ಕೇರಳ ಜಲ ಪ್ರಳಯ ದೀರ್ಘಾವಧಿ ಯೋಜನೆ ಬೇಕು


Team Udayavani, Aug 13, 2018, 11:27 AM IST

kerala.png

ದೇವರ ನಾಡಾದ ಕೇರಳಕ್ಕೆ ಈ ಸಲ ವರುಣ ದೇವ ಮುನಿದಿರುವಂತೆ ಕಾಣಿಸುತ್ತಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕೇರಳದಲ್ಲಿ ಪ್ರಳಯ ಸದೃಶ ಪರಿಸ್ಥಿತಿ ತಲೆದೋರಿದೆ. ಈಗಾಗಲೇ 35ಕ್ಕೂ ಹೆಚ್ಚು ಮಂದಿ ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 60,000 ಮಂದಿಯನ್ನು ಮನೆಯಿಂದ ತೆರವುಗೊಳಿಸಿ ಪರಿಹಾರ ಶಿಬಿರಗಳಿಗೆ ಸಾಗಿಸಲಾಗಿದೆ. ಈ ಮಾದರಿಯ 500ಕ್ಕೂ ಹೆಚ್ಚು ಶಿಬಿರಗಳನ್ನು ಸರಕಾರ ಪ್ರಾರಂಭಿಸಿದೆ. ಮಳೆಯಿಂದಾಗಿ ಆಗಿರುವ ಕೃಷಿ ಮತ್ತು ಸೊತ್ತು ಹಾನಿ ಅಪಾರ. 100ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಕುಸಿದಿದ್ದರೆ 1500ದಷ್ಟು ಮನೆಗಳು ಹಾನಿಗೀಡಾಗಿವೆ.ಕೃಷಿ ಸಂಪೂರ್ಣ ಹಾನಿಗೀಡಾಗಿದ್ದು ಇದರ ಅಂದಾಜು ಇನ್ನೂ ಸಿಕ್ಕಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ ಈ ಮಳೆಗಾಲದ ಹೊಡೆತದಿಂದ ಚೇತರಿಸಿಕೊಳ್ಳಲು ರಾಜ್ಯಕ್ಕೆ ಬಹುಕಾಲ ಬೇಕಾಗಬಹುದು. 

ರಾಜ್ಯದ ಎಲ್ಲ 24 ಅಣೆಕಟ್ಟೆಗಳು ತುಂಬಿವೆ. ಅದರಲ್ಲೂ ಇಡುಕ್ಕಿ ಅಣೆಕಟ್ಟು ಸ್ಥಿತಿ ಚಿಂತಾಜಕನವಾಗಿದೆ. 26 ವರ್ಷಗಳ ಬಳಿಕ ರಾಜ್ಯದಲ್ಲಿ ಎಲ್ಲ ಅಣೆಕಟ್ಟೆಗಳ ಶಟರ್‌ಗಳನ್ನು ಏಕಕಾಲದಲ್ಲಿ ತೆರೆದು ನೀರು ಹೊರ ಬಿಟ್ಟದ್ದು ಇದೇ ಮೊದಲು. ಈ ಸಲದ ಮಳೆ 1924ರ ಮಹಾ ಪ್ರಳಯವನ್ನು ನೆನಪಿಸುವಂತಿದೆ ಎಂದು ಇಲ್ಲಿನ ಹಳಬರು ನೆನಪಿಸುತ್ತಿರುವುದು ಪರಿಸ್ಥಿತಿ ಎಷ್ಟು ಕಳವಳಕಾರಿಯಾಗಿದೆ ಎನ್ನುವುದನ್ನು ತಿಳಿಸುತ್ತದೆ. ಕಳೆದ ವರ್ಷ ಇದೇ ಸಮಯದಲ್ಲಿ ಕೇರಳ ಮಳೆ ಕೊರತೆಯಿಂದ ಚಿಂತೆಗೀಡಾಗಿತ್ತು. ಆಗಸ್ಟ್‌ನಲ್ಲೇ ರಾಜ್ಯ ಸರಕಾರ ಶೇ. 29 ಮಳೆ ಕೊರತೆಯಾಗಿರುವುದರಿಂದ ನೀರು ಮತ್ತು ವಿದ್ಯುತ್‌ನ್ನು ಮಿತವ್ಯಯಕ್ಕೆ ಯೋಜನೆಗಳನ್ನು ರೂಪಿಸಲು ತೊಡಗಿತ್ತು. ಈ ಸಲ ಪರಿಸ್ಥಿತಿ ತದ್ವಿರುದ್ಧವಾಗಿದೆ. 

