ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿಯೇ ಉಳಿಯಲಿ


Team Udayavani, Aug 13, 2018, 11:46 AM IST

m6-congress.jpg

ಮೈಸೂರು: ಜಾತ್ಯಾತೀತ ಪಕ್ಷವಾಗಿರುವ ಕಾಂಗ್ರೆಸ್‌ ಜಾತ್ಯಾತೀತ ಪಕ್ಷವಾಗಿಯೇ ಉಳಿಯಬೇಕಿದ್ದು, ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಳ್ಳಬೇಡಿ ಎಂದು ಶಾಸಕ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಯಾರಿಗೂ ಗೊತ್ತಿಲ್ಲದಂತೆ ವಿಜಯಪುರದಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು. ವಿಜಯಪುರದ ಬಿಜೆಪಿ ಜಿಲ್ಲಾಧ್ಯಕ್ಷನನ್ನು ರಾತ್ರೋರಾತ್ರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಂಡು ನಾಗಠಾಣಾ ಕ್ಷೇತ್ರದ ಟಿಕೆಟ್‌ ನೀಡಲಾಯಿತು.

ಕಾಂಗ್ರೆಸ್‌ನ ಒಬ್ಬ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಬಿಜೆಪಿ-ಕಾಂಗ್ರೆಸ್‌ ನಡುವೆ ಈ ರೀತಿ ಹೊಂದಾಣಿಕೆ ನಡೆದಿದ್ದು, ಇದು ಜನರಿಗೆ ಗೊತ್ತಾಗಬೇಕಿದೆ. ಚುನಾವಣೆಗೂ ಮುನ್ನ ನಮ್ಮನ್ನು ಬಿಜೆಪಿಯ ಬಿ ಟೀಮ್‌ ಎಂದು ಕರೆಯಲಾಗುತ್ತಿತ್ತು. ಆದರೆ ನಾವು ಬಿಜೆಪಿ ಜತೆ ಹೋಗಿ ಸರ್ಕಾರ ರಚಿಸಲಿಲ್ಲ.

ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ಗೆ ಸಹಕರಿಸಿದ್ದು ನಿಜ, ಮತದಾರರು ಯಾರ ಮೇಲಿನ ಬೇಸರದಿಂದ ಜೆಡಿಎಸ್‌ಗೆ ಮತ ಹಾಕಿದ್ದಾರೆ. ಆದರೆ ವಿಜಯಪುರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ರಾಜಕೀಯ ತಂತ್ರಗಾರಿಕೆ ಕಾರಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಕಾಂಗ್ರೆಸ್ಸಿಗರು ಜಾತ್ಯತೀತರಾಗಿರಿ, ಅದನ್ನು ಮಿಕ್ಸ್‌ ಮಾಡಬೇಡಿ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಾಂತೀಯ ಪಕ್ಷಕ್ಕೆ ಒಲವು: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಪ್ರಾಂತೀಯ ಪಕ್ಷಗಳು ಅಧಿಕಾರದಲ್ಲಿವೆ. ಪ್ರಾಂತೀಯ ಪಕ್ಷಗಳು ಸ್ಥಳೀಯ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಿದ್ದು, ಪ್ರಾಂತೀಯ ಆಶೋತ್ತರಗಳ ಈಡೇರಿಕೆ ಸಾಧ್ಯ ಎಂಬ ಅನಿಸಿಕೆ ಇದೆ.

ಇದೇ ಕಾರಣಕ್ಕಾಗಿ ಕಾವೇರಿ ಸಮಸ್ಯೆ ಸಂದರ್ಭದಲ್ಲಿ ಸಿದ್ದರಾಮಯ್ಯ ಎಚ್‌.ಡಿ.ದೇವೇಗೌಡರ ಸಲಹೆ ಪಡೆಯುವಂತಾಯಿತು. ಹೀಗಾಗಿ ಜೆಡಿಎಸ್‌ ರೈತರ ಪರವಾಗಿ ಉಳಿದುಕೊಂಡಿರುವುದರಿಂದ ಪ್ರಾಂತೀಯ ಪಕ್ಷವಾಗಿ ಜನರ ಮನಸ್ಸಿನಲ್ಲಿ ಉಳಿದಿದೆ ಎಂದು ಹೇಳಿದರು. 

ಸರ್ವಾಧಿಕಾರಿ ಆಡಳಿತ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನ್‌ ಕೀ ಬಾತ್‌ ಮತ್ತಿತರ ಕಾರ್ಯಕ್ರಮಗಳ ಮೂಲಕ ಕೇವಲ ಮಾತಿನ ಸರ್ಕಾರವಾಗಿದೆ. ಅಲ್ಲದೆ ಸ್ವಾತಂತ್ರಾ ನಂತರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.

