ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ: ಶೈಕ್ಷಣಿಕ ದತ್ತು ಸ್ವೀಕಾರ


Team Udayavani, Aug 12, 2018, 3:45 PM IST

1008mum08.jpg

ಡೊಂಬಿವಲಿ: ಕಳೆದ ಹಲವಾರು ವರ್ಷಗಳಿಂದ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿಯನ್ನು ಬಹಳ ಹತ್ತಿರದಿಂದ ಕಾಣುತ್ತಿದ್ದೇನೆ. ನಾಡಿನ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳನ್ನು  ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸಮಿತಿಯ ಕಾರ್ಯವೈಖರಿ ಅಭಿನಂದನೀಯವಾಗಿದೆ. ನಮ್ಮ ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸಂಘವು ಪ್ರತೀ ವರ್ಷ ಕೋಟ್ಯಂತರ ರೂ. ಗಳನ್ನು ವ್ಯಯಿಸುತ್ತಿದೆ. ಅದರಲ್ಲೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆ ಯಲ್ಲಿರುವ ಡೊಂಬಿವಲಿ ಪ್ರಾದೇಶಿಕ ಸಮಿತಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ಸಮಿತಿಯು 45 ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಿ ಮಾನವೀಯತೆ ಮೆರೆದಿದೆ. ಇದರೊಂದಿಗೆ ತುಳುನಾಡ ಸಂಸ್ಕೃತಿ, ಆಚಾರ, ವಿಚಾರವನ್ನು ಬಿಂಬಿಸುವ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ವೈವಿಧ್ಯಮಯ ವಾಗಿ ಆಯೋಜಿಸಿರುವುದು ಬಹಳಷ್ಟು ಖುಷಿ ತಂದಿದೆ ಎಂದು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಅಭಿಪ್ರಾಯಿಸಿದರು.
ಡೊಂಬಿವಲಿ ಪೂರ್ವದ ಎಂಐಡಿಸಿಯ ಪೆಂಡಾರRರ್‌ ಕಾಲೇಜು ಎದುರುಗಡೆಯಿರುವ ರೋಟರಿ ಕ್ಲಬ್‌ ಸಭಾಗೃಹದಲ್ಲಿ ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವಾರ್ಷಿಕ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಮಹಿಳಾ ವಿಭಾಗದ ಆಟಿಡೊಂಜಿ ದಿನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

 ಸುಧಾಕರ ಶೆಟ್ಟಿ ಅವರ ಪುತ್ರನ ವತಿಯಿಂದ ಇಂದು ಸಂಘಕ್ಕೆ 25 ಸಾವಿರ ರೂ. ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಇತರರರಿಗೆ ಮಾದರಿಯಾಗಲಿ. ಸಂಘದಿಂದ ನೆರವು ಪಡೆದ ಸಮಾಜದ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ   ಮಾಡಿ ಸಮಾಜದ ಹಾಗೂ ಸಂಘದ ಋಣ ತೀರಿಸುವ ಕಾರ್ಯದಲ್ಲೂ ತೊಡಗಬೇಕು. ಬಂಟರ ಸಂಘವು ಇಂದು ದಾನಿಗಳ ಸಹಕಾರ, ಪ್ರೋತ್ಸಾಹದಿಂದ ಸಮಾಜದ ಆರ್ಥಿಕ ವಾಗಿ ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ, ಆರೋಗ್ಯ, ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ವಿಶೇಷ ಯೋಗದಾನ ನೀಡುತ್ತಿದೆ. ಡೊಂಬಿವಲಿ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯ-ಸದಸ್ಯೆಯರ ಒಗ್ಗಟ್ಟು, ಒಮ್ಮತದ ಗುಣದಿಂದ ಇಂತಹ ಕಾರ್ಯಕ್ರಮ  ಸಾಕಾರಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಅವರು ಹೇಳಿದರು.

 ಸಮಾಜದ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯು ವುದರೊಂದಿಗೆ ಗುರುಹಿರಿಯರಿಗೆ ಗೌರವ ನೀಡುವುದನ್ನು ಕಲಿಯ ಬೇಕಾಗಿದೆ ಎಂದರು.

ಪ್ರಾದೇಶಿಕ ಸಮಿತಿಗಳಿಗೆ ಮಾದರಿ
ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರು ಮಾತನಾಡಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯು ಇತರ ಪ್ರಾದೇಶಿಕ ಸಮಿತಿಗಳಿಗೆ ಮಾದರಿಯಾಗುವ ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿದೆ. ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುವುದು ದೇವರು ಮೆಚ್ಚು ವಂಥಹ ಕಾರ್ಯವಾಗಿದೆ. ಇಂದು ಮಹಿಳೆಯರು ವಿವಿಧ ಖಾದ್ಯ ಪದಾರ್ಥಗಳನ್ನು ತಯಾರಿಸಿ ತಂದು ಪ್ರದರ್ಶಿಸಿರುವುದು ಸಂತೋಷದ ವಿಷಯ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದಂತಾಗುತ್ತದೆ. ಸಂಘದ ಪ್ರತಿಯೊಂದು ಯೋಜನೆಗಳಿಗೆ ಪ್ರಾದೇಶಿಕ ಸಮಿತಿಗಳ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು.

