ಸಾಕ್ಷ್ಯಚಿತ್ರದಲ್ಲಿ ಜಾನಪದರ ಬದುಕು


Team Udayavani, Aug 12, 2018, 12:11 PM IST

dalita.jpg

ಬೆಂಗಳೂರು: ಜಾನಪದ ಕ್ಷೇತ್ರಕ್ಕೆ ನಾಡಿನ ದಲಿತ ಕಲಾವಿದರ ಕೊಡುಗೆಯನ್ನು ದಾಖಲಿಸಲು ಕರ್ನಾಟಕ ಜಾನಪದ ಅಕಾಡೆಮಿ ಮುಂದಾಗಿದ್ದು, ಆಯ್ದ 61 ಜಾನಪದ ಕಲಾವಿದರ ಕುರಿತ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಇದೇ ಮೊದಲ ಬಾರಿಗೆ ಇಂತಹ ವಿನೂತನ ಪ್ರಯತ್ನಕ್ಕೆ ಅಕಾಡೆಮಿ ಕೈ ಹಾಕಿದ್ದು, ಕಲಾವಿದರ ಬದುಕು, ಬರಹ, ಜಾನಪದ ಪರಂಪರೆಯನ್ನು ಸಾಕ್ಷ್ಯಚಿತ್ರದ ರೂಪದಲ್ಲಿ ಸಾಕ್ಷೀಕರಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.

ರಾಜ್ಯದ ಹಲವು ಭಾಗಗಳಲ್ಲಿ ಜಾನಪದ ಕಲೆಯನ್ನೇ ಉಸಿರಾಗಿಸಿಕೊಂಡವರು ಸದ್ದಿಲ್ಲದೇ ಅದರ ಪ್ರಸಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲೂ ಕಲಾಪ್ರತಿಭೆ ಮೆರೆದಿದ್ದಾರೆ. ಇಂತಹ ಸಾಧಕರ ಜೀವನ ಚರಿತ್ರೆಯನ್ನು ಸಾಕ್ಷ್ಯಚಿತ್ರದ ಮೂಲಕ ಕಟ್ಟಿಕೊಡುವ ಪ್ರಯತ್ನ ಇದಾಗಿದೆ. ಕಲಾವಿದರ ಜೀವನ ಮತ್ತು ಸಾಧನೆ ಮುಂದಿನ ಪೀಳಿಗೆಗೆ ಪ್ರೇರಣೆ ಆಗಲಿ ಎಂಬುದು ಅಕಾಡೆಮಿಯ ಉದ್ದೇಶ.

ಈ ಯೋಜನೆ ಜಾನಪದ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್‌ ಅವರ ಕನಸಿನ ಕೂಸು. ಈ ಹಿಂದೆ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿದ್ದ ವೇಳೆ ಅವರು ದಲಿತ ಜಾನಪದ ಕಲಾವಿದರ ಸಾಕ್ಷ್ಯಚಿತ್ರ ನಿರ್ಮಿಸುವ ಚಿಂತಿಸಿದ್ದರು. ಅದರಂತೆ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ತಜ್ಞರ ಸಮಿತಿ ನೇಮಿಸಿ ಯೋಜನೆಯ ರೂಪುರೇಷೆ ಸಿದ್ಧಪಡಿಸುವ ಪ್ರಯತ್ನವೂ ನಡೆದಿತ್ತು. ಬಳಿಕ ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು.

ಇದೀಗ ಅಕಾಡೆಮಿ ಅಧ್ಯಕ್ಷ ಟಾಕಪ್ಪ ಕಣ್ಣೂರು ಅವರು ಅಕಾಡೆಮಿಯ ಹಳೆಯ ಚಿಂತನೆಗೆ ನೀರೆರೆಯಲು ಹೊರಟಿದ್ದಾರೆ. ಆರ್ಥಿಕ ನೆರವು ಮತ್ತು ಪೋಷಣೆ ಇಲ್ಲದೆ ಸಾಕಷ್ಟು ಜಾನಪದ ಕಲೆಗಳು ಅಳಿವಿನಂಚಿನಲ್ಲಿವೆ. ಜತೆಗೆ ಬಹಳಷ್ಟು ಕಲಾವಿದರು ಇಳಿ ವಯಸ್ಸಿನರಾಗಿದ್ದು, ಅವರ ಕೊಡುಗೆಯನ್ನು ದಾಖಲಿಸುವ ನಿಟ್ಟಿನಲ್ಲಿ ಸಣ್ಣ ಪ್ರಯತ್ನ ಎಂದು ಅಧ್ಯಕ್ಷರು ಹೇಳುತ್ತಾರೆ.  

