ಆದಿವಾಸಿಗಳಿಗೆ ಸವಲತ್ತು ನೀಡಲು ಸಿದ್ಧ


Team Udayavani, Aug 10, 2018, 6:55 AM IST

9bnp-3.jpg

ಬೆಂಗಳೂರು: ಆದಿವಾಸಿ ಸಮುದಾಯಗಳಿಗೆ ಸರ್ಕಾರ ಅಗತ್ಯ ಸೌಲತ್ತು ನೀಡಲು ಸಿದ್ದವಿದೆ ಎಂದು ಮುಖ್ಯಮಂತ್ರಿ
ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

24ನೇ ವಿಶ್ವ ಆದಿವಾಸಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆದಿವಾಸಿ ಸಮುದಾಯಗಳಿಗೆ ಸರ್ಕಾರ ಅಗತ್ಯ ಸೌಲತ್ತು ನೀಡಲು ಸಿದ್ಧವಿದೆ. ಆದಿವಾಸಿ ಸಮಾಜ ಕಷ್ಟದಲ್ಲಿದೆ ಎನ್ನುವ ನೋವು ನನಗಿದೆ. ಸರ್ಕಾರ ನಿಮ್ಮೆಲ್ಲರನ್ನು ಗುರುತಿಸುವಲ್ಲಿ ಕಡೆಗಣಿಸಿದೆ. ಶೈಕ್ಷಣಿಕವಾಗಿ  ನಾವು ನಿಮ್ಮನ್ನು ಕಡೆಗಣಿಸಿದ್ದೇವೆ. ನಿಮ್ಮ ಹಕ್ಕುಗಳನ್ನು ಪಡೆಯುವುದರಲ್ಲಿ ನಿಮಗೆ ಅನ್ಯಾಯವಾಗಿರುವ ಬಗ್ಗೆ ನಾನು ಗಮನಿಸಿದ್ದೇನೆ ಎಂದರು.

ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಕಡಿತಗೊಳಿಸುತ್ತಿರುವುದಾಗಿ ವರದಿಗಳು ಬರುತ್ತಿವೆ. ಶಾದಿ
ಭಾಗ್ಯ, ಮಾತೃಪೂರ್ಣ ಯೋಜನೆಗಳಲ್ಲಿ ಹಣ ಕಡಿತ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಆ ವಿಷಯವೇ ನನಗೆ ಗೊತ್ತಿಲ್ಲ. ನನಗೆ ಯಾವುದೇ ಜಾತಿ,ಪ್ರದೇಶ ಇಲ್ಲ. ನಾನು ಬಡವರ ಜತೆ ಬೆರೆಯುವಂತವನು.
ಸಾಮಾನ್ಯರೊಂದಿಗೆ ಮುಕ್ತವಾಗಿ ಬೆರೆಯುವುದರಿಂದಲೇ ಜನರು ಪ್ರತಿ ದಿನ ನನ್ನ ಮನೆ ಹಾಗೂ ವಿಧಾನಸೌಧದ ಮುಂದೆ ಬಂದು ನಿಲ್ಲುತ್ತಾರೆ. ವಿಧಾನಸೌಧ ಹಾಗೂ ಗೃಹ ಕಚೇರಿ ಪ್ರವೇಶಕ್ಕೆ ಯಾರಿಗೂ ನಿರ್ಬಂಧ ಹೇರಿಲ್ಲ. ಆ ರೀತಿಯ ಆದೇಶವನ್ನೂ ಮಾಡಿಲ್ಲ ಎಂದರು.

ಆದಿವಾಸಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಸ್ಯೆಗಳ ಮಾಹಿತಿ ಪಡೆಯುವಂತೆ ಸಚಿವರಿಗೆ ಸೂಚಿಸಿದ್ದೆ. ಆದರೆ, ಆದಿವಾಸಿಗಳನ್ನು ನಿರ್ಲಕ್ಷಿಸಿದರು ಎಂಬ ಆರೋಪ ಬರಬಾರದು ಎಂದು ಬಂದಿರುವುದಾಗಿ ತಿಳಿಸಿದರು.

