ಬೆಂಗಳೂರು:ಮತ್ತೊಬ್ಬ ಶಂಕಿತ ಜೆಎಂಬಿ ಉಗ್ರನ ಬಂಧನ
Team Udayavani, Aug 9, 2018, 2:07 PM IST
ಬೆಂಗಳೂರು: ನಗರದಲ್ಲಿ ಮತ್ತೋರ್ವ ಶಂಕಿತ ಜಮಾತ್-ಉಲ್- ಮುಜಾಹಿದ್ದೀನ್ ಬಾಂಗ್ಲಾದೇಶ್ ಉಗ್ರ ಸಂಘಟನೆಯ ಶಂಕಿತನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ಬಂಧಿತ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನ ಅಸಾದುಲ್ಲಾ ಅಲಿಯಾಸ್ ಆದಿಲ್ (29) ಎಂದು ತಿಳಿದು ಬಂದಿದೆ.
ರಾಮನಗರದಲ್ಲಿ ಸೋಮವಾರ ಬಂಧನಕ್ಕೊಳಗಾಗಿದ್ದ ಮುನೀರ್ ಶೇಕ್ ಅಲಿಯಾಸ್ ಕೌಸರ್ ನನ್ನು ವಿಚಾರಣೆ ನಡೆಸಿದಾಗ ಈತನ ಬಗ್ಗೆ ಬಾಯ್ ಬಿಟ್ಟಿದ್ದು ಆ ಬಳಿಕ ಎನ್ಐಎ ಹಾಗೂ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ.
ಮುನೀರ್ ಶೇಖ್ ಬಿಹಾರದ ಬೋಧ್ಗಯಾ ಸ್ಫೋಟಕ್ಕೆ ಸಂಚು ನಡೆಸಿದ್ದು, ಅಲ್ಲಿಗೆ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸಿದ್ದ ಹಾಗೂ ರಾಷ್ಟ್ರದ ಹಲವು ಕಡೆಗಳಲ್ಲಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದ ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿತ್ತು. ಈತನೂ ಆತನ ಉಗ್ರ ಚಟುವಟಿಕೆಗಳಲ್ಲಿ ಸಹಕಾರಿಯಾಗಿದ್ದ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್