ಶಿರ್ವ ಪಾಂಬೂರು: ಬೋನಿಗೆ ಬಿದ್ದ ಚಿರತೆ
Team Udayavani, Aug 7, 2018, 10:59 AM IST
ಶಿರ್ವ : ಕಳೆದ ಹಲವಾರು ದಿನಗಳಿಂದ ಪಾಂಬೂರು ಪರಿಸರದಲ್ಲಿ ಜನರನ್ನು, ಜಾನುವಾರುಗಳನ್ನು ಭಯಭೀತಗೊಳಿಸಿದ್ದ ಚಿರತೆಯೊಂದು ಮಂಗಳವಾರ ಬೆಳಿಗ್ಗೆ ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದೆ. ಪಡುಬೆಳ್ಳೆ ಗ್ರಾಮದ ಪಾಂಬೂರು ನಿವಾಸಿ ಜಾರ್ಜ್ ಫ್ಲೊರಿನ್ ಸಲ್ಡಾನರ ಮನೆಯ ಹತ್ತಿರ ಇಡಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ.
ಕಳೆದ ಕೆಲ ದಿನಗಳಿಂದ ಈ ಪರಿಸರದಲ್ಲಿ ಚಿರತೆ ಕಾಟ ಜೋರಾಗಿತ್ತು. ಸ್ಥಳೀಯ ನಿವಾಸಿ ಭಾಸ್ಕರ ಶೆಟ್ಟಿ ಅವರ ನಾಯಿಯನ್ನು ಮನೆಯವರ ಕಣ್ಣೆದುರೆ ಕೊಂಡೊಗಿದ್ದು ಸ್ಥಳಿಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿತ್ತು. ಚಿರತೆ ಸಮಸ್ಯೆ ಬಗ್ಗೆ ಕೆಲ ದಿನಗಳ ಹಿಂದೆ ಉದಯವಾಣಿಯು ವಿಸ್ತೃತ ವರದಿ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು ಮೂರು ದಿನಗಳ ಹಿಂದೆ ಚಿರತೆ ಹಿಡಿಯಲು ಪಾಂಬೂರು ಪ್ರದೇಶದಲ್ಲಿ ಬೋನು ಇಟ್ಟಿದ್ದರು.
ಕಾರ್ಯಾಚರಣೆಯಲ್ಲಿ ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ, ಉಪ ವಲಯ ಅಧಿಕಾರಿ ದಯನಂದ.ಕೆ, ಬೆಳ್ಳೆ ಅರಣ್ಯ ರಕ್ಷಕ ಗಣಪತಿ ನಾಯಕ್, ಅರಣ್ಯ ವೀಕ್ಷಕ ಪರಶುರಾಮ ಮೇಠಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