ವಾರ್ಡ್‌ ವಿಂಗಡಣೆ ವಿರುದ್ಧಹೋರಾಟ


Team Udayavani, Aug 7, 2018, 10:33 AM IST

gul-2.jpg

ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ್‌ಗಳ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಮಾಡುವಲ್ಲಿ ಭಾರಿ ಅನ್ಯಾಯವಾಗಿರುವ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಎಚ್ಚರಿಕೆ ನೀಡಿದರು.

ನಗರದ ಜಗತ್‌ ವೃತ್ತದಲ್ಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಹೊಸ ಕಟ್ಟಡದಲ್ಲಿ ಪಾಲಿಕೆ ಪ್ರತಿಪಕ್ಷದ ನಾಯಕ
ಆರ್‌.ಎಸ್‌. ಪಾಟೀಲ ಅವರ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಮೀಸಲಾತಿಯಲ್ಲಿ ಅನ್ಯಾಯವಾಗಿರುವ ಜತೆಗೆ ವಾರ್ಡ್‌ಗಳನ್ನು ಮನಸ್ಸಿಗೆ ಬಂದಂತೆ ಮರುವಿಂಗಡಣೆ ಮಾಡಿರುವುದರಿಂದ ಎಲ್ಲರೂ ಹೋರಾಟಕ್ಕೆ ಮುಂದಾಗಬೇಕು. ಇದಕ್ಕೆ ಸಹಕಾರ ನೀಡುತ್ತೇನೆ ಎಂದರು.

ಬಿಜೆಪಿಯೇ ಅನುದಾನ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ
ಆಗಿದ್ದರೆ, ಕಲಬುರಗಿ ಪಾಲಿಕೆಗೆ 500 ಕೋಟಿ ರೂ. ಅನುದಾನ ಬರುತ್ತಿತ್ತು. ಈ ಕುರಿತು ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಜತೆಗೆ ಈ ಹಿಂದೆಯೂ ಮುಖ್ಯಮಂತ್ರಿ ಆಗಿದ್ದಾಗ 100 ಕೋ.ರೂ. ಅನುದಾನ ನೀಡಿದ್ದರು.

ಮುಂದಿನ ದಿನಗಳಲ್ಲಿ ಬಿಜೆಪಿಯ ಎಲ್ಲರೂ ಸಂಘಟಿತ ಪ್ರಯತ್ನ ಮಾಡಿ, ಪಾಲಿಕೆಯಲ್ಲಿ ಅಧಿಕಾರಕ್ಕೆ ತರಲು ಪಣತೊಟ್ಟು ಪಕ್ಷದ ಸಂಘಟನೆ ಮಾಡಬೇಕು. ಬೇರು ಮಟ್ಟದಿಂದಲೇ ಕೆಲಸ ಈಗಿನಿಂದಲೇ ಆರಂಭಿಸಬೇಕು ಎಂದರು. 

ಶ್ರೀನಿವಾಸ ಸರಡಗಿಯ ಮಹಾಲಕ್ಷ್ಮೀ ಶಕ್ತಿ ಪೀಠದ ಪೂಜ್ಯರಾದ ಅಪ್ಪಾರಾವದೇವಿ ಮುತ್ಯಾ ಸಾನ್ನಿಧ್ಯ ವಹಿಸಿ ಆರ್ಶಿವಚನ ನೀಡಿದರು. ಶಾಸಕರಾದ ಬಸವರಾಜ ಮತ್ತಿಮೂಡ, ಬಿಜೆಪಿ ರಾಜ್ಯ ಸಹ ವಕ್ತಾರ ಶಶೀಲ ನಮೋಶಿ, ಯುವ ಮುಖಂಡ ಚಂದು ಪಾಟೀಲ ಮಾತನಾಡಿ, ಪ್ರತಿಪಕ್ಷದ ಸ್ಥಾನವನ್ನು ಆರ್‌.ಎಸ್‌. ಪಾಟೀಲ ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. 

ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಆಡಳಿತ ನಡೆಸುವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ಕೆಲಸ ಇನ್ನಷ್ಟು
ಚುರುಕುಗೊಳಿಸಿ ಎಂದರು. ಪ್ರತಿಪಕ್ಷದ ನಾಯಕ ಆರ್‌.ಎಸ್‌.ಪಾಟೀಲ ಶ್ರೀನಿವಾಸ ಸರಡಗಿ ಮಾತನಾಡಿ, ಪಾಲಿಕೆ ಸದಸ್ಯರು ಹಾಗೂ ನಗರದ ಜನರು ಮಹತ್ವದ ಹೊಣೆ ನೀಡಿದ್ದಾರೆ. ಅವರ ನಂಬಿಕೆ ಉಳಿಸಿಕೊಂಡು ಸಾಧ್ಯವಾದಷ್ಟು
ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಹೇಳಿದರು.

ಪಾಲಿಕೆ ಸದಸ್ಯರಾದ ಶಿವಾನಂದ ಪಾಟೀಲ ಅಷ್ಟಗಿ, ಪ್ರಭುಲಿಂಗ ಹಾದಿಮನಿ, ವಿಶಾಲ್‌ ದರ್ಗಿ, ರಮಾನಂದ
ಉಪಾದ್ಯಾಯ, ರಾಜು ವಾಡೇಕರ್‌, ಮದನ ಬಂಡೆ, ಶಿವು ಸ್ವಾಮಿ, ಪರಶುರಾಮ ನಸಲವಾಯಿ, ಈರಣ್ಣ ಹೊನ್ನಳ್ಳಿ,
ಜಗದೇವಿ, ವಿಜಯಲಕ್ಷ್ಮೀ ಗೊಬ್ಬೂರಕರ್‌ ರವಿ ಪಾಟೀಲ, ಮಲ್ಲಿಕಾರ್ಜುನ ಪಾಟೀಲ ಓಕಳಿ, ಮಂಜು ರೆಡ್ಡಿ ಮತ್ತಿತರರು ಇದ್ದರು. ಹಿರಿಯ ಪತ್ರಕರ್ತ ಗಣೇಶಕುಮಾರ, ಹೋರಾಟಗಾರರಾದ ಸಚಿನ್‌ ಫ‌ರಹತಾಬಾದ, ಮಂಜುನಾಥ
ನಾಲವಾರಕರ್‌ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.