ಬೆಳ್ಳಾರೆ: ಪಾರ್ಕಿಂಗ್‌ ಪೀಕಲಾಟ, ಚರಂಡಿ ಸಮಸ್ಯೆ


Team Udayavani, Aug 10, 2018, 2:05 AM IST

bellare-9-8.jpg

ಬೆಳ್ಳಾರೆ: ಸುಳ್ಯ ತಾಲೂಕಿನ ದೊಡ್ಡ ಪಟ್ಟಣಗಳ ಸಾಲಿನಲ್ಲಿ ಸುಳ್ಯದ ನಂತರದ ಸ್ಥಾನ ಬೆಳ್ಳಾರೆಗಿದೆ. ದೊಡ್ಡ ಪಟ್ಟಣಗಳಿಗೆ ಸ್ಪರ್ಧೆ ನೀಡುವಂತೆ ಬಹು ವೇಗವಾಗಿ ವಾಣಿಜ್ಯ ನಗರವಾಗಿ ರೂಪುಗೊಳ್ಳತೊಡಗಿದೆ. ಸುತ್ತಮುತ್ತಲಿನ ಊರುಗಳಾದ ಚೊಕ್ಕಾಡಿ-ಕುಕ್ಕುಜಡ್ಕ, ಪಂಜ, ಸುಬ್ರಹ್ಮಣ್ಯ, ಬಾಳಿಲ, ಐವರ್ನಾಡು, ಪಾಲ್ತಾಡು ಸಹಿತ ಅನೇಕ ಗ್ರಾಮಗಳ ಜನರು ಬೆಳ್ಳಾರೆಯನ್ನೇ ತಮ್ಮ ವ್ಯವಹಾರಕ್ಕೆ ಅವಲಂಬಿಸಿದ್ದಾರೆ. ಆದರೆ, ಈ ಪಟ್ಟಣದ ಪ್ರಮುಖ ಸಮಸ್ಯೆ – ಪಾರ್ಕಿಂಗ್‌ ವ್ಯವಸ್ಥೆ.

ದಿನ ಕಳೆದಂತೆ ಹೈಟೆಕ್‌ ಪಟ್ಟಣಗಳಿಗೆ ಸಮಾನವಾದ ವೇಗದಲ್ಲಿ ಬೆಳ್ಳಾರೆಯೂ ಬೆಳೆಯುತ್ತಿದೆ. ಪ್ರತಿಯೊಂದಕ್ಕೂ ಸುಳ್ಯದತ್ತ ಮುಖ ಮಾಡುತ್ತಿದ್ದ ಜನ ಹತ್ತಿರದಲ್ಲೇ ಪರ್ಯಾಯ ವ್ಯವಸ್ಥಗಳಿರುವುದರಿಂದ ಬೆಳ್ಳಾರೆ ಪೇಟೆಗೆ ಬರುತ್ತಿದ್ದಾರೆ. ಪ್ರಯಾಣಿಕರು, ಗ್ರಾಹಕರ ಸಂಖ್ಯೆ ಬೆಳೆದಂತೆ ವಾಹನ ದಟ್ಟಣೆಯೂ ಹೆಚ್ಚುತ್ತಿದೆ. ಪಟ್ಟಣದ ಯಾವ ಪ್ರದೇಶದಲ್ಲೂ ಸರಿಯಾದ ವಾಹನ ವ್ಯವಸ್ಥೆಯಿಲ್ಲದೆ ವಾಹನಗಳನ್ನು ರಸ್ತೆಯ ಮೇಲೆಯೇ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ಬೆಳ್ಳಾರೆ ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಬಹಳ ತೊಡಕಾಗುತ್ತಿದೆ. ಹಲವಾರು ಬಾರಿ ದೊಡ್ಡ ಪಟ್ಟಣಗಳಂತೆ ಇಲ್ಲಿಯೂ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಕೂಡ ಆಗುತ್ತಿರುತ್ತದೆ. ವಾಹನ ಸವಾರರಿಗೆ ಅಪಘಾತಗಳು ತಪ್ಪಿದ್ದಲ್ಲ. ಇವುಗಳನ್ನೆಲ್ಲ ಸಂಬಾಳಿಸುತ್ತಾ ದಿನದ ಅಂತ್ಯಕ್ಕೆ ಪೊಲೀಸರು ಬಸವಳಿದು ಹೋಗುತ್ತಾರೆ.

