ಮಾಹಿತಿ ಕೊರತೆ; ಆಕಾಂಕ್ಷಿಗಳ ಪರದಾಟ


Team Udayavani, Aug 10, 2018, 12:05 PM IST

ray-2.jpg

ಲಿಂಗಸುಗೂರು: ಸ್ಥಳೀಯ ಪುರಸಭೆ ಚುನಾವಣೆಗೆ ಆ.10ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆದರೆ ನಾಮಪತ್ರ ಸಲ್ಲಿಕೆಗೆ ಬೇಕಾದ ದಾಖಲೆಗಳು, ಯಾರಲ್ಲಿ ಸಲ್ಲಿಸಬೇಕೆಂಬು ಎಂಬ ಸ್ಪಷ್ಟ ಮಾಹಿತಿ ಇಲ್ಲದೇ ಆಕಾಂಕ್ಷಿಗಳು ಪರದಾಡುವಂತೆ ಆಗಿದೆ.

ಪುರಸಭೆ ಚುನಾವಣೆಗೆ ಆ.2ರಂದು ಅಧಿಸೂಚನೆ ಹೊರಡಿಸಲಾಗಿದೆ. ಆ.10ರಿಂದ 17ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ತೋಟಗಾರಿಕೆ ಹಿರಿಯ ನಿರ್ದೇಶಕ ಸುರೇಶ, ಬಿಇಒ ಚಂದ್ರಶೇಖರ ಭಂಡಾರಿ, ರೇಷ್ಮೆ ಸಹಾಯಕ ನಿರ್ದೇಶಕ ರಾಜೇಂದ್ರ ದೇವದುರ್ಗ ಅವರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ತೋಟಗಾರಿಕೆ, ಪುರಸಭೆ ಕಚೇರಿ, ಬಿಇಒ ಕಚೇರಿಗಳಲ್ಲಿ ನಾಮಪತ್ರ ಸಲ್ಲಿಕೆಗೆ ಕೇಂದ್ರಗಳನ್ನು ತೆರೆಯಲಾಗುವುದು
ಎಂದು ಹೇಳಲಾಗುತ್ತಿದೆ. ಆದರೆ ಯಾವ ವಾರ್ಡ್‌ನವರು ಎಲ್ಲಿ ನಾಮಪತ್ರ ಸಲ್ಲಿಸಬೇಕೆಂಬ ಮಾಹಿತಿ ಇಲ್ಲದಾಗಿದೆ.

ನಾಮಪತ್ರ ಸಲ್ಲಿಸುವ ವೇಳೆ ಯಾವ ದಾಖಲಾತಿ ಲಗತ್ತಿಸಬೇಕೆಂಬ ಬಗ್ಗೆ ಯಾರ ಬಳಿಯೂ ಮಾಹಿತಿ ಇಲ್ಲದಾಗಿದೆ. ಮಾಹಿತಿ ಕೇಳಲು ತಹಶೀಲ್ದಾರರಿಗೆ ದೂರವಾಣಿ ಕರೆ ಮಾಡಿದರೆ ಅವರೂ ಸಹ ಕರೆ  ಕರಿಸುತ್ತಿಲ್ಲಾ
ಎಂಬದು ಆಕಾಂಕ್ಷಿಗಳ ಆರೋಪವಾಗಿದೆ.

ಪ್ರಮಾಣಪತ್ರಕ್ಕೆ ಅಲೆದಾಟ: ಚುನಾವಣೆ ನಿಮಿತ್ತವಾಗಿ ಅಗತ್ಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ನೀಡುವಂತೆ ಚುನಾವಣೆ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಸಹ ಜಾತಿ, ಆದಾಯ, ಬೇಬಾಕಿ ಪ್ರಮಾಣ ಪತ್ರಕ್ಕೆ ಆಕಾಂಕ್ಷಿಗಳು ತಹಶೀಲ್ದಾರ್‌ ಕಚೇರಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.

