ದಳ ಒಗ್ಗೂಡಿಸಲು ಹಳ್ಳಿಹಕ್ಕಿಗೆ ಪ್ರಥಮ ವಿಘ್ನ


Team Udayavani, Aug 9, 2018, 7:00 AM IST

jds0909.jpg

ಬೆಂಗಳೂರು: ಜನತಾ ಪರಿವಾರವನ್ನು ಮತ್ತೆ ಒಗ್ಗೂಡಿಸಲು ಮುಂದಾಗಿರುವ ಜೆಡಿಎಸ್‌ನ ನೂತನ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರಿಗೆ ಪಕ್ಷದ ಒಳಗೆ ಮತ್ತು ಹೊರಗೆ ಆರಂಭದಲ್ಲೇ ಕೆಲವು ತೊಡಕು ಎದುರಾಗಿದ್ದು, ಸದ್ಯಕ್ಕೆ ಈ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಕಾಣಿಸಿಕೊಳ್ಳುತ್ತಿಲ್ಲ.

ಜನತಾ ಪರಿವಾರ ತೊರೆದಿರುವ ಅನೇಕ ನಾಯಕರು ಕಾಂಗ್ರೆಸ್‌ನಲ್ಲಿದ್ದಾರೆ. ಇನ್ನೊಂದೆಡೆ ಇತ್ತೀಚಿನ ವರ್ಷಗಳಲ್ಲಿ ತಮ್ಮ ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಿ ಜೆಡಿಎಸ್‌ ತೊರೆದಿರುವವರನ್ನು ಪಕ್ಷಕ್ಕೆ ಆಹ್ವಾನಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಸಕ್ತಿ ತೋರುತ್ತಿಲ್ಲ. ಅದಕ್ಕೂ ಮೀರಿ ಕಾಂಗ್ರೆಸ್‌ನಲ್ಲಿರುವವರನ್ನು ಈಗ ಪಕ್ಷಕ್ಕೆ ಸೇರಿಸಿಕೊಂಡರೆ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗಬಹುದು. ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಮೈತ್ರಿಗೂ ಸಮಸ್ಯೆ ಎದುರಾಗಬಹುದು.

ಈ ಕಾರಣಕ್ಕಾಗಿ ಜನತಾ ಪರಿವಾರನ್ನು ಒಗ್ಗೂಡಿಸಲು ಮುಂದಾಗಿರುವ ಎಚ್‌.ವಿಶ್ವನಾಥ್‌ ಅವರು ತಮ್ಮ ಈ ನಿರ್ಧಾರವನ್ನು ಕೆಲ ತಿಂಗಳ ಮಟ್ಟಿಗೆ ಮುಂದೂಡಲು ತೀರ್ಮಾನಿಸಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಪರಿಸ್ಥಿತಿ ನೋಡಿಕೊಂಡು ಈ ನಿಟ್ಟಿನಲ್ಲಿ ಮುಂದುವರಿಯಲು ತೀರ್ಮಾನಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇಕ್ಕಟ್ಟಿನಲ್ಲಿ ಮಾಜಿ ಶಾಸಕರು:
ದೇವೇಗೌಡರ ಕುಟುಂಬದೊಂದಿಗೆ ಜಗಳವಾಡಿಕೊಂಡು ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಸೇರಿದ್ದ ಮಾಜಿ ಶಾಸಕರಾದ ನಾಗಮಂಗಲ ಕ್ಷೇತ್ರದ ಎನ್‌.ಚೆಲುವರಾಯಸ್ವಾಮಿ, ಮಾಗಡಿಯ ಎಚ್‌.ಸಿ.ಬಾಲಕೃಷ್ಣ ಮತ್ತು ಶ್ರೀರಂಗಪಟ್ಟಣದ ರಮೇಶ್‌ ಬಂಡಿಸಿದ್ದೇಗೌಡ ಇದೀಗ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಈ ಮೂವರೂ ಹಳೇ ಮೈಸೂರು ಭಾಗಕ್ಕೆ ಸೇರಿದವರಾಗಿದ್ದು, ಒಕ್ಕಲಿಗ ಸಮುದಾಯದವರಾದರೂ ದೇವೇಗೌಡರ ಕುಟುಂಬವನ್ನು ತಿರಸ್ಕರಿಸಿದರೆ ತಮಗೆ ರಾಜಕೀಯವಾಗಿ ಉಳಿಗಾಲವಿಲ್ಲ ಎಂಬುದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟವಾಗಿದೆ. ಮೂವರೂ ಸೋತು ಮನೆ ಸೇರಿದ್ದಾರೆ.

