ಖೋಟಾ ನೋಟಿಗೆ ಮೆಜೆಸ್ಟಿಕ್‌ ಅಡ್ಡೆ


Team Udayavani, Aug 10, 2018, 12:15 PM IST

khota-notu.jpg

ಬೆಂಗಳೂರು: ರಾಜ್ಯದ ಖೋಟಾ ನೋಟು ದಂಧೆ ಬೆನ್ನುಹತ್ತಿರುವ ರಾಷ್ಟ್ರೀಯ ತನಿಖಾ ದಳ ಪೊಲೀಸರು, ಬೆಂಗಳೂರಿನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಮೆಜೆಸ್ಟಿಕ್‌ ಪ್ರದೇಶವೇ ಖೋಟಾ ನೋಟು ಸರಬರಾಜಾಗುವ ಪ್ರಮುಖ ಕೇಂದ್ರ ಎಂಬ ಮಾಹಿತಿ ಬಯಲಿಗೆ ಬಂದಿದೆ.

ಪಶ್ಚಿಮ ಬಂಗಾಳದಿಂದ ಖೋಟಾ ನೋಟುಗಳನ್ನು ತರುವ ದಂಧೆಕೋರರು, ಅವುಗಳನ್ನು ಸ್ಥಳೀಯ ದಂಧೆಕೋರರಿಗೆ ತಲುಪಿಸಲು ಮೆಜೆಸ್ಟಿಕ್‌ ಆಸುಪಾಸಿನ ಸ್ಥಳಗಳನ್ನೇ ಕೇಂದ್ರವಾಗಿಸಿಕೊಂಡಿದ್ದರು. ಗಂಗಾಧರ ಕೋಲ್ಕರ, ಓರ್ವ ಮಹಿಳೆ, ಪಶ್ಚಿಮ ಬಂಗಾಳ ಮೂಲದ ಸಜ್ಜಾದ್‌ ಅಲಿ, ಎಂ.ಜಿ.ರಾಜು ಎಂಬವರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಈ ಅಂಶ ಬೆಳಕಿಗೆ ಬಂದಿವೆ.

ಪಶ್ಚಿಮ ಬಂಗಾಳದಿಂದ ತರುವ ಲಕ್ಷ ಲಕ್ಷ ಖೋಟಾ ನೋಟುಗಳನ್ನು ಆರೋಪಿಗಳು ಬಹುತೇಕ ರೈಲುಗಳ ಮೂಲಕವೇ ಸಾಗಿಸುತ್ತಿದ್ದರು. ಈ ನೋಟುಗಳನ್ನು  ಸ್ಥಳೀಯ ದಂಧೆಕೋರರ ಪೈಕಿ ಒಬ್ಬ ಮಾತ್ರ ಪಡೆದುಕೊಳ್ಳುತ್ತಿದ್ದ. ಬಳಿಕ ಉಳಿದ ಆರೋಪಿಗಳಿಗೆ ನೀಡುತ್ತಿದ್ದ. ಇವೇ ನಕಲಿ ನೋಟುಗಳನ್ನು ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮೂಲದ ಆರೋಪಿಗಳಿಗೆ ತಲುಪಿಸುವ ವ್ಯವಸ್ಥೆ ಆಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಮಾ.8ರಂದು ಪಶ್ಚಿಮ ಬಂಗಾಳದ ದಲೀಮ್‌ ಮಿಯಾ, ತಾನು ತಂದಿದ್ದ 3.50 ಲಕ್ಷ ರೂ. ಮೌಲ್ಯದ ಖೋಟಾ ನೋಟುಗಳನ್ನು ಮೆಜೆಸ್ಟಿಕ್‌ ಬಳಿಯ ಲಾಡ್ಜ್ ಒಂದರಲ್ಲಿ ಆರೋಪಿ ಅಶೋಕ್‌ ಕುಂಬಾರ್‌ಗೆ ನೀಡಿದ್ದ. ಆತನಿಂದ ಪಡೆದ ಹಣದಲ್ಲಿ ಒಂದು ಲಕ್ಷ ರೂ. ಮೌಲ್ಯದ ಖೋಟಾ ನೋಟುಗಳನ್ನು ಮತ್ತೋರ್ವ ಆರೋಪಿ ರಾಜೇಂದ್ರ ಪಾಟೀಲ್‌ಗೆ ನೀಡಿದ್ದ ಅಶೋಕ್‌, 1.50 ಲಕ್ಷ ರೂ.ಗಳನ್ನು ಗಂಗಾಧರ ಕೋಲ್ಕರನಿಗೆ ಕೊಟ್ಟು, ಉಳಿದ ಒಂದು ಲಕ್ಷವನ್ನು ತನ್ನಲ್ಲಿಯೇ ಇರಿಸಿಕೊಂಡಿದ್ದ.