ಅಸಮರ್ಪಕ ಚರಂಡಿ ವ್ಯವಸ್ಥೆ
ಬೆಳ್ಳಾರೆ ಪಂಚಾಯತ್‌ ನ ನಿರ್ಲಕ್ಷ್ಯವೂ ಇಲ್ಲಿಯ ಕೆಳಪೇಟೆಯಲ್ಲಿ ಅವ್ಯವಸ್ಥೆಯಿಂದ ಕೂಡಿದ ಚರಂಡಿಯಿಂದ ಗೋಚರಕ್ಕೆ ಬರುತ್ತದೆ. ಇಲ್ಲಿ ಮಲಿನವಾದ ಚರಂಡಿಯ ನೀರು ರಭಸದ ಮಳೆ ಬಂದರೆ ರಸ್ತೆಯ ಮೇಲೆಯೇ ಹರಿಯುತ್ತದೆ. ಇದರಿಂದಾಗಿ ಸಾಂಕ್ರಾಮಿಕ ಕಾಯಿಲೆಗಳ ಭೀತಿ ಬೆಳ್ಳಾರೆಯ ಜನತೆಯನ್ನು ಬಾಧಿಸುತ್ತಿದೆ. ಚರಂಡಿಯಿಂದ ಮುಖ್ಯರಸ್ತೆ ಸಾಕಷ್ಟು ಎತ್ತರದಲ್ಲಿದೆ. ಚರಂಡಿಗಳ ಬದಿಯಲ್ಲಿ ಕಲ್ಲುಗಳ ತಡೆಗೋಡೆ ಇಲ್ಲದೆ ಅದರೊಳಗೆ ಮಕ್ಕಳು, ದ್ವಿಚಕ್ರ ವಾಹನಗಳು ಜಾರಿ ಬೀಳುವ ಅಪಾಯವಿದೆ.

ಸುಳ್ಯದಂತೆ ಬೆಳ್ಳಾರೆಯಲ್ಲಿಯೂ ಪಾರ್ಕಿಂಗ್‌ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಿದೆ. ರಸ್ತೆಯ ಇಕ್ಕೆಲಗಳಲ್ಲಿ ದಿನಕ್ಕೆ ಒಂದು ಬದಿಯಂತೆ ಮೇಲಿನ ಪೇಟೆಯಿಂದ ಕೆಳಗಿನ ಪೇಟೆಯ ವರೆಗೆ ವಾಹನಗಳನ್ನು ನಿಲ್ಲಿಸುವ ನಿಯಮ ರೂಪಿಸಬೇಕಿದೆ. ಪೊಲೀಸ್‌ ಇಲಾಖೆಯ ಸಹಕಾರದೊಂದಿಗೆ ಬೆಳ್ಳಾರೆ ಗ್ರಾ.ಪಂ. ಇದನ್ನು ಜಾರಿಗೆ ತರಬೇಕು. ಈ ಮೂಲಕ ಟ್ರಾಫಿಕ್‌ ಜಾಮ್‌ ನಿಯಂತ್ರಿಸಬೇಕು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪಾರ್ಕಿಂಗ್‌ಗೆ ಜಾಗ
ನಾವು ಹಲವು ಬಾರಿ ಸಭೆ ಕರೆದಿದ್ದು, ಸಮಸ್ಯೆ ನಿವಾರಣೆಗೆ ಹಲವು ಯೋಜನೆಗಳನ್ನು ರೂಪಿಸಿದ್ದೇವೆ. ವಾಹನ ಪಾರ್ಕಿಂಗ್‌ ಗೆ ಸ್ಥಳ ಗೊತ್ತು ಮಾಡಿದ್ದು, ದೊಡ್ಡ ವಾಹನಗಳನ್ನು ಅಲ್ಲಿಯೇ ನಿಲ್ಲಿಸುವಂತೆ ಮಾಡಲು ಯೋಜನೆ ರೂಪಿಸುತ್ತಿದ್ದೇವೆ. ದ್ವಿಚಕ್ರ-ನಾಲ್ಕು ಚಕ್ರದ ವಾಹಗಳನ್ನು ದಿನಕ್ಕೊಂದು ಬದಿಯಂತೆ ನಿಲ್ಲಿಸುವಂತೆ ಮಾಡಲಾಗುತ್ತದೆ. ಚರಂಡಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲು ಸೂಚಿಸಲಾಗುತ್ತದೆ. 
– ಶಕುಂತಳಾ ನಾಗರಾಜ್‌, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರು

ದಂಡ, ಎಚ್ಚರಿಕೆ
ಇರುವುದರಲ್ಲಿಯೇ ಹೊಂದಿಕೊಂಡು ನಮ್ಮ ಶಕ್ತಿ ಮೀರಿ ಸಂಚಾರ ಹಾಗೂ ವಾಹನ ದಟ್ಟಣೆಯನ್ನು ನಿಯಂತ್ರಿಸುತ್ತಿದ್ದೇವೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್‌ ಮಾಡುವವರಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡುವ ಮೂಲಕ ಇದೀಗ ತಕ್ಕಮಟ್ಟಿಗೆ ಹದ್ದುಬಸ್ತಿನಲ್ಲಿ ಇಡಲಾಗಿದೆ. ಇದಕ್ಕಾಗಿ ಹಲವಾರು ಯೋಜನೆಗಳು ರೂಪುಗೊಂಡಿದ್ದು ಜಾರಿಗೆ ಬಂದರೆ ಟ್ರಾಫಿಕ್‌ ಹತೋಟಿಗೆ ತರಬಹುದು. 
– ಪೊಲೀಸ್‌ ಅಧಿಕಾರಿ, ಬೆಳ್ಳಾರೆ

— ಬಾಲಚಂದ್ರ ಕೋಟೆ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.