ಇವರಿಗೆ ಬಿಜೆಪಿಯಿಂದ ಆಹ್ವಾನ ಇದೆಯಾದರೂ ನಿರ್ಧಾರ ತೆಗೆದುಕೊಳ್ಳಲು ಆಗುತ್ತಿಲ್ಲ. ದೇವೇಗೌಡರ ಕುಟುಂಬವನ್ನು ಎದುರು ಹಾಕಿಕೊಂಡು ಕಾಂಗ್ರೆಸ್‌ನಲ್ಲೇ ಗೆಲ್ಲಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯಲ್ಲಿ ಅದು ಸಾಧ್ಯವೇ ಎಂಬ ಆತಂಕ ಕಾಣಿಸಿಕೊಂಡಿದೆ. ಮತ್ತೆ ತಾವಾಗಿಯೇ ಜೆಡಿಎಸ್‌ ಸೇರಲು ಮನಸ್ಸು ಒಪ್ಪುತ್ತಿಲ್ಲ. ಆ ಪಕ್ಷದಿಂದ ಆಹ್ವಾನ ಬಂದರೆ ನೋಡೋಣ ಎಂಬ ಯೋಚನೆಯಲ್ಲಿದ್ದಾರೆ. ಆದರೆ, ಬರುವುದಾದರೆ ಅವರಾಗಿಯೇ ಬರಲಿ, ಪಕ್ಷದಿಂದ ಆಹ್ವಾನ ನೀಡುವುದು ಬೇಡ ಎಂಬ ಸೂಚನೆಯನ್ನು ಎಚ್‌.ವಿಶ್ವನಾಥ್‌ ಅವರಿಗೆ ದೇವೇಗೌಡರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇವರಲ್ಲದೆ, ಪುಲಿಕೇಶಿನಗರದ ಅಖಂಡ ಶ್ರೀನಿವಾಸಮೂರ್ತಿ ಮತ್ತು ಹಗರಿಬೊಮ್ಮನಹಳ್ಳಿಯ ಭೀಮಾ ನಾಯಕ್‌ ಕಾಂಗ್ರೆಸ್‌ನಿಂದ ಗೆದ್ದಿದ್ದು, ಅವರು ಜೆಡಿಎಸ್‌ಗೆ ಬರುವ ಸಾಧ್ಯತೆ ಇಲ್ಲ. ಕಳೆದ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಜೆಡಿಎಸ್‌ ಪಕ್ಷವನ್ನು ಬೆಂಬಲಿಸದ ಕಾರಣ ಇಕ್ಬಾಲ್‌ ಅನ್ಸಾರಿಯನ್ನು ಸೇರಿಸಿಕೊಳ್ಳಲು ದೇವೇಗೌಡರು ಆಸಕ್ತಿ ತೋರುತ್ತಿಲ್ಲ.

ಸರ್ಕಾರಕ್ಕೆ ತೊಡಕಾಗಬಹುದೆಂಬ ಆತಂಕ
ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಪ್ರಮುಖರ ಪೈಕಿ ಡಾ.ಎಚ್‌.ಸಿ.ಮಹದೇವಪ್ಪ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ತಣ್ಣಗಾಗಿದ್ದಾರೆ. 

ಎಚ್‌.ಎಸ್‌.ಮಹಾದೇವಪ್ರಸಾದ್‌ ಪತ್ನಿ ಗೀತಾ ಮಹದೇವ ಪ್ರಸಾದ್‌ ಕೂಡ ಸೋತಿದ್ದು, ಇವರನ್ನು ಮತ್ತೆ ಜೆಡಿಎಸ್‌ಗೆ ಅಹ್ವಾನಿಸಿ ಹಳೇ ಮೈಸೂರು ಭಾಗದಲ್ಲಿ ದಲಿತ ಮತ್ತು ಲಿಂಗಾಯತ ಮತಗಳನ್ನು ಹೆಚ್ಚಿಸಿಕೊಳ್ಳಲು ಯೋಚಿಸಿದ್ದರು. ಆದರೆ, ಅವರಿಬ್ಬರೂ ಮಿತ್ರಪಕ್ಷ ಕಾಂಗ್ರೆಸ್‌ನಲ್ಲಿರುವುದರಿಂದ ಜೆಡಿಎಸ್‌ಗೆ ಸೇರಿಸಿಕೊಂಡರೆ ಸಮ್ಮಿಶ್ರ ಸರ್ಕಾರಕ್ಕೆ ತೊಡಕಾಗಬಹುದು ಎಂಬ ಆತಂಕ ಕಾಣಿಸಿಕೊಂಡಿದೆ.

ವಜ್ಜಲ್‌, ಖೂಬಾ ಸೆಳೆಯಲು ಯೋಚನೆ
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರಿರುವ ಲಿಂಗಸ್ಗೂರಿನ ಮಾನಪ್ಪ ವಜ್ಜಲ್‌, ರಾಯಚೂರಿನ ಡಾ.ಶಿವರಾಜ್‌ ಪಾಟೀಲ್‌ ಮತ್ತು ಬಸವ ಕಲ್ಯಾಣದ ಮಲ್ಲಿಕಾರ್ಜುನ ಖೂಬಾ ಪೈಕಿ ಶಿವರಾಜ್‌ ಪಾಟೀಲ್‌ ಮಾತ್ರ ಗೆದ್ದಿದ್ದಾರೆ. ಹೀಗಾಗಿ ಮಾನಪ್ಪ ವಜ್ಜಲ್‌ ಮತ್ತು ಮಲ್ಲಿಕಾರ್ಜುನ ಖೂಬಾ ಅವರನ್ನು ಜೆಡಿಎಸ್‌ಗೆ ಕರೆಸಿಕೊಳ್ಳುವ ಬಗ್ಗೆ ಯೋಚಿಸಿರುವ ವಿಶ್ವನಾಥ್‌, ದೇವೇಗೌಡರು ಏನು ನಿಲುವು ಕೈಗೊಳ್ಳುತ್ತಾರೆ ಎಂಬುದನ್ನು ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.