ಸಾಮಾಜಿಕ ನ್ಯಾಯ ಅಭಿಯಾನ: ಬಿಜೆಪಿ
Team Udayavani, Aug 8, 2018, 5:30 AM IST
ಹೊಸದಿಲ್ಲಿ: ಇತರ ಹಿಂದುಳಿದ ವರ್ಗಗಳ (ಒಬಿಸಿ) ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡುವ ಮಸೂದೆಗೆ ಸೋಮವಾರ ಸಂಸತ್ತಿನ ಒಪ್ಪಿಗೆ ಸಿಕ್ಕಿದ್ದು ಹಾಗೂ ರಾಜ್ಯಸಭೆಗೆ ಸದ್ಯದಲ್ಲೇ ಚರ್ಚೆಗೆ ಬರಲಿರುವ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಬಲವರ್ಧನೆ ಮಸೂದೆಯು ಲೋಕಸಭೆಯಲ್ಲಿ ಅನುಮೋದನೆಗೊಂಡ ಸವಿನೆನಪಿಗಾಗಿ ‘ಸಾಮಾಜಿಕ ನ್ಯಾಯ ಪಾಕ್ಷಿಕ’ ಹಾಗೂ ‘ಸಾಮಾಜಿಕ ನ್ಯಾಯ ಸಪ್ತಾಹ’ ಎಂಬ ಎರಡು ಅಭಿಯಾನಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ವಿಷಯ ತಿಳಿಸಿದರು.
‘ಸಾಮಾಜಿಕ ನ್ಯಾಯ ಪಾಕ್ಷಿಕ’ ಆಗಸ್ಟ್ 15ರಿಂದ 30ರವರೆಗೆ ಹಾಗೂ “ಸಾಮಾಜಿಕ ನ್ಯಾಯ ಸಪ್ತಾಹ’ವು ಮುಂದಿನ ವರ್ಷ ಆ. 1ರಿಂದ 9ರವರೆಗೆ ನಡೆಯುತ್ತದೆ ಎಂದ ಅವರು, ಹಾಲಿ ಸಂಸತ್ ಅಧಿವೇಶನದಲ್ಲೇ ಈ ಎರಡೂ ಮಸೂದೆಗಳು ಮಂಡನೆಯಾದ ಹಿನ್ನೆಲೆಯಲ್ಲಿ ಹಾಲಿ ಸಂಸತ್ ಕಲಾಪವನ್ನು ‘ಸಾಮಾಜಿಕ ನ್ಯಾಯ ಕಲಾಪ’ ಎಂದೇ ಸ್ಮರಿಸಿಕೊಳ್ಳಲಾಗುವುದು ಎಂದರು. ಅಲ್ಲದೆ, ಆಗಸ್ಟ್ ಮಾಸದಲ್ಲೇ ಈ ಮಹತ್ವದ ಮಸೂದೆ ಮಂಡನೆಯಾಗಿದ್ದನ್ನು ‘ಆಗಸ್ಟ್ ಕ್ರಾಂತಿ’ ಎಂದು ಬಣ್ಣಿಸಿದ ಅವರು, ಇದು 1942ರ ಆಗಸ್ಟ್ ನಲ್ಲಿ ಮಹಾತ್ಮಾ ಗಾಂಧಿ ಶುರು ಮಾಡಿದ್ದ “ಕ್ವಿಟ್ ಇಂಡಿಯಾ ಚಳವಳಿ’ಯ ನಂತರ ಭಾರತದಲ್ಲಿ ಆಗಿರುವ ಕ್ರಾಂತಿ ಎಂದರು.
ಇದೇ ವೇಳೆ ಸಚಿವ ಅನಂತ ಕುಮಾರ್, “2014ರ ಚುನಾವಣೆಗೂ ಮುನ್ನ ಮೋದಿಯವರು ತಾವು ಅಧಿಕಾರಕ್ಕೆ ಬಂದರೆ, ಬಡವರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದರು. ಇದೀಗ, ಒಬಿಸಿ, ದಲಿತರ ಮೇಲಿನ ಹಲ್ಲೆಗಳ ವಿರೋಧಿ ಮಸೂದೆ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