ಮನೆ, ಶೌಚಾಲಯವಿಲ್ಲದ ಕಾರ್ಮಿಕ ಕುಟುಂಬ


Team Udayavani, Aug 13, 2018, 10:02 AM IST

13-agust-1.jpg

ಸುಳ್ಯ: ಸರಕಾರ ಬಡವರಿಗೆ ಎಲ್ಲ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವುದಾಗಿ ಹೇಳುತ್ತದೆ. ನಮ್ಮದು ಗುಡಿಸಲು ಮುಕ್ತ ರಾಜ್ಯ ಎಂದು ಘೋಷಿಸುತ್ತದೆ. ವಾಸ್ತವದಲ್ಲಿ ಅದೆಷ್ಟೋ ಕುಟುಂಬಗಳು ಇಂದಿಗೂ ಸೂರಿಲ್ಲದೆ ಶೋಚನೀಯ ಸ್ಥಿತಿಯಲ್ಲಿವೆ.

ಇಂತಹ ಕುಟುಂಬಗಳ ಸಾಲಿನಲ್ಲಿ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾವಿನ ಪಳ್ಳ ರಾಮಣ್ಣ ನಾಯ್ಕ ಅವರ ಕುಟುಂಬವೂ ಸೇರಿದೆ. ಇಲ್ಲಿನ ಮುಖ್ಯ ರಸ್ತೆ ಬದಿಯಲ್ಲಿ ರಾಮಣ್ಣ ನಾಯ್ಕ ಪತ್ನಿ ಮತ್ತು ಮಗಳ ಜತೆ ವಾಸವಿದ್ದಾರೆ. ಇದುವರೆಗೆ ಯಾವುದೇ ಸೌಲಭ್ಯ ದೊರಕದೆ, ಶೋಚನೀಯ ಸ್ಥಿತಿಯಲ್ಲಿ ಕುಟುಂಬ ದಿನಗಳನ್ನು ಕಳೆಯುತ್ತಿದೆ.

ಮೂಲತಃ ಪಾಣಾಜೆಯವರಾದ ರಾಮಣ್ಣ ಅವರ ತಂದೆ ಕೂಲಿ ಕೆಲಸಕ್ಕೆಂದು ಪೆರಾಜೆಗೆ ಬಂದು ನೆಲೆಸಿದ್ದರು. ರಾಮಣ್ಣ ಅವರೂ ಕೆಲಸ ಹುಡುಕುತ್ತ ಊರೂರು ಸುತ್ತಿ ಅಜ್ಜಾವರ ರಸ್ತೆ ಬದಿ ಗುಡಿಸಲು ನಿರ್ಮಿಸಿಕೊಂಡು ವಾಸ್ತವ್ಯ ಆರಂಭಿಸಿದ್ದರು. ಸ್ಥಳೀಯರೇ ಆದ ಲಲಿತಾ ಅವರನ್ನು ಮದುವೆಯಾದರು. ಹದಿನಾರು ವರ್ಷಗಳಿಂದ ಹಕ್ಕಿ ಗೂಡಿನಂತಹ ಚಿಕ್ಕ ಗುಡಿಸಲಿನಲ್ಲಿ ಇವರ ವಾಸ. ಈ ದಂಪತಿಯ ಪುತ್ರಿ ಪ್ರೌಢಶಾಲೆ ಕಲಿಯುತ್ತಿದ್ದಾರೆ.

ಛಾವಣಿಗೆ ಟಾರ್ಪಲ್‌
ಗರಿಗಳ ತಟ್ಟಿ ಮಡಲಿನಿಂದ ನಿರ್ಮಿಸಿದ ಗುಡಿಸಲಿಗೆ ಛಾವಣಿ ಬದಲು ನೀರು ಸೋರದಂತೆ ಪ್ಲಾಸ್ಟಿಕ್‌ ಟಾರ್ಪಲ್‌ ಹಾಕಿಕೊಂಡಿದ್ದಾರೆ. ಸುತ್ತ ತಟ್ಟಿ ಬಿಟ್ಟರೆ ಯಾವುದೇ ಸುರಕ್ಷತೆಯ ಗೋಡೆಗಳಿಲ್ಲ. ಸ್ನಾನಕ್ಕೆ, ಶೌಚಾಲಯಕ್ಕೆ ಪ್ರತ್ಯೇಕ ವ್ಯವಸ್ಥೆಯಿಲ್ಲ. ಸಾರ್ವಜನಿಕ ಸ್ಥಳದಲ್ಲೇ ಪೂರೈಸಿಕೊಳ್ಳಬೇಕು. ರಸ್ತೆ ಬದಿಯೇ ಮನೆ ಇರುವುದರಿಂದ ಸಾರ್ವಜನಿಕರು ಓಡಾಡುತ್ತಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ರಾಮಣ್ಣ ಅವರ ಪತ್ನಿ, ಪುತ್ರಿ ತೀರಾ ಮುಜುಗರ ಅನುಭವಿಸುತ್ತಾರೆ.

ಕತ್ತಲಾಗುವುದನ್ನು ಕಾಯಬೇಕು!
ತಾಯಿ ಮತ್ತು ಪುತ್ರಿ ಕತ್ತಲಾಗುವ ತನಕ ಕಾದು ಬಳಿಕವೇ ಸ್ನಾನ, ಶೌಚ ಇತ್ಯಾದಿ ಪೂರೈಸಿಕೊಳ್ಳಬೇಕು. ಬೆಳಕು, ನೀರಿನ ವ್ಯವಸ್ಥೆಯೂ ಈ ಗುಡಿಸಲಿಗಿಲ್ಲ.

ವ್ಯವಸ್ಥೆ ಕಲ್ಪಿಸುತ್ತೇವೆ
ಅಜ್ಜಾವರ ಗ್ರಾಮದ ಬೇಲ್ಯ ಎಂಬಲ್ಲಿ ನಿವೇಶನ ರಹಿತ 70 ಕುಟುಂಬಗಳಿಗೆ ಜಾಗ ಗುರುತಿಸಲಾಗಿದೆ. ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ರಾಮಣ್ಣ ನಾಯ್ಕ ಅವರನ್ನು ಸೇರಿಸಿಕೊಂಡು ಜಾಗ ಒದಗಿಸಲಾಗುವುದು. ಬಸವ ವಸತಿ ಯೋಜನೆಯಲ್ಲಿ ಮನೆ ಕೊಡಿಸಲೂ ಕ್ರಮ ಕೈಗೊಳ್ಳಲಾಗುವುದು.
– ಎ. ಬೀನಾ ಕರುಣಾಕರ
ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ 

ಭರವಸೆ ಸಿಕ್ಕಿದೆ
ಯಾವುದಾದರೂ ಒಂದು ಯೋಜನೆಯಲ್ಲಿ ಜಾಗ ಮತ್ತು ವಸತಿ ನೀಡಿ ಎಂದು ಪಂಚಾಯತ್‌ಗೆ ಅರ್ಜಿ ಸಲ್ಲಿಸಿರುವೆ. ಭರವಸೆ ದೊರಕಿದೆ. ಇದುವರೆಗೆ ಸವಲತ್ತು ದೊರಕಿಲ್ಲ.
   – ರಾಮಣ್ಣ ನಾಯ್ಕ
    ಸೌಲಭ್ಯ ವಂಚಿತರು

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.