ಒಂದು ಪ್ರಮಾಣಪತ್ರಕ್ಕೆ ಆ ದಾಖಲಾತಿ ತನ್ನಿ, ಈ ದಾಖಲಾತಿ ತನ್ನಿ ಎಂದು ತಹಶೀಲ್ದಾರ್‌ ಕಚೇರಿ ಸಿಬ್ಬಂದಿಗಳು ಆಂಕಾಕ್ಷಿಗಳನ್ನು ಅಲೆದಾಡಿಸುತ್ತಿದ್ದಾರೆ. ಪರಿಣಾಮ ಪಟ್ಟಣದಿಂದ 3 ಕಿ.ಮೀ. ಅಂತರದಲ್ಲಿರುವ ಮಿನಿ ವಿಧಾನಸೌಧಕ್ಕೆ ಆಕಾಂಕ್ಷಿಗಳು ಪದೇಪದೆ ಅಲೆದಾಡಬೇಕಾಗಿದೆ.

ತಹಶೀಲ್ದಾರರು ಕಚೇರಿಯಲ್ಲಿ ಲಭ್ಯವಿರದ ಕಾರಣ ತಹಶೀಲ್ದಾರ್‌ ಗ್ರೇಡ್‌-2 ಅವರಿಂದ ಸಹಿ ಮಾಡಿಸಬಹುದಾಗಿದೆ. ಅವರು ಇದಕ್ಕೆ ಸಹಿ ಮಾಡದ ಕಾರಣ ಪ್ರಮಾಣಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಕಡಿಮೆ ಸಮಯ: ನಾಮಪತ್ರ ಸಲ್ಲಿಕೆಗೆ 10ರಿಂದ 17ರವರೆಗೆ ಅವಕಾಶವಿದೆ. ಆದರೆ ಇದರಲ್ಲಿ ನಡುವೆ ಮೂರು ದಿನ ರಜೆ ಇದೆ. ಇರುವ ನಾಲ್ಕು ದಿನಗಳಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿಸಿಕೊಂಡು ನಾಮಪತ್ರ ಸಲ್ಲಿಕೆ ಮಾಡುವ ಅನಿವಾರ್ಯತೆ ಎದುರಾಗಿದೆ. ಈ ಮಧ್ಯೆ ಅಧಿಕಾರಿ ಗಳು ಮಾಹಿತಿ ನೀಡುವಲ್ಲಿ ವಿಳಂಬ ಮಾಡುತ್ತಿರುವುದರಿಂದ ಆಕಾಂಕ್ಷಿಗಳಿಗೆ ತೊಂದರೆ ಎದುರಾಗಿದೆ

ಚುನಾವಣೆ ನಡೆಯುತ್ತಿದೆಯೋ ಇಲ್ಲವೋ ತಿಳಿಯದಾಗಿದೆ. ತಹಶೀಲ್ದಾರ್‌ ಕಚೇರಿಗೆ ಹೋದರೂ ಮಾಹಿತಿ ಇಲ್ಲದಾಗಿದೆ. ಆದರೆ ಒಂದೊಂದು ಪ್ರಮಾಣಪತ್ರಕ್ಕಾಗಿ ಕಚೇರಿ ಕಚೇರಿಗೆ ಅಲೆದಾಡುವಂತಾಗಿದೆ. ತಹಶೀಲ್ದಾರರು ನಮ್ಮ ಕರೆ ಸ್ವೀಕರಿಸುತ್ತಿಲ್ಲ.  
 ರುದ್ರಪ್ಪ ಬ್ಯಾಗಿ, ಚುನಾವಣಾ ಸ್ಪರ್ಧಾಕಾಂಕ್ಷಿ

ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ ಅಷ್ಟೇ, ಆದರೆ ಕಚೇರಿ ಎಲ್ಲಿ, ನಾಮಪತ್ರ ಸಲ್ಲಿಸುವವರು ಯಾವ ದಾಖಲೆಗಳನ್ನು ಲಗತ್ತಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಇವತ್ತು ಕೊಡಬಹುದು. ಒಂದು ವೇಳೆ
ಕೊಟ್ಟರೆ ಮಾಹಿತಿ ನೀಡುತ್ತೇವೆ. 
 ಚಂದ್ರಶೇಖರ ಭಂಡಾರಿ, ಚುನಾವಣಾಧಿಕಾರಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.