ, ಚಿತ್ರೀಕರಣ ಸಂಪೂರ್ಣವಾದಂತೆ. ಆದರೆ, ಆ ಹಾಡಿಗೆ ಯಾರನ್ನು ಕರೆತರಬೇಕು, ಯಾರಿಂದ ಕುಣಿಸಬೇಕು ಎಂದು ಚಿತ್ರತಂಡ ತಲೆ ಕೆಡಿಸಿಕೊಂಡಿತ್ತು. ಈಗ ಆ ಗೊಂದಲ ಬಗೆಹರಿದಿದ್ದು, ಯಶ್ ಜೊತೆಗೆ ಹೆಜ್ಜೆ ಹಾಕುವುದಕ್ಕೆ ಟಾಲಿವುಡ್ ನಟಿ ತಮನ್ನಾ ಭಾಟಿಯಾ ಬರುತ್ತಿದ್ದಾರೆ.
ಹೌದು, “ಕೆಜಿಎಫ್’ ಚಿತ್ರದಲ್ಲಿ ರೆಟ್ರೋ ಹಾಡಿನ ಚಿತ್ರೀಕರಣ ಬಾಕಿ ಇದ್ದು, ಆ ಹಾಡಿನಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಅದಕ್ಕೆ ಸರಿಯಾಗಿ ನಾಲ್ವರು ಜನಪ್ರಿಯ ನಟಿಯರ ಹೆಸರು ಕೇಳಿ ಬಂದಿತ್ತು. ತಮನ್ನಾ ಭಾಟಿಯಾ ಜೊತೆಗೆ ಕಾಜಲ್ ಅಗರ್ವಾಲ್, ಲಕ್ಷ್ಮೀ ರೈ ಮತ್ತು ನೂರಾ ಫತೇಹಿ ಹೆಸರು ಕೇಳಿಬಂದಿತ್ತು. ಈ ನಾಲ್ವರಲ್ಲಿ ತಮನ್ನಾ ಭಾಟಿಯಾ ಫೈನಲ್ ಆಗಿದ್ದು, ಸದ್ಯದಲ್ಲೇ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಇದೇ ವಾರ ಈ ಹಾಡಿನ ಚಿತ್ರೀಕರಣ ನಡೆಯಲಿದ್ದು, ಮೂರು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಈ ಹಾಡಿಗೆಂದೇ ವಿಶೇಷವಾದ ಸೆಟ್ ನಿರ್ಮಿಸಲಾಗುತ್ತಿದ್ದು, ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಅಂದಹಾಗೆ, “ಪರೋಪಕಾರಿ’ ಚಿತ್ರಕ್ಕೆ ಎಲ್.ಆರ್. ಈಶ್ವರಿ ಅವರು ಹಾಡಿದ “ಜೋಕೆ ನಾನು ಬಳ್ಳಿಯ ಮಿಂಚು, ಕಣ್ಣು ಕತ್ತಿಯ ಅಂಚು …’ ಹಾಡನ್ನು ಈ ಚಿತ್ರಕ್ಕಾಗಿ ರೀಮಿಕ್ಸ್ ಮಾಡಲಾಗುತ್ತಿದ್ದು, ಆ ಹಾಡಿಗೆ ತಮನ್ನಾ ಹೆಜ್ಜೆ ಹಾಕುತ್ತಿದ್ದಾರೆ.
ತಮನ್ನಾ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ ನಿಖಿಲ್ ಕುಮಾರ್ ಅಭಿನಯದ “ಜಾಗ್ವಾರ್’ ಚಿತ್ರದ ಐಟಂ ಡ್ಯಾನ್ಸ್ವೊಂದರಲ್ಲೂ ಕಾಣಿಸಿಕೊಂಡಿದ್ದರು. ಈಗ ಎರಡನೆಯ ಬಾರಿಗೆ ಕನ್ನಡ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. “ಕೆಜಿಎಫ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಹ ಬಹುತೇಕ ಮುಗಿದಿದ್ದು, ಸೆಪ್ಟೆಂಬರ್ ಕೊನೆಯ ಹೊತ್ತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.
“ಕೆಜಿಎಫ್’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ ಪ್ರಶಾಂತ್ ನೀಲ್. ಯಶ್ ಜೊತೆಗೆ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದು, ಮಿಕ್ಕಂತೆ ಅಚ್ಯುತ್ ಕುಮಾರ್, ವಸಿಷ್ಠ ಸಿಂಹ ಮುಂತಾದವರು ನಟಿಸುತ್ತಿದ್ದಾರೆ. ರವಿ ಬಸ್ರೂರು ಸಂಗೀತ ಮತ್ತು ಭುವನ್ ಗೌಡ ಛಾಯಾಗ್ರಹಣವಿರುವ ಈ ಚಿತ್ರವನ್ನು ಹೊಂಬಾಳೆ ಪ್ರೊಡಕ್ಷನ್ಸ್ನಡಿ ವಿಜಯ್ಕುಮಾರ್ ಕಿರಗಂದೂರು ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.