ಸಂವಿಧಾನದ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸಿ


Team Udayavani, Aug 10, 2018, 10:02 AM IST

gul-1.jpg

ಕಲಬುರಗಿ: ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ದೈರ್ಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಸ್‌ಪಿ. ಎನ್‌. ಶಶಿಕುಮಾರ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪೊಲೀಸ್‌ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ ಅಂಶಗಳು ಮತ್ತು ಕಾನೂನುಗಳನ್ನು ಬೋಧಿಸಲಾಗಿದೆ. ಅವುಗಳ ರೀತ್ಯ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಪೊಲೀಸ್‌ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದು ಹೇಳಿದರು.

ಪೊಲೀಸ್‌ ಇಲಾಖೆ ಶಿಸ್ತಿಗೆ ಹೆಸರಾಗಿದೆ. ಪೊಲೀಸರು ಸಾರ್ವಜನಿಕರ ನಿರೀಕ್ಷೆಗಳನ್ನು ತಲುಪಿ ಅವರಲ್ಲಿ ಭರವಸೆ ಮೂಡಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡಿ ರಕ್ಷಣೆ ನೀಡಬೇಕು. ಸಶಸ್ತ್ರ ಪೊಲೀಸ್‌ ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗಣೇಶ ಹಬ್ಬ, ರಂಜಾನ್‌ ಹಬ್ಬಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಿ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪೊಲೀಸ್‌ ಇಲಾಖೆ ಒಬ್ಬ ಸಿಬ್ಬಂದಿ ತನ್ನ
ನಿವೃತ್ತಿ ಕಾಲದವರೆಗೆ ಕೈಗೊಳ್ಳುವ ಎಲ್ಲ ಕರ್ತವ್ಯಗಳನ್ನು ಪ್ರಶಿಕ್ಷಣಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿ ಹೇಳಲಾಗಿದೆ. ಇದರ ಪ್ರಯೋಜನವನ್ನು ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ಎಸ್‌ಪಿ ಹಾಗೂ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ ಪ್ರಾಂಶುಪಾಲ ಜಯಪ್ರಕಾಶ ವರದಿ ವಾಚನ ಮಾಡಿ, ಕಲಬುರಗಿಯ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯಿಂದ ಈವರೆಗೆ 9 ಸಿವಿಲ್‌, 6 ಸಶಸ್ತ್ರ ಮೀಸಲು ಹಾಗೂ 1 ಮಹಿಳಾ ಪೊಲೀಸ್‌ ಪೇದೆ ತಂಡದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಒಟ್ಟು 16 ತಂಡಗಳಿಗೆ ಮೂಲ ತರಬೇತಿ ನೀಡಲಾಗಿದೆ. ಒಟ್ಟು 2563 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಇಂದು ಪಥಸಂಚಲನದಲ್ಲಿ ಭಾಗಿಯಾಗಿರುವ 17ನೇ ತಂಡದ 146 ಪ್ರಶಿಕ್ಷಣಾರ್ಥಿಗಳಿಗೆ ಮೂಲ ತರಬೇತಿ ನೀಡಲಾಗಿದೆ. ಪ್ರಶಿಕ್ಷಣಾರ್ಥಿಗಳಿಗೆ ಒಳಾಂಗಣ, ಹೊರಾಂಗಣ ತರಬೇತಿಗಳಲ್ಲದೇ ವಿಶೇಷ ತರಬೇತಿಗಳನ್ನು ಸಹ ನುರಿತ ತಜ್ಞರಿಂದ ನೀಡಲಾಗಿದೆ ಎಂದು ವಿವರಿಸಿದರು.

ಸರ್ವೋತ್ತಮ ಪ್ರಶಿಕ್ಷಣಾರ್ಥಿ ಮಹೇಶ ಆರ್‌. ಬಿದರಮಳಿ, ಒಳಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಪಡೆದ ಜಿ. ಖಲೀಪ್‌ ಪೀರ್‌, ದ್ವಿತೀಯ ಬಹುಮಾನ ನಾಗರಾಜ, ತೃತೀಯ ಬಹುಮಾನ ಅನೀಲ ಟಿ.ವೈ., ಹೊರಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಮಹೇಶ ಆರ್‌. ಬಿದರಮಳಿ, ದ್ವಿತೀಯ ಬಹುಮಾನ ಹನುಮಂತ ದಳವಾಯಿ,
ತೃತೀಯ ಬಹುಮಾನ ಹಸನಸಾಬ್‌ ಜಕಾತಿ, ಫೈರಿಂಗ್‌ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಶಿವಾ ಎಸ್‌.ಆರ್‌., ದ್ವಿತೀಯ ಬಹುಮಾನ ಹನುಮಂತ ದಳವಾಯಿ, ತೃತೀಯ ಬಹುಮಾನ ಮಹೇಶ ಆರ್‌. ಬಿದರಮಳಿ ಅವರಿಗೆ ವಿತರಿಸಲಾಯಿತು.

ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಪ್ರತಿಜ್ಞಾ ವಿಧಿ ಬೋಧಿಸಿದರು. ಕಲಬುರಗಿ ಎ ವಿಭಾಗದ ಡಿವೈಎಸ್‌ಪಿ ಲೋಕೇಶ, ನಾಗನಹಳ್ಳಿ ಪೊಲೀಸ್‌ ತರಬೇತಿ ಕಾಲೇಜಿನ ಪ್ರಾಂಶುಪಾಲ ಸವಿತಾ ಹೂಗಾರ, ಕೆಎಸ್‌ಆರ್‌ಪಿ 6ನೇ ಪಡೆ ಕಮಾಂಡಂಟ್‌ ಬಸವರಾಜ ಜಿಳ್ಳೆ, ಹಿರಿಯ ಪೊಲೀಸ್‌ ಅಧಿಕಾರಿಗಳು, ನಿವೃತ್ತ ಪೊಲೀಸ್‌ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳ ಪೋಷಕರು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.