ಜಾಹೀರಾತು ವಿರುದ್ಧ ಆ್ಯಪ್‌ ಸಮರ


Team Udayavani, Aug 9, 2018, 12:17 PM IST

blore-1.jpg

ಬೆಂಗಳೂರು: ನಗರದ ಖಾಸಗಿ ಆಸ್ತಿಗಳಲ್ಲಿರುವ ಅನಧಿಕೃತ ಜಾಹೀರಾತು ಫ‌ಲಕಗಳ ಪತ್ತೆಗೆ ವಿಶೇಷ ಆ್ಯಪ್‌ ಅಭಿವೃದ್ಧಿಪಡಿಸುತ್ತಿರುವ ಬಿಬಿಎಂಪಿ, ಮತ್ತೂಂದೆಡೆ ಅಕ್ರಮ ಪತ್ತೆ ಹಚ್ಚುವಲ್ಲಿ ವಿಫ‌ಲವಾಗಿರುವ ಕಂದಾಯ ವಿಭಾಗದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ತೀರ್ಮಾನಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ವರ್ಷದ ಮಟ್ಟಿಗೆ ಎಲ್ಲ ರೀತಿಯ ಜಾಹೀರಾತು ಪ್ರದರ್ಶನ ನಿಷೇಧಿಸಿರುವ ಪಾಲಿಕೆ, ಇದೀಗ ಅನಧಿಕೃತ ಜಾಹೀರಾತು ಫ‌ಲಕಗಳ ಸಾಧನಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಸಿದ್ಧತೆ ನಡೆಸಿದೆ. ಆ ಹಿನ್ನೆಲೆಯಲ್ಲಿ ಪ್ರತಿಯೊಂದು ವಾರ್ಡ್‌ನಲ್ಲಿರುವ ಜಾಹೀರಾತು ಫ‌ಲಕಗಳ ನಿಖರ ಮಾಹಿತಿ ಪಡೆಯಲು ಪಾಲಿಕೆ ಅಧಿಕಾರಿಗಳಿಗಾಗಿಯೇ ವಿಶೇಷ ಆ್ಯಪ್‌ ಸಿದ್ಧಪಡಿಸಲಾಗುತ್ತಿದೆ. ಆ್ಯಪ್‌ನಿಂದ ಪಾಲಿಕೆಯಲ್ಲಿರುವ ಅನಧಿಕೃತ ಜಾಹೀರಾತು ಫ‌ಲಕಗಳ ಮಾಹಿತಿ ಲಭ್ಯವಾಗಲಿದ್ದು, ಜಾಹೀರಾತು ಫ‌ಲಕ ಅಳವಡಿಸಿರುವ ಆಸ್ತಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಸಹಾಯಕವಾಗಲಿದೆ.

ಆ್ಯಪ್‌ ಕಾರ್ಯಾಚರಣೆ: ಪಾಲಿಕೆಯ ಎಲ್ಲಾ ಸಹಾಯಕ ಕಂದಾಯ ಅಧಿಕಾರಿಗಳು ಕಡ್ಡಾಯವಾಗಿ (ಎಆರ್‌ಒ) ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು, ತಮ್ಮ ವ್ಯಾಪ್ತಿಗೆ ಬರುವ ಪ್ರತಿಯೊಂದು ಜಾಹೀರಾತು ಫ‌ಲಕಗಳನ್ನು ಹತ್ತಿರದಿಂದ ಫೋಟೋ ತೆಗೆದು ಸ್ಥಳದ ಪೂರ್ಣ ಮಾಹಿತಿ ಆ್ಯಪ್‌ಗೆ ಅಪ್‌ಲೋಡ್‌ ಮಾಡಬೇಕು. ಫ‌ಲಕವಿರುವ ಖಾಸಗಿ ಕಟ್ಟಡದ ಹತ್ತಿರ ಹೋಗಿ “ಲೊಕೇಷನ್‌’ ಅಪ್‌ಲೋಡ್‌ ಮಾಡಬೇಕು. ಇದರೊಂದಿಗೆ ಆ ಜಾಗದ ಮಾಲೀಕರ ಹೆಸರು ಹಾಗೂ ಆಸ್ತಿಯ ಪಿಐಡಿ ಸಂಖ್ಯೆಯ ಮಾಹಿತಿ ನೀಡಬೇಕಾಗುತ್ತದೆ.