ಅದೇ ರೀತಿ 2017ರ ಡಿಸೆಂಬರ್‌ 28ರಂದು ದಲೀಮ್‌ ಮಿಯಾ ತಂದಿದ್ದ 6.80 ಲಕ್ಷ ರೂ. ಖೋಟಾ ನೋಟುಗಳಲ್ಲಿ 2.50 ಲಕ್ಷ ರೂ. ಪಡೆದುಕೊಂಡಿದ್ದ ಗಂಗಾಧರ, ಅಷ್ಟೂ ನೋಟುಗಳನ್ನು ಚಲಾವಣೆ ಮಾಡಿದ್ದ. ಚಿಕ್ಕೋಡಿ ಪ್ರಕರಣದ ಬಳಿಕ ಖೋಟಾ ನೋಟು ಚಲಾವಣೆ ಸ್ಥಳವನ್ನು ಆರೋಪಿಗಳು ಮೆಜೆಸ್ಟಿಕ್‌ನಿಂದ ಬೇರೆಡೆಗೆ ಸ್ಥಳಾಂತರಿಸಿದ್ದರು ಎಂದು ಮೂಲಗಳು ತಿಳಿಸಿವೆ. 

ಏನಿದು ಚಿಕ್ಕೋಡಿ ಪ್ರಕರಣ?: ಚಿಕ್ಕೋಡಿಯ ಖೋಟಾ ನೋಟು ಪತ್ತೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಗಂಗಾಧರ ಕೋಲ್ಕರ, ಮಹಿಳೆ,  ಪಶ್ಚಿಮ ಬಂಗಾಳ ಮೂಲದ ಸಜ್ಜಾದ್‌ ಅಲಿ ಹಾಗೂ ಎಂ.ಜಿ ರಾಜು ಎಂಬ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದು, ಅವರ ಬಳಿ ಇದ್ದ ನಕಲಿ ನೋಟು ವಿನಿಮಯಕ್ಕೆ ಸಂಬಂಧಿಸಿದ ಡೈರಿ, ಟೆಲಿಪೋನ್‌ ನಂಬರ್‌ಗಳ ಪುಸ್ತಕ ವಶಕ್ಕೆ ಪಡೆಯಲಾಗಿದೆ.

ಕಳೆದ ಮಾರ್ಚ್‌ನಲ್ಲಿ ಚಿಕ್ಕೋಡಿಯ ಖೋಟಾ ನೋಟು ಪ್ರಕರಣದಲ್ಲಿ ಮೂವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದ ಎನ್‌ಐಎ ಅಧಿಕಾರಿಗಳಿಗೆ ಬಾಂಗ್ಲಾ ಗಡಿಯಿಂದ ಬೆಂಗಳೂರಿಗೆ ಖೋಟಾ ನೋಟು ಸರಬರಾಜಾಗುತ್ತಿದ್ದ ವಿಚಾರ ಗಮನಕ್ಕೆ ಬಂದಿತ್ತು. ಅಲ್ಲದೆ, ರಾಜ್ಯದ ಖೋಟಾ ನೋಟು ದಂಧೆ ಬೇರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿರುವ ಮಾಹಿತಿ ಕೂಡ ದೊರೆತಿತ್ತು.