ಹೀಗೆ ಹವಾಮಾನ ಪ್ರತಿಕೂಲಕರವಾಗಿ ವರ್ತಿಸಲು ಏನು ಕಾರಣ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿಲ್ಲ. ಹವಾಮಾನ ಬದಲಾವಣೆಯಿಂದ ಪ್ರಕೃತಿ ಮುನಿಯಬಹುದು ಎಂಬ ಎಚ್ಚರಿಕೆ ಮಾತು ಕೇಳಿ ಬಂದು ಬಹಳ ವರ್ಷಗಳಾದರೂ ಇದನ್ನು ನಿರ್ಲಕ್ಷಿಸಿದ್ದೆ ಈ ಮಾದರಿಯ ಸ್ಥಿತಿಯುಂಟಾಗಲು ಕಾರಣ. 

ರಾಜ್ಯ ಸರಕಾರ ಶಕ್ತಿಮೀರಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಕೇಂದ್ರವೂ ಸಾಕಷ್ಟು ನೆರವು ನೀಡುತ್ತಿದೆ. ಗೃಹ ಸಚಿವ ರಾಜನಾಥ ಸಿಂಗ್‌ ರಾಜ್ಯಕ್ಕೆ ಭೇಟಿ ನೀಡಿ ಅವಲೋಕನ ನಡೆಸಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಉದ್ಗರಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ರಾಜ್ಯ ಇದೇ ಮಾದರಿಯಲ್ಲಿ ಮಳೆಯಿಂದ ನಲುಗಿತ್ತು. ಈ ಸಂದರ್ಭದಲ್ಲಿ ಪರಿಹಾರ ಕೇಂದ್ರದಲ್ಲಿರುವವರು ಮನೆಗಳಿಗೆ ವಾಪಸಾಗಿ ಸಾಮಾನು ಸರಂಜಾ ಮುಗಳನ್ನು ಹೊಂದಿಸಿಕೊಳ್ಳುತ್ತಿರುವಾಗಲೇ ಮತ್ತೂಮ್ಮೆ ಅತಿವೃಷ್ಟಿಯಾ ಗಿದ್ದು, ಜನರ ಬದುಕು ಅತಂತ್ರಗೊಂಡಿದೆ.

ಸದ್ಯಕ್ಕೇನೊ ಸರಕಾರ ಪರಿಹಾರ ಕೇಂದ್ರಗಳಲ್ಲಿ ಊಟ, ವಸತಿ ಏರ್ಪಾಡು ಮಾಡಿಕೊಡಬಹುದು. ಆಗಿರುವ ಹಾನಿಗಳಿಗೆ ಒಂದಷ್ಟು ಪರಿಹಾರವನ್ನೂ ನೀಡಬಹುದು. ಇದಿಷ್ಟ ರಿಂದಲೇ ಬದುಕು ಹಸನಾದೀತೆ? ಅನೇಕ ಕುಟುಂಬಗಳು ಜೀವಮಾನದ ಗಳಿಕೆ, ಕಷ್ಟಪಟ್ಟು ಕಟ್ಟಿಸಿದ ಮನೆ ಹೀಗೆ ಎಲ್ಲವನ್ನೂ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದೆ. ಇಂಥವರ ಬದುಕು ಮತ್ತೂಮ್ಮೆ ನೇರ್ಪುಗೊಳ್ಳಲು ಎಷ್ಟು ಸಮಯ ಹಿಡಿಯಬಹುದು ಎಂದು ಹೇಳುವುದು ಕಷ್ಟ. 

