ಪಾರ್ಕ್‌ಗಳಲ್ಲಿ ರಂಗತಾಲೀಮಿಗೆ ಮನವಿ


Team Udayavani, Aug 11, 2018, 11:30 AM IST

parkgallalli.jpg

ಬೆಂಗಳೂರು: ರಾಜಧಾನಿಯಲ್ಲೀಗ ರಂಗ ಚಟುವಟಿಕೆಗೆ ಜಾಗದ ಕೊರತೆ ಎದುರಾಗಿದೆ. ರವೀಂದ್ರ ಕಲಾಕ್ಷೇತ್ರ ಬಿಟ್ಟರೆ ಉಳಿದು ಕಡೆಗಳಲ್ಲಿ ನಾಟಕಗಳ ತಾಲೀಮಿಗೂ ಸ್ಥಳವಕಾಶ ಇಲ್ಲ. ಹೀಗಾಗಿ, ಇದು ರಂಗಭೂಮಿ ಕಲಾವಿದರನ್ನು ಚಿಂತೆಗೀಡು ಮಾಡಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ನಾಟಕ ಅಕಾಡೆಮಿ, 198 ವಾರ್ಡ್‌ಗಳ ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಪಾರ್ಕ್‌ಗಳಲ್ಲಿ ಚಿಕ್ಕ ವೇದಿಕೆಗಳಿದ್ದು, ಇವುಗಳನ್ನು ರಂಗತಾಲೀಮು ಬಳಕೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ. ಸಿಲಿಕಾನ್‌ ಸಿಟಿಯಲ್ಲಿ ರಂಗ ಚಟುವಟಿಕೆಗಳಿಗೆ ಬರವಿಲ್ಲ. ಹಲವು ತಂಡಗಳಿದ್ದು, ಚಟುವಟಿಕೆಗಳು ನಿರಂತರವಾಗಿರುತ್ತವೆ. ಆದರೆ, ಈ ತಂಡಗಳಿಗೆ ತಾಲೀಮು ನಡೆಸುವುದೆಲ್ಲಿ ಎನ್ನುವುದೇ ಸಮಸ್ಯೆಯಾಗಿದೆ.

ಕಲಾಕ್ಷೇತ್ರಕ್ಕೆ ಭಾರೀ ಬೇಡಿಕೆ: ಕನ್ನಡ ಭವನಕ್ಕೆ ಹೊಂದಿಕೊಂಡಿರುವ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಅಕಾಡೆಮಿಯ ಮೂರು ತಾಲೀಮು ಕೊಠಡಿಗಳಿವೆ. ಆದರೆ ಈ ಕೊಠಡಿಗಳಿಗೆ ಬೇಡಿಕೆ ಜಾಸ್ತಿ. ನಗರದಲ್ಲಿ ಅಂದಾಜು 200ಕ್ಕೂ ಅಧಿಕ ರಂಗ ತಂಡಗಳಿದ್ದು, ಎಲ್ಲವೂ ಇದನ್ನೇ ಅವಲಂಬಿಸಬೇಕೆನ್ನುವ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ನಗರದ ಹಲವು ಬಡಾವಣೆಗಳ ಉದ್ಯಾನವನಗಳಲ್ಲಿರುವ ವೇದಿಕೆಗಳನ್ನು ಬಳಸಿಕೊಳ್ಳುವ ಬಗ್ಗೆ ಅಕಾಡೆಮಿ ಮನವಿಗೆ ಮುಂದಾಗಿದೆ.