ಕಲಬುರಗಿಯ ಕನಕಗುರು ಪೀಠಾಧ್ಯಕ್ಷ ಸಿದ್ದರಾಮನಂದಪುರಿ ಸ್ವಾಮೀಜಿ ಮಾತನಾಡಿ,ಮುಖ್ಯಮಂತ್ರಿ ಕುಮಾರಸ್ವಾಮಿ ತಾಯಿ ಕರುಳ ಸಂಸ್ಕೃತಿಯವರು. ಬೇರೆ ಮುಖ್ಯಮಂತ್ರಿಗಳು ಆದಿವಾಸಿಗಳ ಬಗ್ಗೆ ಮಲತಾಯಿ ಪ್ರೀತಿ ತೋರಿದ್ದರು. ಪ್ರಾಣಿಗಳಿಗಿಂತ ನಿಕೃಷ್ಠವಾಗಿ ಬದುಕುತ್ತಿರುವ ಆದಿವಾಸಿ ಜನರನ್ನು ಕಾಪಾಡುವ ಆಡಳಿತ ನೀಡಬೇಕು. ಆದಿವಾಸಿ ಜನಾಂಗ ಅವರಿಂದ ತಾಯಿ ಪ್ರೀತಿ ಬಯಸುತ್ತಿದೆ. ಅತ್ತೆ ಪ್ರೀತಿ ನಮಗೆ ಬೇಡ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌, ಸಚಿವ ಬಂಡೆಪ್ಪ ಕಾಂಶಪೂರ್‌, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಹಾಜರಿದ್ದರು.

ಕ್ಷಮೆಯಾಚಿಸಿದ ಸಿಎಂ
ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದಕ್ಕೆ ಕ್ಷಮೆ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ತಮ್ಮ ಮಗನ
ಚಲನಚಿತ್ರದ ಕುರಿತು ಮಾಧ್ಯಮಗೋಷ್ಠಿ ಇದ್ದಿದ್ದರಿಂದ ಒಬ್ಬ ತಂದೆಯಾಗಿ ಮಗನ ಭವಿಷ್ಯ ರೂಪಿಸಬೇಕಾದ ಜವಾಬ್ದಾರಿಯೂ ನನ್ನ ಮೇಲಿದೆ. ದಿನದ 24 ಗಂಟೆಯಲ್ಲಿ ಮಗನ ಮುಖ ನೋಡಲೂ ಆಗುತ್ತಿಲ್ಲ. ನನ್ನ ಕಷ್ಟ ನನಗೆ ಗೊತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಅರಣ್ಯ ಹಕ್ಕು ಕಾಯಿದೆಯಿಂದ ಬುಡಕಟ್ಟು ಜನಾಂಗಕ್ಕೆ ಯಾವುದೇ ಪ್ರಯೋಜನವಿಲ್ಲ. ಅರಣ್ಯ ಕಾಯ್ದೆಯನ್ನು ಸಡಿಲ ಮಾಡುವ ಅಗತ್ಯವಿದೆ.
ಪುಟ್ಟರಂಗಶೆಟ್ಟಿ, ಸಚಿವ

ಅರಣ್ಯ ಹಕ್ಕು ಕಾಯಿದೆ ಹೆಸರಿನಲ್ಲಿ ನಮಗೆ ನಿಷೇಧ ಹೇರಲಾಗಿದೆ. ಅರಣ್ಯ ಇಲಾಖೆಯವರು ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಆದಿವಾಸಿಗಳಿಗೆ ಅರಣ್ಯ ಗಾರ್ಡ್‌ ಹುದ್ದೆ ನೀಡಿದರೆ,ನಾವೇ ಅರಣ್ಯ ರಕ್ಷಿಸುತ್ತೇವೆ. ನಮಗೆ ಮನೆ ಕೊಡಿ.
– ಕೃಷ್ಣಯ್ಯ, ಆದಿವಾಸಿ ಅಲೆಮಾರಿ ಸಮುದಾಯದ
ಒಕ್ಕೂಟದ ಅಧ್ಯಕ್ಷ

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.