ದೇವಾಲಯ ಮುಳುಗಡೆ
Team Udayavani, Aug 12, 2018, 11:20 AM IST
ಎಚ್.ಡಿ.ಕೋಟೆ: ಕೇರಳದ ವೈನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಿಂದಾಗಿ ಕಬಿನಿ ಜಲಾಶಯದ ಒಳ ಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿದ್ದು ಪರಿಣಾಮ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.
ನವಸತಿ ಪ್ರದೇಶ ಹಾಗೂ ರೈತರ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ, ಕಪಿಲೆಯ ರೌದ್ರ ನರ್ತನಕ್ಕೆ ನದಿ ಪಾತ್ರದ ರೈತರಿಗೆ ಬೆಳೆ ನಷ್ಟದ ಜತೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಅದರಲ್ಲೂ ತಾಲೂಕಿನ ಗಡಿಭಾಗದ ಗ್ರಾಮಗಳ ಜನರ ಸ್ಥಿತಿ ಹೇಳತೀರದಾಗಿದ್ದು, ಕೆಲವು ಮನೆಗಳು ಜಲಾವೃತವಾಗಿದ್ದು ಮನೆ ಕಳೆದುಕೊಂಡವರು ಸರ್ಕಾರಿ ಶಾಳೆಗಳಲ್ಲಿ ಆಶ್ರಯಪಡೆದಿದ್ದಾರೆ.
ಜಲಾಶಯದ ಮುಂಭಾಗದ ನದಿ ಪಾತ್ರದ ಜನರ ಕೃಷಿ ಭೂಮಿಗಳು ಜಲಾವೃತಗೊಂಡು ಕೆರೆಗಳಂತಾಗಿದ್ದು, ಅಪಾರ ಹನಿ ಸಂಭವಿಸಿದೆ. ನದಿ ಪ್ರವಾಹದಿಂದ ಜತೆಗೆ ವಾಸದ ಮನೆಗಳಿಗೆ ನೀರು ನುಗ್ಗಿದೆ.
ಕಬಿನಿ ಜಲಾಶಯದಿಂದ ಹೊರ ಹರಿವಿನ ಪ್ರಮಾಣ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರಿಗೆ ಈಗಾಗಲೇ ಎಚ್ಚರಿಕೆಯಿಂದಿರಲೂ ತಾಲೂಕು ಆಡಳಿತ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