ಮಾಸುತ್ತಿದೆ ಸುಣಗಾರರ ಬದುಕಿನ ಬಣ್ಣ 


Team Udayavani, Aug 9, 2018, 4:40 PM IST

9-agust-21.jpg

ನರೇಗಲ: ಕಲ್ಲು ಸುಟ್ಟು ಸುಣ್ಣ ತಯಾರಿಸುವ ಸುಣಗಾರರ ಬದುಕು ಇತ್ತೀಚಿನ ದಿನಗಳಲ್ಲಿ ತೀರಾ ಮೂರಾಬಟ್ಟೆಯಂತಾಗಿದೆ. ಆಧುನಿಕ ಕಾಲದ ರಾಸಾಯನಿಕ ಮಿಶ್ರಿತ ಸಿದ್ಧ ಸುಣ್ಣ ಹಾಗೂ ಬಣ್ಣಕ್ಕೆ ಜನ ಮಾರು ಹೋಗುತ್ತಿರುವುದರಿಂದ ಸಾಂಪ್ರದಾಯಿಕ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆಯೇ ಇಲ್ಲದಂತಾಗಿದೆ. ರಾಸಾಯನಿಕ ಮಿಶ್ರಿತ ಸಿದ್ಧ ಸುಣ್ಣ ಮತ್ತು ಬಣ್ಣ ಇಲ್ಲಿನ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಸುಲಭವಾಗಿ ಸಿಗುತ್ತಿದ್ದು, ಸಮಯವೂ ಉಳಿತಾಯವಾಗುತ್ತಿದೆ. ಈ ಕಾರಣಕ್ಕೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಇಂತಹ ಉತ್ಪನ್ನಗಳಿಂದ ಕಾಲಾಂತರದಿಂದ ಬಂದ ಸಾಂಪ್ರದಾಯಿಕ ಉದ್ಯೋಗಕ್ಕೆ ಕುತ್ತು ಬಂದಿದೆ. ಇದರಿಂದ ಸುಣಗಾರರು ಸುಣ್ಣದ ಭಟ್ಟಿಯನ್ನು ಮುಂದುವರಿಸಬೇಕೋ ಬೇಡವೋ ಎಂಬ ಗೊಂದಲದಲ್ಲಿದ್ದಾರೆ.

ಮಾರುಕಟ್ಟೆಯಲ್ಲಿ ರಾಸಾಯನಿಕ ಮಿಶ್ರಿತ ಸುಣ್ಣಗಳು ತ್ವರಿತವಾಗಿ ಸಿಗುವುದರಿಂದ ಸುಣಗಾರರು ಕಷ್ಟಪಟ್ಟು ಸಿದ್ಧಗೊಳಿಸಿದ ಸುಣ್ಣ ಯಾರೂ ಕೇಳುವವರು ಇಲ್ಲದಂತಾಗಿದೆ. ಇಂದಲ್ಲ ನಾಳೆ ಸುಣ್ಣಕ್ಕೆ ಹೆಚ್ಚಿನ ಬೆಲೆ ಬಂದೀತು ಎಂದು ಸುಣಗಾರರು ಹಲವಾರು ಕಡೆ ಸುಣ್ಣದ ಭಟ್ಟಿಯನ್ನು ತೆಗೆದಿದ್ದರಾದರೂ ಅದು ಉಪಯೋಗವಾಗುತ್ತಿಲ್ಲ. ಈ ವೃತ್ತಿ ಮಾಡುತ್ತಿರುವವರು ಇತ್ತ ನಂಬಿಕೊಂಡ ವೃತ್ತಿ ಬಿಡಲಾಗದೇ, ಮುಂದುವರೆಸಲೂ ಆಗದೇ ಸಂಕಟಪಡುತ್ತಿದ್ದಾರೆ.

ಸುಣ್ಣದ ಕಲ್ಲು ಹಳ್ಳ ಮತ್ತು ಜಮೀನಿನಲ್ಲಿ ದೊರೆಯುವುದರಿಂದ ಇವರಿಗೆ ದೊಡ್ಡ ಸಮಸ್ಯೆ. ಸಮೀಪದ ಬದಾಮಿ ತಾಲೂಕಿನ ಚೋಳಚಗುಡ್ಡದ ಹಳ್ಳಕ್ಕೆ ಹೋಗಿ ಕಲ್ಲು ತರುತ್ತಾರೆ. ಇದಕ್ಕೆ ಸುಮಾರು ಒಂದು ಗಾಡಿಗೆ 4ರಿಂದ 5 ಸಾವಿರ ರೂ. ನೀಡಬೇಕಿದೆ. ಸುಣ್ಣದ ಹರಳನ್ನು ಸುಡಲು ಇದ್ದಿಲು ಬೇಕೆಬೇಕು. ಆದರೆ, ಈಗ ಇದ್ದಿಲು ಸಿಗುವುದೇ ದೊಡ್ಡ ಸಮಸ್ಯೆಯಾಗಿದೆ. ಕಾರಣ ಈಗ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುವುದರಿಂದ ಹಣ ಕೊಟ್ಟರೂ ಇದ್ದಿಲು ಸಿಗುತ್ತಿಲ್ಲ ಎಂಬ ಕೊರಗು ಇವರದ್ದಾಗಿದೆ.