ಇದು ಕೇರಳದ ದುರಂತ ಮಾತ್ರವಲ್ಲ, ಇಡೀ ದೇಶ ಇಂದು ಈ ಮಾದರಿಯ ಹವಾಮಾನ ವೈಪರೀತ್ಯಕ್ಕೆ ತೆರೆದುಕೊಂಡಿದೆ. ಅಕಾಲಿಕ ಮಳೆ, ಅತಿಯಾದ ಸೆಖೆ ಇವೆಲ್ಲ ನಾವೇ ತಂದುಕೊಂಡಿರುವ ದುರಂತಗಳು.

ಅತಿಕ್ರಮಣ, ಅರಣ್ಯ ನಾಶ ಇವೇ ಮುಂತಾದ ಕೃತ್ಯಗಳಿಂದ ಸತತವಾಗಿ ಪ್ರಕೃತಿಯನ್ನು ಶೋಷಿಸಿದ ಪರಿಣಾಮವಿದು. ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂದು ತಜ್ಞರು ಪದೇ ಪದೇ ಎಚ್ಚರಿಸುತ್ತಿದ್ದರೂ ಅದನ್ನು ತಡೆಯುವ ನಿಟ್ಟಿನಲ್ಲಿ ನಾವು ನಡೆಸಿದ ಪ್ರಯತ್ನ ಅತ್ಯಲ್ಪ. ಮಳೆಗಾಲದಲ್ಲಿ ಮಾತ್ರವಲ್ಲದೆ ಬೇಸಿಗೆಯಲ್ಲೂ ಈ ಸಲ ಕಡಲ್ಕೊರೆತ ವಾಗಿರುವುದನ್ನು ಕಂಡಿದ್ದೇವೆ. ತಾಪಮಾನ ಏರಿಕೆಯಿಂದಾಗಿ ಸಮುದ್ರದಲ್ಲಾಗಿರುವ ವ್ಯತ್ಯಯವೇ ಇದಕ್ಕೆ ಕಾರಣ. ಆದರೂ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಶೋಷಣೆ ನಿಂತಿಲ್ಲ. ಉತ್ತರ ಭಾರತದಲ್ಲಿ ಬೀಸಿದ ಧೂಳು ಬಿರುಗಾಳಿ, ಮೇ ತಿಂಗಳಲ್ಲೇ ಆದ ಅತಿವೃಷ್ಟಿ ಇವೆಲ್ಲ ಹವಾಮಾನ ಬದಲಾವಣೆಯಿಂದ ಪ್ರಕೃತಿ ಚಕ್ರ ಬದಲಾಗಿರುವ ಪರಿಣಾಮವೇ. 

ವಿಕೋಪ ನಿರ್ವಹಣಾ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸುವುದು, ಕಟ್ಟಡಗಳು, ಅಣೆಕಟ್ಟೆಗಳು, ಸೇತುವೆಗಳು ಮತ್ತಿತರ ನಿರ್ಮಾಣಗಳನ್ನು ಸುಸ್ಥಿಯಲ್ಲಿಡುವುದು ಮಾಡಲೇ ಬೇಕಾದ ಕೆಲಸ. ಇದರ ಜತೆಗೆ ತಾಪಮಾನ ಏರಿಕೆ ಮತ್ತು ಇದರಿಂದಾಗುವ ಹವಾಮಾನ ಬದಲಾವಣೆ ಯನ್ನು ತಡೆಯಲು ದೀರ್ಘಾಕಾಲಿಕ ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನಿಸುವುದಕ್ಕೆ ಆದ್ಯತೆ ನೀಡಬೇಕು. ಎಲ್ಲ ಸರಕಾರಗಳ ಬಜೆಟ್‌ನಲ್ಲಿ ಇಂಥ ಕಾರ್ಯಕ್ರಮಗಳಿಗೂ ಅನುದಾನ ಮೀಸಲಿಡಬೇಕು. 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.