ಕೇರಳ ಮಳೆಗೆ 26 ಸಾವು


Team Udayavani, Aug 10, 2018, 6:00 AM IST

x-50.jpg

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಹಾಗೂ ಭೂಕುಸಿತಕ್ಕೆ 24 ಗಂಟೆಗಳಲ್ಲಿ 26 ಮಂದಿ ಅಸುನೀಗಿದ್ದಾರೆ. ಜತೆಗೆ ರಾಜ್ಯದಲ್ಲಿರುವ 22 ಅಣೆಕಟ್ಟುಗಳು ತುಂಬಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. 
ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ 17 ಮಂದಿ ಅಸುನೀಗಿದ್ದಾರೆ. ಈ ಪೈಕಿ ಒಂದೇ ಕುಟುಂಬದ ಐವರು ಸೇರಿದ್ದಾರೆ.  

ಸಿಎಂ ಸಭೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿರುವನಂತಪುರದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಭೂಸೇನೆ, ನೌಕಾ ಪಡೆ ಮತ್ತು ಐಎಎಎಫ್ನ ನೆರವು ಪಡೆದುಕೊಳ್ಳಲಾಗು ತ್ತದೆ ಎಂದು ಹೇಳಿದ್ದಾರೆ. ಜತೆಗೆ ಎನ್‌ಡಿಆರ್‌ಎಫ್(ರಾಷ್ಟ್ರೀಯ ವಿಪತ್ತು ನಿರ್ವ ಹಣಾ ಪಡೆ) ನೆರವೂ ಕೇಳಲಾಗಿದೆ ಎಂದಿದ್ದಾರೆ. ಈಗಾಗಲೇ ಕಲ್ಲಿಕೋಟೆಗೆ ಎನ್‌ಡಿಆರ್‌ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ನೌಕಾಪಡೆಯು ಡೈವರ್‌ಗಳ ನಾಲ್ಕು ತಂಡವನ್ನು ಕಳುಹಿಸಿದೆ. ಕಣ್ಣೂರು, ಪಾಲಕ್ಕಾಡ್‌, ವಯನಾಡ್‌ ಜಿಲ್ಲೆಗಳಲ್ಲಿ ಮನೆಗಳು, ಕಚೇರಿಗಳು ಜಲಾವೃತವಾಗಿವೆ.  

ಮುಂದೂಡಿಕೆ: ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಆಲಪ್ಪುಳ ಜಿಲ್ಲೆಯ ಪುನ್ನಂಬಳ ಕೆರೆಯಲ್ಲಿ ಆ.11ರಂದು ನಡೆಯಬೇಕಾಗಿದ್ದ ವಾರ್ಷಿಕ ನೆಹರೂ ಟ್ರೋಫಿ ದೋಣಿ ಪಂದ್ಯವನ್ನು ಮುಂದೂಡಲಾಗಿದೆ. ಜತೆಗೆ, ಇಡುಕ್ಕಿ, ಕೊಲ್ಲಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಮೀನುಗಾರರಿಗೆ ಶೋಧ: ಕೊಚ್ಚಿಯ ಮುನಾಂಬಂ ಬಂದರಿ ನಿಂದ 24 ನಾಟಿಕಲ್‌ ಮೈಲು ದೂರದಲ್ಲಿ ನಾಪತ್ತೆಯಾಗಿರುವ 9 ಮೀನುಗಾರರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ನೌಕಾ ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಈ ಕಾರ್ಯದಲ್ಲಿ ನಿರತವಾಗಿವೆ. ಮಂಗಳವಾರ 14 ಮಂದಿ ಇದ್ದ ದೋಣಿಗೆ ಹಡಗು ಡಿಕ್ಕಿ ಹೊಡೆದು 9 ಮಂದಿ ಮೀನುಗಾರರು ನಾಪತ್ತೆಯಾಗಿದ್ದರು. ಈ ಸಂದರ್ಭದಲ್ಲಿ ಮೂವರು ಸಾವಿಗೀಡಾಗಿದ್ದರು. ಬುಧವಾರ ನಡೆದಿದ್ದ ಶೋಧ ಕಾರ್ಯಾಚರಣೆಯಲ್ಲಿ “ಅಲ್‌ ಮಾ ರಹಾನ್‌’ ಎಂಬ ದೋಣಿಯ ಪಳೆಯುಳಿಕೆ ಪತ್ತೆಯಾಗಿತ್ತು.

26 ವರ್ಷಗಳ ಬಳಿಕ ಕ್ರೆಸ್ಟ್‌ಗೇಟ್‌ ಓಪನ್‌
26 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಇಡುಕ್ಕಿಯ ಜಲಾಶಯದಲ್ಲಿ ನೀರು ತುಂಬಿ ದ್ದ ರಿಂದ ಚೆರುತ್ತೋನಿ ಅಣೆಕಟ್ಟಿನ ಕ್ರೆಸ್ಟ್‌ಗೇಟ್‌ಗಳ ನ್ನು ತೆರೆಯಲಾಗಿದೆ. ಏಷ್ಯಾದಲ್ಲಿಯೇ ಅತ್ಯಂತ ದೊಡ್ಡದಾಗಿರುವ ಕಮಾನು ಅಣೆಕಟ್ಟು ಇದಾಗಿದೆ. ಗುರುವಾರ ಇದರ ನೀರಿನ ಮಟ್ಟ 2,398. 98 ಅಡಿ ಇತ್ತು. ಪೂರ್ಣ ಪ್ರಮಾಣ 2,403 ಅಡಿ ಆಗಿದೆ. ಪೆರಿಯಾರ್‌ ನದಿಗೆ ಎರ್ನಾಕುಲಂ ಜಿಲ್ಲೆಯ ಇಡಮಲಯಾರ್‌ನಲ್ಲಿ ಕಟ್ಟಲಾಗಿರುವ ಅಣೆಕ ಟ್ಟಿನ ನಾಲ್ಕು ಕ್ರೆಸ್ಟ್‌ಗೇಟ್‌ಗಳನ್ನು ತೆರೆಯಲಾಗಿದೆ. ಹೀಗಾಗಿ, ನದಿಯ ಕೆಳ ಭಾಗದಲ್ಲಿರುವ ಪ್ರದೇಶಗಳು ಜಲಾವೃತವಾಗಿದೆ. ಮುಂಜಾಗ ರೂಕತಾ ಕ್ರಮವಾಗಿ ಜನರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.