ಗೋಡೆಗಳಲ್ಲಿ ಬಿರುಕು, ಸೋರುತ್ತಿದೆ ಛಾವಣಿ


Team Udayavani, Aug 9, 2018, 10:25 AM IST

9-agust-2.jpg

ಕಬಕ : ಮುಂದಿನ ವರ್ಷ ಶತಮಾನ ಆಚರಿಸಲಿರುವ ಕಬಕ ಸರಕಾರಿ ಹಿ.ಪ್ರಾ. ಶಾಲೆ ಕಟ್ಟಡ ಮಾತ್ರ ಕುಸಿತದ ಭೀತಿಯಲ್ಲಿದೆ. ಇಲ್ಲಿ ಕಲಿಯುತ್ತಿರುವ 176 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಜೀವಭಯದಲ್ಲಿ ಇದ್ದಾರೆ. ಇಲ್ಲಿರುವ 15 ಕೊಠಡಿಗಳ ಪೈಕಿ ಹೆಚ್ಚಿನ ಗೋಡೆಗಳು ಬಿರುಕು ಬಿಟ್ಟಿವೆ. ಪಕ್ಕಾಸು, ರೀಪುಗಳು ಈಗಲೋ ಆಗಲೋ ಎನ್ನುವ ಸ್ಥಿತಿಯಲ್ಲಿವೆ. ಮಳೆ, ಗಾಳಿ ಬಂದಾಗೆಲ್ಲ ಹೆದರಿಕೆ ಹುಟ್ಟಿಸುತ್ತವೆ. ಒಂದೆರಡು ತರಗತಿ ಕೋಣೆ ಹೊರತುಪಡಿಸಿ ಉಳಿದ ಕೋಣೆಗಳ ಗೋಡೆ ಬಿರುಕು ಬಿಟ್ಟಿದ್ದು, ಮಳೆ ನೀರು ತರಗತಿಗಳ ಒಳಗೆ ಬರುತ್ತಿದೆ.

ವಿದ್ಯಾರ್ಥಿಗಳ ಸಂಖ್ಯೆ ಪ್ರತಿ ವರ್ಷವೂ ಗಣನೀಯವಾಗಿ ಇಳಿಕೆಯಾಗುತ್ತಿದೆ. ಶಿಕ್ಷಕರ ಕೊರತೆಯೂ ಎದುರಾಗಿದೆ. ಶಿಕ್ಷಕರ ಮುತುವರ್ಜಿಯಿಂದಾಗಿ ಪ್ರಸ್ತುತ ವರ್ಷಕ್ಕೆ 176 ವಿದ್ಯಾರ್ಥಿಗಳಿದ್ದಾರೆ. ಶಾಲೆಯ ಸ್ಥಿತಿ ಹೀಗೆಯೇ ಮುಂದುವರಿದರೆ ಹೆತ್ತವರು ಮಕ್ಕಳನ್ನು ಕಳುಹಿಸಲು ಧೈರ್ಯ ಮಾಡಲಾರರು. ಶಾಲೆಯ ದುಸ್ಥಿತಿಯೇ ಅದನ್ನು ಮುಚ್ಚುವ ಸ್ಥಿತಿಗೆ ತರುತ್ತಿದೆ ಎಂಬುದು ಶಿಕ್ಷಣ ಪ್ರೇಮಿಗಳ ನೋವು.

ಶೌಚಾಲಯವೂ ಸರಿಯಾಗಿಲ್ಲ
ಶಾಲೆಗೆ ಆವರಣ ಗೋಡೆ ಇಲ್ಲ. ಸರಿಯಾದ ಶೌಚಾಲಯಗಳಿಲ್ಲ. ಬಿಸಿಯೂಟದ ಆಹಾರ ವಸ್ತು ಸಂಗ್ರಹಣ ಕೊಠಡಿಯೂ ಸೋರುತ್ತಿದೆ. ಆಹಾರ ವಸ್ತುಗಳನ್ನು ಸಂಗ್ರಹಿಸಿಡಲೂ ಜಾಗ ಹುಡುಕಬೇಕಾದ ಸ್ಥಿತಿ ಉದ್ಭವಿಸಿದೆ. ಈ ಶಾಲೆಗೆ ರಸ್ತೆ ಸೌಕರ್ಯವಿದೆ. ಕಬಕ, ಕುಳ, ಇಡ್ಕಿದು, ಕೊಡಿಪ್ಪಾಡಿ, ಕೆದಿಲ ಗ್ರಾಮಗಳಲ್ಲದೆ, ದೂರದ ಊರಿನ ವಿದ್ಯಾರ್ಥಿಗಳೂ ಇಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ.