ಖಾಸಗಿ ಜಾಗದ ಅನಧಿಕೃತ ಜಾಹೀರಾತು ಫ‌ಲಕಗಳ ತೆರವಿಗೆ ಬಿಬಿಎಂಪಿ ಆಯುಕ್ತರು 15 ದಿನಗಳ ಕಾಲಾವಕಾಶ ನೀಡಿದ್ದು ಆ ವೇಳೆಗೆ ನಗರದಲ್ಲಿರುವ ಎಲ್ಲ ಖಾಸಗಿ ಜಾಗಗಳಲ್ಲಿರುವ ಜಾಹೀರಾತು ಫ‌ಲಕಗಳ ಕುರಿತು ಪಾಲಿಕೆಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ನಿಗದಿತ ಅವಧಿಯಲ್ಲಿ ಖಾಸಗಿಯವರು ಬುಡಸಮೇತ ಜಾಹೀರಾತು ಫ‌ಲಕ ಸಾಧನಗಳನ್ನು (ಸ್ಟ್ರಕ್ಚರ್‌) ತೆರವುಗೊಳಿಸದಿದ್ದರೆ, ಫ‌ಲಕವಿರುವ ಆಸ್ತಿಯ ಮಾಲೀಕರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಲು ಮಾಹಿತಿ ಅನುಕೂಲವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಈ ಹಿಂದೆ, ಪಾಲಿಕೆಯ ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾಗಿದ್ದ ರಶ್ಮಿ ಮಹೇಶ್‌ ಅವರು, 2016-17ನೇ ಸಾಲಿನಲ್ಲಿ ಫ‌ಲಕಗಳ ಸರ್ವೇಗೆ ಆದೇಶಿಸಿದ್ದರು. ಅದರಂತೆ ಪಾಲಿಕೆಯ ಅಧಿಕಾರಿಗಳು ಪ್ರತಿ ವಾರ್ಡ್‌ನ ಪ್ರತಿ ರಸ್ತೆಯಲ್ಲಿರುವ ಜಾಹೀರಾತು ಫ‌ಲಕಗಳ ಮಾಹಿತಿಯನ್ನು ವಿಡಿಯೋ ಚಿತ್ರೀಕರಣ ಸಮೇತವಾಗಿ ಸಂಗ್ರಹಿಸಿದ್ದರು. ಆವೇಳೆ ಪಾಲಿಕೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಅನಧಿಕೃತ ಜಾಹೀರಾತು ಫ‌ಲಕಗಳಿರುವುದು ಕಂಡುಬಂದಿತ್ತು.

ಅಧಿಕಾರಿಗಳ ಲೋಪ: ಕಂದಾಯ ವಿಭಾಗದ ಅಧಿಕಾರಿಗಳು ಪ್ರತಿವರ್ಷ ಆಸ್ತಿ ತೆರಿಗೆ ನಿಗದಿಪಡಿಸುವ ವೇಳೆ ಕಟ್ಟಡ ಅಥವಾ ನಿವೇಶನ ಸಂಪೂರ್ಣವಾಗಿ ಪರಿಶೀಲಿಸಿ, ವಿಸ್ತೀರ್ಣ, ನಿಯಮ ಉಲ್ಲಂಘನೆ, ಆಸ್ತಿಯ ಬಳಕೆಯ ಉದ್ದೇಶ ಸೇರಿದಂತೆ ಇತರೆ ವಿಷಯಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕಿತ್ತು. ಆದರೆ, ಅಧಿಕಾರಿಗಳು ಈ ಯಾವುದೇ ಕೆಲಸ ಮಾಡಿಲ್ಲ. ಇದರಿಂದಾಗಿ ಅಕ್ರಮ ಜಾಹೀರಾತು ಫ‌ಲಕಗಳು ಹೆಚ್ಚಾಗಿವೆ. ಜತೆಗೆ ಪಾಲಿಕೆಗೆ ನಷ್ಟವೂ ಆಗಿದೆ. ಜತೆಗೆ ನಗರದ ಸೌಂದರ್ಯಕ್ಕೂ ಧಕ್ಕೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅಕ್ರಮಗಳ ತಡೆಗೆ ವಿಶೇಷ ಆ್ಯಪ್‌ ಸಿದ್ಧವಾಗುತ್ತಿದೆ. 

ಅಧಿಕಾರಿಗಳ ವಿರುದ್ಧ ಕ್ರಮ ಪಾಲಿಕೆಯ ಅನುಮತಿ ಪಡೆಯದೆ ನಗರದಲ್ಲಿ ಜಾಹೀರಾತು ಫ‌ಲಕಗಳನ್ನು ಅಳವಡಿಸಿದರೂ ಯಾವುದೇ ಕ್ರಮಕ್ಕೆ ಮುಂದಾಗದ ಹಾಗೂ ಅಕ್ರಮದ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಅಕ್ರಮದಲ್ಲಿ ಶಾಮೀಲಾದ ಕಂದಾಯ ವಿಭಾಗದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಬಿಬಿಎಂಪಿ ಆಯುಕ್ತರು ತೀರ್ಮಾನಿಸಿದ್ದಾರೆ.

ಪಾಲಿಕೆಯಿಂದ ಅಭಿವೃದ್ಧಿಪಡಿಸುತ್ತಿರುವ ಆ್ಯಪ್‌ಗೆ ಎಲ್ಲ ಸಹಾಯಕ ಕಂದಾಯಾಧಿಕಾರಿಗಳು ತಮ್ಮ ವಾರ್ಡ್‌ನ ಅನಧಿಕೃತ ಫ‌ಲಕಗಳ ಮಾಹಿತಿ ಅಪ್‌ಲೋಡ್‌ ಮಾಡಬೇಕು.ಆ ಫ‌ಲಕಗಳ ವಿರುದ್ಧ ಕ್ರಮಕೈಗೊಳ್ಳದಿರಲು
ಕಾರಣವನ್ನು ತಿಳಿಸಬೇಕು. ಅಧಿಕಾರಿಗಳ ಕಡೆಯಿಂದ ಲೋಪವಾಗಿದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಖಾಸಗಿ ಆಸ್ತಿಗಳಲ್ಲಿ ಅಳವಡಿಸಿರುವ ಜಾಹೀರಾತು ಫ‌ಲಕಗಳನ್ನು ತೆರವುಗೊಳಿಸಲು ಕಾಲಾವಕಾಶ
ನೀಡಲಾಗಿದೆ. ಪಾಲಿಕೆಯಿಂದಲೂ ಜಾಹೀರಾತು ಫ‌ಲಕಗಳ ಪತ್ತೆಗಾಗಿ ಆ್ಯಪ್‌ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ಫ‌ಲಕಗಳ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.
 ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

 ವೆಂ. ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.