ಸಂಜೆ ವೇಳೆ ಅವಕಾಶ ನೀಡಿ: ಬಿಬಿಎಂಪಿ ನಿರ್ಮಾಣ ಮಾಡಿರುವ ಬಹುತೇಕ ಉದ್ಯಾನವನಗಳಲ್ಲಿನ ವೇದಿಕೆಗಳಲ್ಲಿ ವಿದ್ಯುತ್‌ ಸಂಪರ್ಕವಿಲ್ಲ. ಕನಿಷ್ಠ ಲೈಟ್‌ಗಳನ್ನಾದರೂ ಅಳವಡಿಸಿ, ಸಂಜೆ ಸಮಯದಲ್ಲಿ ರಂಗತಾಲೀಮು ಮತ್ತು ಪೂರ್ವಸಿದ್ಧತೆ ನಡೆಸಲು ಅವಕಾಶ ನೀಡಿದರೆ ಸಾಕು. ರಂಗ ಬೆಳವಣಿಗೆಗೂ ಪೂರಕವಾಗಲಿದೆ ಎಂದು ಅಕಾಡೆಮಿ ಅಧಿಕಾರಿಗಳು ಹೇಳುತ್ತಾರೆ.

ರಂಗಾಸಕ್ತಿ ಬೆಳೆಸಲೂ ಸಹಕಾರಿ: ಉದ್ಯಾನವನದಲ್ಲಿರುವ ವೇದಿಕೆಗಳನ್ನು ರಂಗತಾಲೀಮು ಬಳಕೆಗೆ ನೀಡಿದರೆ, ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ನಾಟಕ ನೋಡುವ ಅಭಿರುಚಿ ಹೆಚ್ಚಾಗಲಿದೆ. ರಂಗಸಕ್ತಿಯೂ ಹೆಚ್ಚಲಿದೆ. ವಾಯು ವಿಹಾರಕ್ಕೆ ಹಿರಿಯರ ಜತೆ ಪುಟ್ಟ ಮಕ್ಕಳು ಬರುತ್ತಾರೆ. ಮಕ್ಕಳಿಗೂ ರಂಗತಾಲೀಮು ನೋಡುವ ಅವಕಾಶ ಸಿಗದಲಿದೆ. ಮುಂದೊಂದು ದಿನ ಈ ಮಕ್ಕಳು ರಂಗಭೂಮಿಯಲ್ಲಿ ಮತ್ತು ಸಿನಿಮಾರಂಗದಲ್ಲಿ ದೊಡ್ಡ ಶಕ್ತಿಯಾಗಿ ಬೆಳೆಯುವ ಅವಕಾಶವು ಸಿಗಲಿದೆ ಎಂದು ಹಿರಿಯ ರಂಗ ನಿರ್ದೇಶಕ ಬಿ.ವಿ.ರಾಜರಾಂ ಹೇಳುತ್ತಾರೆ.

ನಗರದಲ್ಲಿ ಹಲವು ರಂಗ ತಂಡಗಳಿದ್ದು, ಅವುಗಳಿಗೆ ರಂಗ ತಾಲೀಮು ನಡೆಸಲು ಜಾಗದ ಕೊರತೆ ಉಂಟಾಗಿದೆ. ಹೀಗಾಗಿ ಬಿಬಿಎಂಪಿ ಪಾರ್ಕ್‌ಗಳಲ್ಲಿರುವ ಪುಟ್ಟ ಉದ್ಯಾನವನದ ಬಳಕೆಗಾಗಿ, ಅಕಾಡೆಮಿ ಮೇಯರ್‌ ಅವರಿಗೆ ಪತ್ರಬರೆದಿದೆ.
-ಲೋಕೇಶ್‌, ನಾಟಕ ಅಕಾಡೆಮಿ ಅಧ್ಯಕ್ಷ

ಉದ್ಯಾವನಗಳಲ್ಲಿರುವ ಪುಟ್ಟ ವೇದಿಕೆಗಳ ಬಳಕೆ ಮಾಡಿಕೊಳ್ಳುವ ಸಂಬಂಧ ನಾಟಕ ಅಕಾಡೆಮಿ ಮೇಯರ್‌ ಅವರಿಗೆ ಮನವಿ ಮಾಡಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಇವುಗಳ ನಿರ್ವಹಣೆ ಜವಾªರಿಯನ್ನು ಕೂಡ ಒಂದು ಇಲಾಖೆಗೆ ವಹಿಸಬೇಕು.
-ಶ್ರೀನಿವಾಸ್‌ ಜಿ ಕಪ್ಪಣ್ಣ, ಹಿರಿಯ ರಂಗಕರ್ಮಿ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.