1.2 ಕೋಟಿ ರೂ. ಮೊತ್ತದ ಯೋಜನೆ: ಕಲಾವಿದರ ಸಾಕ್ಷ್ಯಚಿತ್ರಗಳ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ತಗುಲಲಿದೆ ಎಂದು ಅಂದಾಜಿಸಲಾಗಿದೆ. ಒಬ್ಬ ಕಲಾವಿದರ‌ ಸಾಧನೆಯನ್ನು ಚಿತ್ರ ರೂಪದಲ್ಲಿ ಹಿಡಿದಿಡಲು ಸುಮಾರು 3 ಲಕ್ಷ  ರೂ. ಖರ್ಚಾಗಲಿದೆ. ಹೀಗಾಗಿ ಅಕಾಡೆಮಿಯಲ್ಲಿನ ಎಸ್‌ಸಿಪಿ- ಟಿಎಸ್‌ಪಿ ಅನುದಾನವನ್ನು ಬಳಸಿಕೊಳ್ಳಲು ಚಿಂತಿಸಿದೆ. ಈ ಪ್ರಸ್ತಾವದ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಗಳು, ಸಚಿವರ ಗಮನಕ್ಕೆ ತಂದಿದೆ.

ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡ್ಬೇಕು: ಯೋಜನೆ ಸಂಬಂಧ ನೀಲಿನಕ್ಷೆ ಸಿದ್ಧಪಡಿಸಿರುವ ಅಕಾಡೆಮಿಯು ಸರ್ಕಾರದ ಅನುಮತಿ ಪಡೆಯುವ ನಿರೀಕ್ಷೆಯಲ್ಲಿದೆ. ಸಾಕ್ಷ್ಯಚಿತ್ರ ನಿರ್ಮಾಣ ಕಾರ್ಯವನ್ನು ಟೆಂಡರ್‌ ಮೂಲಕ ಒಬ್ಬ ವ್ಯಕ್ತಿಗೆ ನೀಡಬೇಕೋ ಅಥವಾ ಸಾಕ್ಷ್ಯಚಿತ್ರ ನಿರ್ಮಾಣ ಸಂಸ್ಥೆಗೆ ನೀಡಬೇಕೋ ಎಂಬುದನ್ನು ಸರ್ಕಾರ ನಿರ್ಧರಿಸಬೇಕಿದೆ. ಹೀಗಾಗಿ, ಸರ್ಕಾರದ ಸೂಚನೆ ಬಳಿಕ ಸಾಕ್ಷ್ಯಚಿತ್ರ ನಿರ್ಮಾಣ ಕಾರ್ಯ ಶುರುವಾಗಲಿದೆ  ಎಂದು  ಅಕಾಡೆಮಿ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ವೆಬ್‌ಸೈಟ್‌ನಲ್ಲಿ ಸಾಕ್ಷ್ಯಚಿತ್ರ: ಸುಮಾರು 15 ತಾಸುಗಳ ಡಿಜಿಟಲ್‌ ಆತ್ಮಕಥನ ಇದಾಗಿರಲಿದೆ. ಈ ಎಲ್ಲಾ ಸಾಕ್ಷ್ಯಚಿತ್ರಗಳನ್ನು ಜಾನಪದ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಗ್ರಹಾಲಯದಲ್ಲಿ ಸಂರಕ್ಷಿಸಿಡಲಾಗುತ್ತದೆ. ಅಲ್ಲದೆ, 15 ಗಂಟೆಗಳ ಕಥನವನ್ನು ಒಂದು ಗಂಟೆಗೆ ಸಂಕ್ಷಿಪ್ತಗೊಳಿಸಿ ಜಾನಪದ ಅಕಾಡೆಮಿಯ ವೆಬ್‌ಸೆಟ್‌ನಲ್ಲಿ ಪ್ರಕಟಿಸಲು ಚಿಂತಿಸಿದೆ.

ನಾಡಿನ ಜಾನಪದ ಕಲೆ ಅಭಿವೃದ್ಧಿಗಾಗಿ ಅಕಾಡೆಮಿ ಹಲವು ಯೋಜನೆಗಳನ್ನು ರೂಪಿಸಿದೆ. ಇದರಲ್ಲಿ ಕಲಾವಿದರ ಸಾಕ್ಷ್ಯಚಿತ್ರ ನಿರ್ಮಾಣ ಮಾಡುವುದು ಸೇರಿದೆ. ಇತ್ತೀಚಿನ ದಿನಗಳಲ್ಲಿ ಜಾನಪದ ಕಲೆಗಳು ನಶಿಸುತ್ತಿದು,ª ಅವುಗಳನ್ನು ಮುಂದಿನ ತಲೆಮಾರಿಗೆ ಹಿಡಿದಿಟ್ಟುಕೊಳ್ಳುವ ಕೆಲಸ ಇದಾಗಿದೆ.
-ಟಾಕಪ್ಪ ಕಣ್ಣೂರು, ಜಾನಪದ ಅಕಾಡೆಮಿ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.