ಬಂಟರ ಸಂಘ ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ ಅವರು ಮಾತನಾಡಿ, ಹನ್ನೊಂದು ಮಕ್ಕಳಿಂದ ಪ್ರಾರಂಭಗೊಂಡ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮವು ಇಂದು 45 ಮಕ್ಕಳಿಗೆ ಏರಿಕೆಯಾಗಿರುವುದು ಉತ್ತಮ ಬೆಳವಣಿಗೆ. ಇದ್ದವರು ಇಲ್ಲದವರಿಗೆ ನೀಡಿ ಸಮಾಜವನ್ನು ಮೇಲಕ್ಕೆತ್ತುವ ಕಾರ್ಯ ಮಾಡುತ್ತಿರುವ ಹೃದಯವಂತರ ದಾನಿಗಳಿಗೆ ಶಿರಬಾಗಿ ವಂದನೆಗಳು ಎಂದರು.
ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ  ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಶೆಟ್ಟಿ, ಆಟಿ ತಿಂಗಳ ಆಚರಣೆಯ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಸುಜಾತಾ ಶೆಟ್ಟಿ ಪುತ್ರನ ವತಿಯಿಂದ ಬಂಟರ ಸಂಘಕ್ಕೆ 25 ಸಾವಿರ ರೂ. ದೇಣಿಗೆಯನ್ನು ನೀಡಿದರು.  ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಅವರ ವತಿಯಿಂದ ಮಹಿಳೆಯರಿಗೆ ವಿಶೇಷ ಬಹುಮಾನ ನೀಡಲಾಯಿತು. ಅಶೋಕ್‌ ಶೆಟ್ಟಿ ಮುಂಡ್ಕೂರು, ಸುಧಾಕರ ಶೆಟ್ಟಿ, ದಿನೇಶ್‌ ಶೆಟ್ಟಿ ಅವರನ್ನು ಸಮಿತಿಯ ವತಿಯಿಂದ ವಿಶೇಷವಾಗಿ ಸತ್ಕರಿಸಲಾಯಿತು.

ಆಟಿಕಳಂಜ ಪ್ರಾತ್ಯಕ್ಷಿಕೆ, ವಿವಿಧ ನೃತ್ಯ ಹಾಗೂ ಗಣೇಶ್‌ ಎರ್ಮಾಳ್‌ ಅವರಿಂದ ಸಂಗೀತ ರಸಮಂಜರಿ ನಡೆಯಿತು. ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಸುಜಾತಾ ಶೆಟ್ಟಿ, ಕಾರ್ಯದರ್ಶಿ ಯೋಗಿನಿ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಸುನಂದಾ ಶೆಟ್ಟಿ ಮತ್ತು ಬಳಗದವರು ಪ್ರಾರ್ಥನೆಗೈದರು. ಯೋಗಿನಿ ಶೆಟ್ಟಿ ಮತ್ತು  ಸುನಂದಾ ಶೆಟ್ಟಿ ಅವರು ಪಾಡªನ ಹಾಡಿದರು. ಸುಕುಮಾರ್‌ ಎನ್‌. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದಿನೇಶ್‌ ಶೆಟ್ಟಿ ವಂದಿಸಿದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಸಂಚಾಲಕ ರಾಜೀವ್‌ ಎಂ. ಭಂಡಾರಿ, ಉಪ ಕಾರ್ಯಾಧ್ಯಕ್ಷರುಗಳಾದ ಸುಕುಮಾರ್‌ ಶೆಟ್ಟಿ, ಆನಂದ್‌ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಡೊಂಬಿವಲಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಆರ್‌. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ದಿನೇಶ್‌ ಎನ್‌. ಶೆಟ್ಟಿ, ಜತೆ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಕೋಶಾಧಿಕಾರಿ ಜಯಕರ ಶೆಟ್ಟಿ ಪಡುಕುಡೂರು, ಜತೆ ಕೋಶಾಧಿಕಾರಿ ಉಮೇಶ್‌ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಜತೆ ಕಾರ್ಯದರ್ಶಿ ಸುಮತಾ ರೈ, ಜತೆ ಕೋಶಾಧಿಕಾರಿ ಶೋಭಾ ರೈ ಮೊದಲಾದವರು ಉಪಸ್ಥಿತರಿದ್ದರು.