ಸುಣ್ಣದ ಕಲ್ಲು, ಇದ್ದಿಲಿಗೆ ಹಣ ತೆತ್ತು ಕಷ್ಟಪಟ್ಟು ತಯಾರಿಸಿದ ಸುಣ್ಣಕ್ಕೆ ಮಾರುಕಟ್ಟೆಯಲ್ಲಿ ಒಂದು ಸೇರಿಗೆ 12ರಿಂದ 15 ರೂ. ಇದೆ. ಬರುವ ಈ ಅಲ್ಪ ಹಣದಲ್ಲೇ ತನ್ನ ಹಾಗೂ ಕುಟುಂಬ¨ಹೊಟ್ಟೆ ತುಂಬಿಸಿಕೊಳ್ಳಬೇಕಾದ ಪರಿಸ್ಥಿತಿ ಸುಣಗಾರರದಾಗಿದೆ. ಹಿಂದೆ ಮಣ್ಣಿನ ಮನೆಗಳು ಜಾಸ್ತಿ ಇದ್ದು, ಮನೆಗೆ ಹಬ್ಬ ಹರಿದಿನಗಳಲ್ಲಿ ಜನರು ಹೆಚ್ಚಾಗಿ ಸುಣ್ಣ ಹಚ್ಚುತ್ತಿದ್ದರು. ಆದರೆ, ಈಗ ಆರ್‌ಸಿಸಿ ಮನೆಗಳ ನಿರ್ಮಾಣವಾಗಿದಕ್ಕೆ ಸಿದ್ಧ ಸುಣ್ಣವನ್ನೇ ಬಳಸುತ್ತಾರೆ. ಜನರು ಕೂಡ ಜಗಮಗಿಸುವ ಹೊಸ ಸುಣ್ಣಕ್ಕೆ ಮಾರು ಹೋಗಿದ್ದರಿಂದ ಸುಣ್ಣವನ್ನು ಕೇಳುವರು ಇಲ್ಲದಾಗಿ ಸುಣ್ಣಸುಡುವ ಸುಣಗಾರನ ಬದುಕು ಸಂಕಷ್ಟಕ್ಕೆ ಸಿಲುಕಿದೆ.

ಈ ಹಿಂದೆ ಸುಣಗಾರರು ಹಬ್ಬ ಹರಿದಿನಗಳಲ್ಲಿ ಸುಣ್ಣವನ್ನು ಮನೆಮನೆಗೆ ಕೊಟ್ಟು ಹೋಗುತ್ತಿದ್ದರು. ಇದರಿಂದ ಬರುವ ಹಣ ಮತ್ತು ದವಸ ಧಾನ್ಯಗಳಿಂದ ಸುಖಜೀವನ ನಡೆಸುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿ ಹಾಗಿಲ್ಲ. ಇಲ್ಲಿನ ಜಕ್ಕಲಿ ಗ್ರಾಮದಲ್ಲಿ ಈ ವೃತ್ತಿಯನ್ನೇ ನಂಬಿ ಜೀವನ ಸಾಗಿಸುವ ಹಲವಾರು
ಕುಟುಂಬಗಳಿಗೆ ವೃತ್ತಿ ಭದ್ರತೆ ಮತ್ತು ಆದಾಯವಿಲ್ಲದಾಗಿದೆ. ಸರ್ಕಾರ ಇಂತಹ ಕುಟುಂಬಗಳಿಗೆ ನೆರವಾಗಬೇಕಿದೆ. 

ಮಳೆ-ಚಳಿ ಎನ್ನದೇ ನಮ್ಮ ಕೆಲಸದಲ್ಲಿ ನಾವು ತೊಡಗುತ್ತೇವೆ. ಕಲ್ಲುಗಳಿಗೆ ಬಹಳ ಬೇಡಿಕೆ ಇದೆ. ಆದರೂ ಬೇರೆ ಕಡೆಯಿಂದ ತಂದು ಸುಣ್ಣ ತಯಾರು ಮಾಡಲಾಗುತ್ತಿದೆ. ನಂತರ ಮಾರುಕಟ್ಟೆಗೆ ತೆಗೆದುಕೊಂಡು ಹೋದಾಗ ಸೇರಿಗೆ 12ರಿಂದ 15 ರೂ. ಸಿಗುತ್ತದೆ. ಸಿದ್ಧ ಬಣ್ಣ ಹಚ್ಚುವವರ ಸಂಖ್ಯೆ ಜಾಸ್ತಿ ಇರುವುದರಿಂದ ಬೇಡಿಕೆ ಕುಗ್ಗಿದೆ.
ಸಂಗಪ್ಪ ತುರಾಯದ
ಜಕ್ಕಲಿ ಗ್ರಾಮದ ಸುಣಗಾರ

ಕಳೆದ 45 ವರ್ಷಗಳಿಂದ ಸುಣ್ಣ ತಯಾರಿಸುತ್ತಿದ್ದೇವೆ. ಆದರೆ ನಾವು ಯಾವುದೇ ಅಭಿವೃದ್ಧಿಯಾಗಿಲ್ಲ. ನಮ್ಮಗೆ ಯಾವುದೇ ಆಸ್ತಿಯಿಲ್ಲ. ಸುಣ್ಣದ ಭಟ್ಟಿಯೇ ನಮ್ಮ ಆಸ್ತಿ.
ಲಕ್ಷ್ಮವ್ವ ತುರಾಯದ

ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.