ಇಚ್ಛಾಶಕ್ತಿ ಕೊರತೆ
ದುರ್ಬಲಗೊಂಡ ಹಂಚಿನ ಛಾವಣಿಗಳಗಳ ಮೂಲಕ ಪಾರಿವಾಳ ಮತ್ತು ಇತರ ಪಕ್ಷಿಗಳು ಶಾಲೆಯ ಒಳಗೆ ಪ್ರವೇಶಿಸಿಸುತ್ತಿದ್ದು, ಹಿಕ್ಕೆ ಹಾಕಿ ಗಲೀಜು ಮಾಡುತ್ತಿವೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಇಚ್ಛಾಶಕ್ತಿ ಕೊರತೆಯಿಂದಾಗಿ ಈ ಶಾಲೆಗೆ ಇಂತಹ ದುಸ್ಥಿತಿ ಬಂದಿದೆ ಎನ್ನುವುದು ಇಲ್ಲಿನ ಗ್ರಾಮಸ್ಥರ ಅನಿಸಿಕೆ. ಶಾಶ್ವತ ಅನುದಾನವೊಂದೇ ಪರಿಹಾರ.

ಅನೈತಿಕ ಚಟುವಟಿಕೆ?
ಈ ಶಾಲೆಗೆ ಆವರಣ ಗೋಡೆ ಇಲ್ಲದ ಕಾರಣ ರಾತ್ರಿ ವೇಳೆ ಇಲ್ಲಿ ಜುಗಾರಿ ಆಡುವುದು, ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಶಾಲಾ ಅವರಣದಲ್ಲಿ ಬೀಡಿ ಸಿಗರೇಟು, ಇಸ್ಪೀಟು ಎಲೆಗಳು, ಮದ್ಯದ ಬಾಟಲಿಗಳು ಪತ್ತೆಯಾಗಿವೆ.

ಪ್ರಯೋಜನವಾಗಿಲ್ಲ
ಅಭಿವೃದ್ಧಿಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಶಿಕ್ಷಣ ಇಲಾಖೆ, ಗ್ರಾ.ಪಂ., ತಾ.ಪಂ.ಗೆ ಕಳುಹಿಸಿಕೊಡಲಾಗಿದೆ. ಮನವಿ ಇತ್ತರೂ ಪ್ರಯೋಜನವಾಗಿಲ್ಲ. ಅರಣ್ಯ ಇಲಾಖೆ ವತಿಯಿಂದ ಸಾಮಾಜಿಕ ಕಾರ್ಯದಡಿ ಅಕೇಶಿಯಾ, ಮಾಂಜಿಯಂ ಗಿಡಗಳನ್ನು ಶಾಲೆಯ ಸುತ್ತ ನೆಡಲಾಗಿದೆ. ಮರಗಳು ಶಾಲೆಯ ಮೇಲೆ ಮತ್ತು ಆಟವಾಡುವ ಸ್ಥಳದಲ್ಲಿ ಮಕ್ಕಳ ಮೇಲೆ ಬೀಳುವ ಸ್ಥಿತಿಯಲ್ಲಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಕೊಟ್ಟು ವರ್ಷಗಳು ಉರುಳಿದರೂ ಏನೂ ಪ್ರಯೋಜನವಾಗಿಲ್ಲ.
– ಸುಲೋಚನಾ,
ಮುಖ್ಯ ಶಿಕ್ಷಕಿ

ವರದಿ ಕಳುಹಿಸಲಾಗಿದೆ
ಕಬಕ ಹಿ.ಪ್ರಾ. ಶಾಲೆಯ ಶಿಥಿಲಗೊಂಡಿರುವ ಬಗ್ಗೆ ವರದಿಯನ್ನು ಡಿಡಿಪಿಐ ಕಚೇರಿಗೆ ಕಳುಹಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಮೊದಲು ಸಮಸ್ಯೆಗೆ ಪರಿಹಾರ ದೊರೆಯಬಹುದು.   
– ಡಿ.ಎನ್‌. ಸುಕನ್ಯಾ, ಕ್ಷೇತ್ರ ಶಿಕ್ಷಣಾಧಿಕಾರಿ

ಸಮಸ್ಯೆ ಪರಿಹಾರಕ್ಕೆ ಯತ್ನ
ಕಬಕ ಸರಕಾರಿ ಹಿ.ಪ್ರಾ. ಶಾಲೆಗೆ ತಾನು ಖುದ್ದಾಗಿ ಭೇಟಿ ಇತ್ತು ಪರಿಶೀಲಿಸುತ್ತೇನೆ. ಆನಂತರ ಸಮಸ್ಯೆ ಪರಿಹಾರಕ್ಕೆ ವ್ಯವಸ್ಥೆ ಮಾಡುತ್ತೇನೆ.
– ಸಂಜೀವ ಮಠಂದೂರು,
    ಶಾಸಕರು.

ಉಮ್ಮರ್‌ ಜಿ. ಕಬಕ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.