ಭಾರತ ಪ್ರಾಚೀನ ಜ್ಞಾನ ಮರೆತಿದೆ


Team Udayavani, Aug 11, 2018, 11:29 AM IST

bharata.jpg

ಬೆಂಗಳೂರು: ಸಮಾಜ ಇಂದು ಭಾವನಾತ್ಮಕ ಬಿಕಟ್ಟು ಎದುರಿಸುತ್ತಿದ್ದು, ಈ ಬಿಕ್ಕಟ್ಟಿನಿಂದ ಹೊರಬರಲು ಆಧುನಿಕ ಭಾರತದಲ್ಲಿ ಪ್ರಾಚೀನ ಜ್ಞಾನವು ಶಿಕ್ಷಣದ ಭಾಗವಾಗಬೇಕು ಎಂದು ಟಿಬೆಟ್‌ನ ಧಾರ್ಮಿಕ ಗುರು ದಲೈ ಲಾಮಾ ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರು ನಗರದ ಹೋಟೆಲ್‌ ಒಂದರಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಧನ್ಯವಾದ ಕರ್ನಾಟಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತವು ತನ್ನ ಪ್ರಾಚೀನ ಜ್ಞಾನವನ್ನು ಮರೆತುಬಿಟ್ಟಿದೆ. ಇದರಿಂದ ಭಾವನಾತ್ಮಕ ಬಿಕ್ಕಟ್ಟು ಉಂಟಾಗಿದೆ. ಈ ಬಿಕ್ಕಟ್ಟು ಮನುಷ್ಯನನ್ನು ರಚನಾತ್ಮಕ ಮನಸ್ಥಿತಿಯಿಂದ ವಿನಾಶಕಾರಿ ಮನಸ್ಥಿತಿಯತ್ತ ಕೊಂಡೊಯ್ಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣದಲ್ಲಿ ಪ್ರಾಚೀನ ಜ್ಞಾನ ಕುರಿತ ಪಠ್ಯ ಅಳವಡಿಸಬೇಕು. ಆ ಮೂಲಕ ಪ್ರಾಚೀನ ಜ್ಞಾನವನ್ನು ಮರುಸ್ಥಾಪನೆ ಮಾಡಬೇಕು ಎಂದರು.

ಪ್ರಾಚೀನ ಜ್ಞಾನವನ್ನು ಒಳಗೊಂಡ ಶಿಕ್ಷಣವು ಮಕ್ಕಳಲ್ಲಿ ಆರೋಗ್ಯದ ಜತೆಗೆ ನಿರ್ಮಲ ಭಾವನೆಗಳನ್ನು ಬಿತ್ತುವಂತಿರಬೇಕು. ಜತೆಗೆ ಮನಶಾÏಸ್ತ್ರ, ತತ್ವಶಾಸ್ತ್ರ ಮತ್ತಿತರ ವಿಷಯಗಳನ್ನೂ ಒಳಗೊಂಡಿರಬೇಕು ಅಂದಾಗ, ಈ ಭಾವನಾತ್ಮಕ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯ ಎಂದರು.

ಭಾರತವು ಅಹಿಂಸೆ ಪ್ರತಿಪಾದಿಸುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಅದು ನಿಜವಾದ ಕರುಣೆಯಿಂದ ಕೂಡಿರುವಂತಹದ್ದು. ಆ ಸಂಸ್ಕೃತಿಯನ್ನು ಟಿಬೆಟ್‌ ಪೋಷಿಸಿಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಭಾರತ “ಗುರು’ವಾಗಿದ್ದರೆ, ಟಿಬೆಟ್‌ ಅದರ “ಚೇಲಾ’ ಆಗಿತ್ತು. ಆದರೆ, ಈಗ ಇದು ತಿರುವು-ಮುರುವು ಆಗಿದೆ ಎಂದು ಸೂಚ್ಯವಾಗಿ ಹೇಳಿದರು.

ನಿಜಲಿಂಗಪ್ಪ ಮೆಲುಕು: ಟಿಬೆಟ್‌ನ ಸಂಸ್ಕೃತಿ ಮತ್ತು ಶಿಕ್ಷಣವನ್ನು ಉಳಿಸಿ-ಬೆಳೆಸುವಲ್ಲಿ ಭಾರತದ ಪಾತ್ರ ಮಹತ್ತರವಾಗಿದೆ. 1956ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು ಟಿಬೆಟಿಯನ್ನರಿಗೆ ಆಶ್ರಯ ಕೊಟ್ಟರು. ನಂತರ ಟಿಬೆಟ್‌ ಕಾಲೊನಿ ಸ್ಥಾಪನೆಗೆ ಬೆಂಬಲಿಸಿದರು. ಅದೇ ರೀತಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಮುಂದೆಬಂದು, ಟಿಬೆಟ್‌ ನಿರಾಶ್ರಿತರಿಗೆ ಭೂಮಿ ಕೊಟ್ಟು, ಆಶ್ರಯ ನೀಡಿದರು. ಟಿಬೆಟ್‌ ಯಾವಾಗಲೂ ಭಾರತಕ್ಕೆ ಋಣಿಯಾಗಿದೆ ಎಂದು ಸ್ಮರಿಸಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ದಿವಂಗತ ಎಸ್‌. ನಿಜಲಿಂಗಪ್ಪ ಅವರು ಟಿಬೆಟಿಯನ್ನರಿಗೆ ಅಂದು ಆಶ್ರಯ ನೀಡಿದರು. ಈಗ ಟಿಬೆಟಿಯನ್ನರು ನಮ್ಮೊಳಗೆ ಒಬ್ಬರಾಗಿದ್ದಾರೆ. ಅವರದ್ದೇ ಆದ ಕೊಡುಗೆ ನೀಡುತ್ತಿದ್ದಾರೆ. ಸಂಸ್ಕೃತಿಗಳ ವಿನಿಮಯಕ್ಕೆ ಇದು ಅನುವು ಮಾಡಿಕೊಟ್ಟಿದೆ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ಕನ್ನಡ ಮತ್ತು ಟಿಬೆಟ್‌ ಸಂಸ್ಕೃತಿಯ ಸಮ್ಮಿಲನಕ್ಕೆ “ಧನ್ಯವಾದ ಕರ್ನಾಟಕ’ ವೇದಿಕೆಯಾಯಿತು. ಒಂದೆಡೆ ಕುವೆಂಪು ಅವರ “ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಹಾಡು, ಮತ್ತೂಂದೆಡೆ ಟಿಬೆಟ್‌ನ ಸಾಂಪ್ರದಾಯಿಕ ನೃತ್ಯ ಗಮನಸೆಳೆಯಿತು. ಕೇಂದ್ರ ಟಿಬೆಟ್‌ ಆಡಳಿತ ಅಧ್ಯಕ್ಷ ಡಾ.ಲೊಬ್ಸಂಗ್‌ ಸಿಂಘೆ, ಗಡಿಪಾರು ಟಿಬೆಟನ್‌ ಸಂಸತ್ತಿನ ಅಧ್ಯಕ್ಷ ಖೆಂಪೊ ಸೋನಂ ತೇಂಫೆಲ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.