ನಂತರ ತನಿಖೆ ಚುರುಕುಗೊಳಿಸಿದ ಎನ್‌ಐಎ ತಂಡ, ಖೋಟಾ ನೋಟು ಜಾಲದಲ್ಲಿ ಸಕ್ರಿಯವಾಗಿರುವ ಓರ್ವ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 2000 ರೂ. ಮುಖಬೆಲೆಯ ಒಟ್ಟು 7 ಲಕ್ಷ ರೂ. ಜಪ್ತಿ ಮಾಡಿದೆ. ಅಲ್ಲದೆ, ಜಾಲದಲ್ಲಿ ಸಕ್ರಿಯರಾಗಿರುವ ಇನ್ನೂ ಹಲವು ಮಂದಿ ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಗಳೆಲ್ಲರೂ ಹಲವು ವರ್ಷಗಳಿಂದ ಈ ಜಾಲದಲ್ಲಿ ಸಕ್ರಿಯರಾಗಿದ್ದು, ಪಶ್ಚಿಮ ಬಂಗಾಳದಿಂದ ಬರುವ ಖೋಟಾ ನೋಟುಗಳನ್ನು ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಇನ್ನಿತತ ಭಾಗಗಳಲ್ಲಿ ಚಲಾವಣೆ ಮಾಡುತ್ತಿದ್ದರು. ಖೋಟಾ ನೋಟು ಬದಲಾವಣೆಗೆ ನೀಡುವ  ಕಮಿಷನ್‌ ಆಸೆಗೆ ಈ ದಂಧೆಯಲ್ಲಿ ಭಾಗಿಯಾಗಿದ್ದರು ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ದಂಧೆಯ ಉಸ್ತುವಾರಿ ಹೊತ್ತಿದ್ದ ಗಂಗಾಧರ!: ಈ ಹಿಂದೆ ಪಶ್ಚಿಮ ಬಂಗಾಳದಿಂದ ರಾಜ್ಯಕ್ಕೆ ಬರುವ ಖೋಟಾ ನೋಟುಗಳನ್ನು ಏಜೆಂಟರ ಮೂಲಕ ವಿನಿಮಯ ಮಾಡಿಸುತ್ತಿದ್ದ ಅಶೋಕ್‌ ಕುಂಬಾರ್‌, ಮಾ.12ರಂದು ಎನ್‌ಐಎ ಅಧಿಕಾರಿಗಳ ಬಲೆಗೆ ಬಿದ್ದಿದ್ದ. ಇದಾದ ಕೆಲ ದಿನಗಳವರೆಗೆ ತಲೆಮರೆಸಿಕೊಂಡಿದ್ದ ಗಂಗಾಧರ ಕೋಲ್ಕರ, ನಕಲಿ ನೋಟು ದಂಧೆಯ ಹೊಣೆ ವಹಿಸಿಕೊಂಡಿದ್ದ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಅದೇ ರೀತಿ ಕಳೆದ ಮಾರ್ಚ್‌ನಲ್ಲಿ ದಲೀಮ್‌ ಮಿಯಾ ಬಂಧನದ ಬಳಿಕ ಬಂಗಾಳದಿಂದ ಖೋಟಾ ನೋಟುಗಳನ್ನು ತರುವ ಕೆಲಸವನ್ನು ಸಜ್ಜಾದ್‌ ಅಲಿ ಮಾಡುತ್ತಿದ್ದ. ಆತನಿಂದ ಖೋಟಾ ನೋಟು ಪಡೆದುಯುತ್ತಿದ್ದ ಗಂಗಾಧರ್‌, ಉಳಿದ ಆರೋಪಿಗಳಿಗೆ ನೀಡಿ ಚಲಾವಣೆ ಮಾಡಿಸುತ್ತಿದ್ದ ಎಂದು ತಿಳಿದು ಬಂದಿದೆ.

ಮಾಸ್ಟರ್‌ ಮೈಂಡ್‌ಗಳಿಗೆ ಬಲೆ?: ಕೊಲ್ಕತ್ತಾ ಪೊಲೀಸರಿಂದ ಬಂಧಿತನಾಗಿ ಜೈಲಿನಲ್ಲಿರುವ ಶಹನೋಯಾಜ್‌ ಕಸೂರಿ ಅಲಿಯಾಸ್‌ ಇಶಾಕ್‌ ಶೇಖ್‌, ಆತನ ಸಹಚರರಾದ ಸರೀಫ‌ುಲ್‌ ಇಸ್ಲಾಂ ಹಾಗೂ ಸುಕ್ರುದ್ದೀನ್‌ ಅನ್ಸಾರಿ ರಾಜ್ಯಕ್ಕೆ ಖೋಟಾ ನೋಟು  ಸರಬರಾಜು ಮಾಡುತ್ತಿದ್ದಾರೆ ಎಂದು ಪತ್ತೆಹಚ್ಚಿರುವ ಎನ್‌ಐಎ, ಅವರ ಬಂಧನಕ್ಕೆ ಬಲೆಬೀಸಿದೆ. ಖೋಟಾ ನೋಟು ದಂಧೆ ಪ್ರಕರಣದಲ್ಲೇ ಶಹನೋಯಾಜ್‌ ಜೈಲು ಸೇರಿದ ಬಳಿಕ, ರಾಜ್ಯಕ್ಕೆ ಖೋಟಾ ನೋಟು ಸರಬರಾಜು ಮಾಡುವ ಉಸ್ತುವಾರಿಯನ್ನು ಸರೀಪುಲ್‌, ಸುಕ್ರುದ್ದೀನ್‌ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲು ಬಲೆಗೆಬಿದ್ದ ದಲೀಮ್‌!: ಖೋಟಾ ನೋಟು ಚಲಾವಣೆ ಸಂಬಂಧ ಮಾರ್ಚ್‌ 12ರಂದು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ದಲೀಮ್‌ ಮಿಯಾನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು, ಆತ ನೀಡಿದ ಚಿಕ್ಕೋಡಿಯ ಅಶೋಕ್‌ ಕುಂಬಾರ್‌ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ  2000 ಮುಖಬೆಲೆಯ 82 ಸಾವಿರ ರೂ. ಖೋಟಾ ನೋಟುಗಳು ಪತ್ತೆಯಾಗಿದ್ದವು. ಅದೇ ರೀತಿ ರಾಯಭಾಗದ ರಾಜೇಂದ್ರ ಪಾಟೀಲ್‌ನನ್ನೂ ಬಂಧಿಸಿದ್ದರು. ಸದ್ಯ ಮೂವರು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.