ಸಮಿತಿಯ ವತಿಯಿಂದ ಪ್ರಸ್ತುತ ವರ್ಷದ ಆರ್ಥಿಕವಾಗಿ ಹಿಂದುಳಿದ ಸಮಾಜದ 40 ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಡೊಂಬಿವಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಡೊಂಬಿವಲಿ ಪರಿಸರದ ಸಮಾಜದ ಮಹಿಳೆಯರು ವಿವಿಧ ಬಗೆಯ ಆಟಿ ತಿಂಗಳ ವಿಶೇಷತೆಯನ್ನು ಸಾರುವ ಖಾಧ್ಯ ಪದಾರ್ಥಗಳನ್ನು  ತಯಾರಿಸಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.  ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು  ಯಶಸ್ಸಿಗೆ ಸಹಕರಿಸಿದರು.  ಸಮಾಜದವರು, ವಿವಿಧ ಸಂಘಟನೆ ಗಳ ಪದಾಧಿ ಕಾರಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದೆ. ಡೊಂಬಿವಲಿ ಪ್ರಾದೇಶಿಕ ಸಮಿತಿಯು ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುತ್ತಿರುವುದು ಅಭಿನಂದನೀಯ. ಇಂದು ಮಹಿಳೆಯರು ವಿವಿಧ ಖಾದ್ಯ ಪದಾರ್ಥಗಳನ್ನು ತಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಗಳು ಕಿರಿಯರಿಗೆ ಮಾದ‌ರಿಯಾಗಿರಲಿ. ಸಂಘದ ಪ್ರತಿಯೊಂದು ಯೋಜನೆಗಳ ಪ್ರಯೋಜನವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು. ಸಮಿತಿಯ ಮಹಿಳಾ ವಿಭಾಗದ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ.
-ರಂಜನಿ ಸುಧಾಕರ ಹೆಗ್ಡೆ  , 
ಕಾರ್ಯಾಧ್ಯಕ್ಷೆ : ಬಂಟರ ಸಂಘ ಮಹಿಳಾ ವಿಭಾಗ

ಶಿಕ್ಷಣ ನೀಡುವುದು ನಮ್ಮ ಧರ್ಮ 
ಹಿಂದಿನ ಕಾಲದ ಕಷ್ಟದ ದಿನಗಳನ್ನು ನೆನಪಿಸಿಕೊಂಡಾಗ ಭಯವಾಗುತ್ತದೆ. ಆದರೆ ಇಂದು ಅದು ಸಂಪೂರ್ಣವಾಗಿ ಬದಲಾವಣೆಯಾಗಿದೆ. ಸಂಘದ ಸಮಾಜಪರ ಯೋಜನೆಗಳನ್ನು ಪ್ರಾದೇಶಿಕ ಸಮಿತಿಗಳು ಸಮಾಜ ಬಾಂಧವರ ಮನೆ-ಮನಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗುತ್ತಿರುವುದು ಅಭಿನಂದನೀಯ. ಮಕ್ಕಳಿಗೆ ಶಿಕ್ಷಣವನ್ನು ನೀಡುವುದು ನಮ್ಮ ಧರ್ಮ. ಇಂದು ಸುಮಾರು 45 ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಿರುವುದು ಸಾಮಾನ್ಯ ಮಾತಲ್ಲ. ದಾನಿಗಳ ಸಹಕಾರದಿಂದ  ಸಮಿತಿಯಿಂದ ಇನ್ನಷ್ಟು ಇಂತಹ ಸೇವೆ ನಿರಂತರವಾಗಿ ನಡೆಯುತ್ತಿರಲಿ ಎಂದು  ಸರಳಾ ಬಿ. ಶೆಟ್ಟಿ (ಮಾಜಿ ಕಾರ್ಯಾಧ್ಯಕ್ಷೆ : ಮಹಿಳಾ ವಿಭಾಗ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌) ಹೇಳಿದರು. 

ಮಹಿಳೆಯರು ಕಷ್ಟಪಟ್ಟು ಉತ್ತಮವಾದ ತಿಂಡಿ-ತಿನಿಸುಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ನಿಮಗೆ ವಂದನೆಗಳು. ಇಂದು ಉತ್ತಮವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದೇನೆ ಎನ್ನಲು ಹೆಮ್ಮೆಯಾಗುತ್ತಿದೆ. ಪ್ರತಿಯೋರ್ವ ವ್ಯಕ್ತಿ ತನ್ನ ತಪ್ಪನ್ನು ತಿದ್ದಿಕೊಂಡು ಮುಂದುವರಿದಾಗ ಮಾತ್ರ ಆತನಿಂದ ನಿಜವಾದ ಸೇವೆಯನ್ನು ಮಾಡಲು ಸಾಧ್ಯವಾಗುತ್ತದೆ. ನಾವೆಲ್ಲರೂ ಒಂದಾಗಿ ಒಗ್ಗಟ್ಟಿನಿಂದ, ಒಮ್ಮತದಿಂದ ಆರ್ಥಿಕವಾಗಿ ಹಿಂದುಳಿದವರ ಸೇವೆಗೆ ಮುಂದಾಗೋಣ.
-ವಿನುತಾ ಶೆಟ್ಟಿ , 
ಕಾರ್ಯಾಧ್ಯಕ್ಷೆ : ಮುಲುಂಡ್‌ ಬಂಟ್ಸ್‌ ಮಹಿಳಾ ವಿಭಾಗ

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.