ನನಗೊಂದು ಕನಸಿದೆ: ಎಚ್‌.ಡಿ.ದೇವೇಗೌಡರು ತಮ್ಮ ಮೇಲೆ ನಂಬಿಕೆ, ಅಭಿಮಾನವನ್ನಿಟ್ಟು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಅಧಿಕಾರವನ್ನು ಎಲ್ಲರ ಬೆಂಬಲದೊಂದಿಗೆ ಸಮರ್ಥವಾಗಿ ನಿಭಾಯಿಸುತ್ತೇನೆ. ಆದರೆ ತಮ್ಮದೊಂದು ಕನಸಿದ್ದು, ಅದನ್ನು ನನಸಾಗಿಸಿಕೊಳ್ಳಲು ಯುವಪಡೆಯನ್ನು ಕಟ್ಟಲಾಗುತ್ತಿದ್ದು, ಇವರೆಲ್ಲರನ್ನು ಒಗ್ಗೂಡಿಸಿ ಪಕ್ಷಕಟ್ಟುವ ಆಶಯ ಹೊಂದಿದ್ದೇನೆ ಎಂದರು.

ರಾಜಕೀಯ ತಿರುವು: ಮುಂದಿನ ಲೋಕಸಭಾ ಚುನಾವಣೆ ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ತರ ತಿರುವು ಪಡೆಯಲಿದೆ. ವಿವಿಧ ರಾಜ್ಯಗಳ ಪ್ರಾಂತೀಯ ಪಕ್ಷಗಳನ್ನೊಳಗೊಂಡ ಒಕ್ಕೂಟ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ. ಈ ಚುನಾವಣೆಗೆ ಜೆಡಿಎಸ್‌ ಸಹ ಸಜ್ಜಾಗುತ್ತಿದ್ದು, ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿದೆ.

ಮುಂದಿನ ಸಂಸತ್‌ ಚುನಾವಣೆ ನರೇಂದ್ರ ಮೋದಿ ಮತ್ತು ಎಚ್‌.ಡಿ.ದೇವೇಗೌಡರ ನಡುವೆ ನಡೆದರೂ ಯಾವುದೇ ಅಚ್ಚರಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಸೇರಿದಂತೆ ಇನ್ನಿತರರು ಹಾಜರಿದ್ದರು. 

ಪ್ರಾಮಿಸಿಂಗ್‌ ಲಿಡರ್‌: ಪ್ರಜ್ವಲ್‌ ರೇವಣ್ಣ ಒಬ್ಬ ಪ್ರಾಮಿಸಿಂಗ್‌ ಲಿಡರ್‌ ಆಗಿದ್ದು, ಎಚ್‌.ಡಿ.ದೇವೆಗೌಡರ ಮೊಮ್ಮಗ ಎಂಬುದನ್ನು ಬದಿಗಿಟ್ಟು ನೋಡಿದರೆ, ಇಂತಹ ಯುವಕರು ರಾಜಕೀಯಕ್ಕೆ ಅಗತ್ಯವಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆಗಾಗಿ ಶೀಘ್ರವೇ ಗುಲ್ಬರ್ಗದಿಂದ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ಈ ವೇಳೆ ಜೆಡಿಎಸ್‌ ವಿರುದ್ಧ ಮಾಡಿರುವ ಅಪಪ್ರಚಾರದ ಕುರಿತು ಜನರಿಗೆ ಮನವರಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಬಜೆಟ್‌ ಪುಸ್ತಕ ನೋಡಿ: ಬಿಜೆಪಿ ನಾಯಕರು ಯಾವುದೇ ಆರೋಪ ಮಾಡುವ ಮುನ್ನ, ಬಜೆಟ್‌ ಪುಸ್ತಕ ನೋಡಿ ಆರೋಪಿಸಲಿ. ಶಾದಿಭಾಗ್ಯಕ್ಕೆ ಹಿಂದಿನ ಸರ್ಕಾರ ತನ್ನ ಕೊನೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿತ್ತು. ಆದರೆ ಈಗ ಅದನ್ನು ನಮ್ಮ ತಲೆಗೆ ಕಟ್ಟಲಾಗುತ್ತಿದ್ದು, ನಾವು ಯಾವುದೇ ಅನುದಾನ ಕಡಿತ ಮಾಡಿಲ್ಲ.

ಇನ್ನು ಎಚ್‌ಡಿಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದುಂದು ವೆಚ್ಚ ಆರೋಪಕ್ಕೆ ತಿರುಗೇಟು ನೀಡಿದ ಅವರು, ನರೇಂದ್ರ ಮೋದಿ ಅಧಿಕಾರ ಸ್ವೀಕಾರದ ವೇಳೆ ಆಗಮಿಸಿದ್ದ ಅತಿಥಿಗಳಿಗೆ ಖರ್ಚು ಮಾಡಿದ ಹಣ ಯಾವುದು? ಎಂದು ಪ್ರಶ್ನಿಸಿದರು. 

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.