ಕೆಳ ಹಂತದ ಅಧಿಕಾರಿಗಳ ಸಹಕಾರ ಅಗತ್ಯ: ಬಸಣ್ಣ


Team Udayavani, Aug 7, 2018, 3:37 PM IST

1.jpg

ಸಿಂಧನೂರು: ತಾಲೂಕು ಮಟ್ಟದ ಅಧಿಕಾರಿಗಳು ಸಂಪೂರ್ಣವಾಗಿ ಜನರ ಸೇವೆ ಮಾಡಿ ಹೆಸರು ಗಳಿಸಲು ಕೆಳ ಹಂತದ ಅಧಿಕಾರಿಗಳ ಸಹಾಯ ಸಹಕಾರ ಅಗತ್ಯವಾಗಿರುತ್ತದೆ ಎಂದು ತಾಪಂ ಇಒ ಬಸಣ್ಣ ಹೇಳಿದರು. ಸಿಂಧನೂರಿನಿಂದ ಕೂಡ್ಲಗಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರಿ ಕೆಲಸದಲ್ಲಿ ನಿವೃತ್ತಿ ಮತ್ತು ವರ್ಗಾವಣೆ ಕಡ್ಡಾಯವಾಗಿದೆ. ಪ್ರತಿಯೊಬ್ಬ ಅಧಿಕಾರಿಗಳು ಜನರ ಜತೆ ಉತ್ತಮವಾದ ಒಡನಾಟ ಇಟ್ಟುಕೊಂಡು ಸೇವೆಗೆ ಸದಾ ಕಂಕಣಬದ್ಧರಾಗಿರಬೇಕು. ಅಂದಾಗ ಮಾತ್ರ ಜನರು ನಮ್ಮನ್ನು ಗುರುತಿಸುತ್ತಾರೆ. 

ತಾವು ಸಿಂಧನೂರಿನಲ್ಲಿ ಸೇವೆ ಸಲ್ಲಿಸಿದ್ದು ಮರೆಯಲಾರದಂತದ್ದು. ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲ ಕೆಲಸ ಕಾರ್ಯಗಳಲ್ಲಿ ನನಗೆ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಕೆಲವೊಂದು ವೇಳೆ ಒತ್ತಡದಿಂದ ಕೆಳ ಮಟ್ಟದ ಅಧಿಕಾರಿಗಳಿಗೆ ಏನಾದರೂ ಮಾತನಾಡಿರಬಹುದು. ಯಾರು ಸಹ ಅದು ನನ್ನ ವೈಯಕ್ತಿಕ ಎಂದು ಭಾವಿಸಿಬೇಡಿ. ನನಗೆ ಸಹಕಾರ ನೀಡಿದಂತೆ ಬರುವ ಅಧಿಕಾರಿಗಳಿಗೂ ಸಹಕಾರ ನೀಡಿ. ಎಲ್ಲರೂ ಸೇರಿ ಕೆಲಸ ಮಾಡಿ ಸಿಂಧನೂರು ತಾಪಂಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
 
ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಪವನಕುಮಾರ ಮಾತನಾಡಿ, ಸಿಂಧನೂರಿನ ತಾಪಂ ಇಒ ಆಗಿ ಕೆಲಸ ಮಾಡಿ ಈಗ ವರ್ಗವಾಗುತ್ತಿರುವ ಬಸಣ್ಣ ಅವರು ಬಹಳ ನಿಷ್ಠಾವಂತ ಹಾಗೂ ಜನಪರ ಕಾಳಜಿವುಳ್ಳ ಅಧಿಕಾರಿ. ಸರ್ಕಾರಿ ಕೆಲಸದಲ್ಲಿ ವರ್ಗಾವಣೆ ಅನಿವಾರ್ಯವಾದರೂ ಅವರ ಸೇವೆ ಅಸ್ಮರಣೀಯ ಎಂದು ಹೇಳಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕಂಠಿಪುಡಿ ನರಸಿಂಹರಾಜು ಮಾತನಾಡಿದರು. ರಾಯಚೂರಿನ ಕಾರ್ಯನಿರ್ವಾಹಕ
ಅಭಿಯಂತರ ಬಸವರಾಜ ಪಲ್ಲೇದ, ಗ್ರಾಮೀಣ ಕುಡಿಯುವ ನೀರು ಮತ್ತ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜನಿಯರ್‌ ಹನುಮಂತರೆಡ್ಡಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ದೊಡ್ಡಲಿಂಗಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಮುಖಂಡರಾದ ಸೈಯ್ಯದ್‌ ಯುನೂಸ್‌ ನವಲಿ, ರಾಮಣ್ಣ ತುರ್ವಿಹಾಳ ಸೇರಿದಂತೆ ಪಿಡಿಒಗಳು ಹಾಗೂ ಕಾರ್ಯಾಲಯದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.