ಉಪಸಭಾಪತಿ: ಬಿ.ಕೆ. ಹರಿಪ್ರಸಾದ್ ವಿಪಕ್ಷಗಳ ಅಭ್ಯರ್ಥಿ
Team Udayavani, Aug 9, 2018, 6:00 AM IST
ಹೊಸದಿಲ್ಲಿ: ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ಕನ್ನಡಿಗ, ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ (64) ಮತ್ತು ಜೆಡಿಯುನ ಹರಿವಂಶ್ ನಾರಾಯಣ್ ಸಿಂಗ್ (62) ನಡುವೆ ಸ್ಪರ್ಧೆ ಏರ್ಪಟ್ಟಿದೆ. ಗುರುವಾರ ಚುನಾವಣೆ ನಡೆಯಲಿದ್ದು, ಎನ್ಡಿಎ ಪರ ಹರಿವಂಶ್ ನಾರಾಯಣ್ ಸಿಂಗ್ ಮತ್ತು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಾಂಗ್ರೆಸ್ನ ಹರಿಪ್ರಸಾದ್ ಬುಧವಾರ ನಾಮ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯದೆ ಎನ್ಡಿಎಯಿಂದ ಹರಿವಂಶ್ ಹೆಸರು ಘೋಷಣೆಯಾಗುತ್ತಿದ್ದಂತೆ, ವಿಪಕ್ಷಗಳ ಪಾಳಯದಲ್ಲಿ ರಾಜಕೀಯ ಲೆಕ್ಕಾಚಾರವೇ ಬದಲಾಯಿತು. ಪ್ರಾದೇಶಿಕ ಪಕ್ಷಗಳು ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಿಸಿದವು.
ಎನ್ಡಿಎ ಅಭ್ಯರ್ಥಿ ಪರ ಶಿವಸೇನೆ ಮತ್ತು ಅಕಾಲಿ ದಳ ಮತ ಹಾಕುವುದಾಗಿ ಘೋಷಣೆ ಮಾಡಿವೆ. ಕಾಂಗ್ರೆಸ್ನ ವಿರೋಧಿಯಾಗಿರುವ, 6 ಸದಸ್ಯ ಬಲ ಹೊಂದಿರುವ ಟಿಆರ್ಎಸ್ ಕೂಡ ಎನ್ಡಿಎ ಬೆಂಬಲಿಸುವ ಸಾಧ್ಯತೆಯಿದೆ. ಬಿಜು ಜನತಾ ದಳ ನಾಯಕ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಕರೆ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. 9 ಸಂಸದರನ್ನು ಹೊಂದಿರುವ ಬಿಜೆಡಿ ನಿರ್ಣಾಯಕವಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ, ವಿಪಕ್ಷಗಳ ನಾಯಕರು ತಮ್ಮ ತಮ್ಮ ಸದಸ್ಯರಿಗೆ ವಿಪ್ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