ಗೆಳೆಯರ ಭವಿಷ್ಯ ಮತ್ತು ಬದುಕು


Team Udayavani, Aug 10, 2018, 6:00 AM IST

x-34.jpg

“ಇದು ಎಲ್ಲರಿಗೂ ಮೊದಲ ಸಿನಿಮಾ. ಇದರಿಂದ ಎಲ್ಲರಿಗೂ ಭವಿಷ್ಯವಿದೆ …’
– ಹೀಗೆ ಹೇಳಿ ಹಾಗೊಂದು ನಗೆ ಬೀರಿದರು ನಿರ್ದೇಶಕ ಅರುಣ್‌. ಅವರು ಹೇಳಿಕೊಂಡಿದ್ದು “ದಿವಂಗತ ಮಂಜುನಾಥನ ಗೆಳೆಯರು’ ಚಿತ್ರದ ಬಗ್ಗೆ. ಚಿತ್ರ ಮುಂದಿನವಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಅರುಣ್‌  “ಎಣ್ಣೆ  ಪಾರ್ಟಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದರು. ದಿವಂಗತ ಮಂಜುನಾಥನ ಗೆಳೆಯರು. ಲವ್‌, ಸಸ್ಪೆನ್ಸ್‌ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಅರುಣ್‌.

“ಸಿನಿಮಾ ನೋಡುವಾಗ, ನೈಜತೆ ಕಾಣಬೇಕು ಎಂಬ ಉದ್ದೇಶದಿಂದ ಎಲ್ಲವನ್ನೂ ನೈಜವಾಗಿರುವಂತೆ ಚಿತ್ರೀಕರಿಸಿದ್ದೇವೆ. ಇಲ್ಲಿ ಕಥೆಯೇ ಹೀರೋ. ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೆ ಒಂದೊಳ್ಳೆಯ ಸದಭಿರುಚಿಯ ಚಿತ್ರ ಕೊಡುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನೈಜತೆ ಇರಬೇಕು ಎಂಬ ಕಾರಣಕ್ಕೆ ಒರಿಜಿನಲ್‌ ಮಳೆಯಲ್ಲೇ ಚಿತ್ರೀಕರಿಸಿದ್ದೇವೆ. ಪ್ರತಿ ಡೈಲಾಗ್‌ ಕೂಡ ಫ್ರೆಂಡ್ಸ್‌ ಜೊತೆ ಮಾತಾಡಿದಂತಿರಲಿದೆ. ಒಂದು ಹೊಸ ಪ್ರಯತ್ನಕ್ಕೆ ನನ್ನ ತಂಡ ಬೆಂಬಲ ಚೆನ್ನಾಗಿತ್ತು. ಆ ಕಾರಣದಿಂದಲೆ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಲ್ಲರ ಎಫ‌ರ್ಟ್‌ನಿಂದ ಇದು ಮೂಡಿಬಂದಿದೆ. ದೊಡ್ಡ ಬಜೆಟ್‌ ಇಲ್ಲಿಲ್ಲ. ಆದರೆ, ಒಳ್ಳೇ ಕಥೆ ಇದೆ. ಮನಸ್ಸಿಗೆ ಹತ್ತಿರವಾಗುವಂತಹ ಅಂಶಗಳಿವೆ. ನಮ್ಮ ಕಾಲೇಜು ದಿನಗಳು ನೆನಪಾಗುತ್ತವೆ. ನಮ್ಮ ಹಳೆಯ ಗೆಳೆತನ ನೆನಪಾಗುತ್ತೆ’ ಎಂದು ವಿವರ ಕೊಟ್ಟ ಅರುಣ್‌, ಐವರು ಇಂಜಿನಿಯರ್‌ ಗೆಳೆಯರು ಬಹಳ ವರ್ಷಗಳ ನಂತರ ಪೋಲಿಸ್‌ ಸ್ಟೇಷನ್‌ನಲ್ಲಿ ಭೇಟಿಯಾದಾಗ ಒಂದು ಘಟನೆ ಬಿಚ್ಚಿಕೊಳ್ಳುತ್ತೆ. ಅದೇ ಚಿತ್ರದ ಹೈಲೆಟ್‌ ಎಂದರು ಅರುಣ್‌.

ರುದ್ರ ಪ್ರಯೋಗ್‌ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಅವರಿಗೆ ಇದು ಗುರುತಿಸಿಕೊಳ್ಳುವಂತೆ ಮಾಡುತ್ತೆ ಎಂಬ ವಿಶ್ವಾಸ. ಇದು ಕೇವಲ ಗೆಳೆಯರಿಗೆ ಮಾತ್ರವಲ್ಲ, ಇಡೀ ಫ್ಯಾಮಿಲಿಗೆ ಇಷ್ಟವಾಗುವಂತಹ ಚಿತ್ರವಾಗಲಿದೆ ಎಂಬ ಗ್ಯಾರಂಟಿ ಕೊಟ್ಟರು ಪ್ರಯೋಗ್‌.

ಸಚಿನ್‌ ಅವರಿಲ್ಲಿ ಮಂಜುನಾಥನ ಪಾತ್ರ ನಿರ್ವಹಿಸಿದ್ದಾರೆ. ಅವರದು ಜನರನ್ನು ಯಾಮಾರಿಸಿ, ಬದುಕು ನಡೆಸೋ ಪಾತ್ರವಂತೆ. ಒಂದು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅದೇ ಚಿತ್ರದ ತಿರುವು’ ಅಂದರು ಅವರು. ಶಂಕರಮೂರ್ತಿ, ಶೀತಲ್‌ ಪಾಂಡ್ಯ, ಅವಿನಾಶ್‌ ಮುದ್ದಪ್ಪ, ರವಿಪೂಜಾರ್‌, ನವೀನ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.  
 

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.