ನಿಷ್ಕ್ರಿಯ ಪಾಲಿಕೆ ಸದಸ್ಯರ ವಿರುದ್ಧ ಬಿಎಸ್‌ವೈ ಗರಂ


Team Udayavani, Aug 13, 2018, 12:40 PM IST

paalike.jpg

ಬೆಂಗಳೂರು: ಬಿಬಿಎಂಪಿಯಲ್ಲಿ ಬಹಳಷ್ಟು ಬಿಜೆಪಿ ಪಾಲಿಕೆ ಸದಸ್ಯರು ತಾವು ಬೆಳೆದಿದ್ದಾಯಿತು, ಶ್ರೀಮಂತರಾಗಿದ್ದಾಯಿತು ಎಂಬಂತಿದ್ದಾರೆ. ಅಂಥವರಿಂದ ಪಕ್ಷಕ್ಕೆ ಕೊಡುಗೆ ಏನು?, ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ತನಗೆ ಯಾವುದೇ ಮುಲಾಜಿಲ್ಲ. ಪಕ್ಷ ಸಂಘಟನೆಯಾಗಬೇಕಷ್ಟೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಾಕೀತು ಮಾಡಿದರು.

ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಆ.9ರಿಂದ ಆರಂಭವಾದ ಪ್ರವಾಸದ ಭಾಗವಾಗಿ 6 ಜಿಲ್ಲೆಗಳ ಪ್ರವಾಸ ಪೂರ್ಣಗೊಳಿಸಿದ ತಮ್ಮ ನೇತೃತ್ವ ತಂಡ ಭಾನುವಾರ ಬೆಂಗಳೂರು ನಗರಕ್ಕೆ ಸಂಬಂಧಪಟ್ಟಂತೆ ಶಕ್ತಿ ಕೇಂದ್ರ ಪ್ರಮುಖರು ಹಾಗೂ ಮೇಲ್ಪಟ್ಟವರ ಸಭೆಯಲ್ಲಿ ಅವರು ಮಾತನಾಡಿದರು.

ಬೆರಳೆಣಿಕೆಯಷ್ಟು ಒಳ್ಳೆಯ ಕಾರ್ಪೋರೇಟರ್‌ಗಳಷ್ಟೇ ಪಕ್ಷ ಬಲವರ್ಧನೆಯಲ್ಲಿ ತೊಡಗಿಸಿಕೊಂಡಿರುವುದು ಕಾರ್ಯಕರ್ತರ ಭಾವನೆಯಿಂದ ಅರ್ಥವಾಗಿದೆ. ಸಂಬಂಧಪಟ್ಟವರನ್ನು ಕರೆದು ಸರಿಪಡಿಸಬೇಕಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಎಲ್ಲರೂ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ‌ರು.

ಇಂದಿರಾ ಕ್ಯಾಂಟೀನ್‌ನಲ್ಲೂ ಲೂಟಿ: ಬಿಜೆಪಿ ಕೊಡುಗೆಗಳ ಜತೆಗೆ ಮೈತ್ರಿ ಸರ್ಕಾರದ ದುರಾಡಳಿತದ ಬಗ್ಗೆಯೂ ಜನರಿಗೆ ಮನವರಿಕೆ ಮಾಡಿಕೊಡಬೇಕು. ಬಿಬಿಎಂಪಿ ಕೈಗೊಂಡಿರುವ ವೈಟ್‌ಟಾಪಿಂಗ್‌ ಕಾಮಗಾರಿಯಲ್ಲಿ ಭಾರೀ ಅಕ್ರಮ ನಡೆದಿದೆ. ಒಟ್ಟು 800 ಕೋಟಿ ರೂ. ಮೊತ್ತದ ಯೋಜನೆಗೆ ಈವರೆಗೆ 60 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ. ಬಡವರ ಅನುಕೂಲಕ್ಕೆಂದು ಆರಂಭವಾದ ಇಂದಿರಾ ಕ್ಯಾಂಟೀನ್‌ನಲ್ಲೂ ಕೋಟ್ಯಂತರ ರೂ. ಲೂಟಿಯಾಗುತ್ತಿದೆ.

ಬಡವರ ಹೆಸರಿನಲ್ಲಿ ಹಗಲು ದರೋಡೆ ನಡೆಯುತ್ತಿದ್ದು, ಇದನ್ನು ಜನತೆಗೆ ತಿಳಿಸಬೇಕು ಎಂದು ಹೇಳಿದರು. ತ್ಯಾಜ್ಯ ವಿಲೇವಾರಿಗೆ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದ್ದರೂ ನಗರದಲ್ಲಿ ಸ್ವತ್ಛತೆ ಕಾಣದಾಗಿದೆ. ಇದರ ಹೊಣೆಯನ್ನು ಕಾಂಗ್ರೆಸ್‌-ಜೆಡಿಎಸ್‌ ಹೊರಬೇಕು. ಸರಿಯಾಗಿ ಸಂಬಳ ಸಿಗದ ಕಾರಣ ಪೌರ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಪೌರ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.

ಸರ್ಕಾರ ಬದುಕಿದೆಯೇನ್ರಿ: ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ ವ್ಯಾಪಕವಾಗಿದ್ದು, ಯುವಜನತೆಗೆ ಮಾರಕವೆನಿಸಿದೆ. ಸರ್ಕಾರ ಬದುಕಿದೆಯೇನ್ರಿ?  ಬೆಂಗಳೂರಿನಲ್ಲಿ ನಿತ್ಯ ಕೊಲೆ, ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಿರುವಾಗ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ಹೊಂದಾಣಿಕೆ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದರೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡುವ ಕಾಲ ದೂರವಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಹೆಚ್ಚು ಸ್ಥಾನ ಗೆಲ್ಲಲು ಸಂಘಟನೆಗೆ ಸನ್ನದ್ಧರಾಗಬೇಕು. ಮಹಿಳಾ ಮೋರ್ಚಾ, ಪರಿಶಿಷ್ಟ ಜಾತಿ, ಪಂಗಡ, ಮೋರ್ಚಾ, ಹಿಂದುಳಿದ ವರ್ಗ ಮೋರ್ಚಾಗಳನ್ನು ಬಲಪಡಿಸಬೇಕು. ಕನಿಷ್ಠ 10 ಮನೆಯವರನ್ನು ಸಂಪರ್ಕಿಸ ಪಕ್ಷಕ್ಕೆ ಸೇರ್ಪಡೆ ಮಾಡಬೇಕು. ನಿಮ್ಮ ಪ್ರದೇಶ, ಬಡಾವಣೆ, ವಿಭಾಗದಲ್ಲಿ ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದ ವರ್ಗದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಂಘಟಿಸಬೇಕು ಎಂದರು.

ರಾಜ್ಯದ ಯಾವುದೋ ಒಂದು ಭಾಗದಲ್ಲಿ 10,000 ಮಂದಿ ಹೋರಾಟ ನಡೆಸಬಹುದು. ಆದರೆ, ಬೆಂಗಳೂರಿನಲ್ಲಿ 10,000 ಇಲ್ಲವೇ 15,000 ಮಂದಿ ಹೋರಾಟಕ್ಕಿಳಿದರೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.

33 ಪಾಲಿಕೆ ಸದಸ್ಯರು ಚೆಕ್ಕರ್‌: ಬೆಂಗಳೂರಿನ 14 ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಶಕ್ತಿ ಪ್ರಮುಖರು ಹಾಗೂ ಮೇಲ್ಮಟ್ಟದವರ ಸಭೆ ಭಾನುವಾರ ಆಯೋಜನೆಯಾಗಿತ್ತು. ಅದರಂತೆ ಇಷ್ಟು ಕ್ಷೇತ್ರಗಳಲ್ಲಿನ 56 ಕಾರ್ಪೋರೇಟರ್‌ಗಳು ಪಾಲ್ಗೊಳ್ಳಬೇಕಿತ್ತು. ಆದರೆ, ಸಭೆಗೆ ಹಾಜರಾಗಿದ್ದು 23 ಪಾಲಿಕೆ ಸದಸ್ಯರಷ್ಟೆ. ಇದರಿಂದ ಆಕ್ರೋಶಗೊಂಡ ಬಿ.ಎಸ್‌.ಯಡಿಯೂರಪ್ಪ ತಮ್ಮ ಭಾಷಣದಲ್ಲೇ ಕಾರ್ಪೋರೇಟರ್‌ಗಳ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದಿಂದ ಆಯ್ಕೆಯಾಗಿ, ಆರ್ಥಿಕವಾಗಿಯೂ ಸಬಲರಾಗಿ ಪಕ್ಷ ಮರೆತರವರಿಗೆ ಪಾಠ ಕಲಿಸುವ ಎಚ್ಚರಿಕೆ ಸಂದೇಶ ರವಾನಿಸಿದರು.

ಡಿವಿಎಸ್‌, ಸುರೇಶ್‌ಕುಮಾರ್‌ ಗೈರು: ಸಭೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಶಾಸಕ ಎಸ್‌.ಸುರೇಶ್‌ ಕುಮಾರ್‌ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಬೆಂಗಳೂರು ನಗರ ವ್ಯಾಪ್ತಿಯ 14 ಕ್ಷೇತ್ರಗಳ ಪೈಕಿ ರಾಜಾಜಿನಗರವೂ ಸೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಗರ ಘಟಕಕ್ಕೆ ಸುರೇಶ್‌ ಕುಮಾರ್‌ ದೂರು ನೀಡಿದ್ದರು.

ಆದರೆ, ಯಾರ ವಿರುದ್ಧವೂ ಕ್ರಮ ಕೈಗೊಳ್ಳದ ಕಾರಣ ಅಸಮಾಧಾನಗೊಂಡಿದ್ದ ಅವರು ಸಭೆಯಿಂದ ದೂರ ಉಳಿದಿದ್ದರು. ಹಾಗೆಯೇ ಹೆಬ್ಟಾಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರು ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದವರ ಮೇಲೆ ಕ್ರಮಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಸಭೆಗೆ ಹಾಜರಾಗಿರಲಿಲ್ಲ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.