ಗಳಿಕೆ, ಉಳಿಕೆ, ಬಳಕೆ, ಇದು ಹೂಡಿಕೆಯ ಸುಂದರ ಚಕ್ರ


Team Udayavani, Aug 13, 2018, 3:11 PM IST

13-agust-14.jpg

ಎಲ್ಲರ ಜೀವನದಲ್ಲೂ ನೋವು, ಸಂಕಟ, ತುರ್ತು ಸಂದರ್ಭ, ಆರ್ಥಿಕ ವೆಚ್ಚ ಇದ್ದೇ ಇರುತ್ತದೆ. ಅದನ್ನು ಎದುರಿಸಲು ನಾವು ಮೊದಲೇ ಸಿದ್ಧರಾಗಿರಬೇಕು. ಒಂದಷ್ಟು ಹಣ ಉಳಿಸಿ ತುರ್ತು ಸಂದರ್ಭಕ್ಕೆಂದು ಮೀಸಲಾಗಿ ಇಟ್ಟಿರಬೇಕು. ಪದೇ ಪದೆ ಹೇಳುತ್ತಿದ್ದೇವೆ ಅನ್ನಿಸಿದರೂ ಹೇಳಲೇಬೇಕು. ಏಕೆಂದರೆ ಈಗ ಗಳಿಕೆ ಮಾಡುವುದು ಕಳೆಯುವುದಕ್ಕೆ ಎನ್ನುವ ಹಾಗಾಗಿದೆ. ನಾವು ಗಳಿಸಬೇಕು. ಗಳಿಸಿದ್ದನ್ನು ಸರಿಯಾಗಿ, ನಿಯಮಿತವಾಗಿ ಉಳಿಸಬೇಕು. ಉಳಿಸಿರುವುದನ್ನು ಬೆಳೆಸುವುದಕ್ಕೆ ಹೂಡಿಕೆ ಮಾಡಬೇಕು. ಹೀಗೆ ಮಾಡಿದ ಹೂಡಿಕೆಯಿಂದ ಮತ್ತೆ ಗಳಿಕೆ ಆಗಬೇಕು. ಗಳಿಕೆ ಉಳಿಕೆ ಹೂಡಿಕೆಯ ಒಂದು ಸುಂದರ ಚಕ್ರ ಇದು.

ಇನ್ನೊಂದು ರೀತಿಯ ಚಕ್ರ ಇದೆ. ಗಳಿಕೆ ಏನೋ ಆಗಿದೆ. ಆದರೆ ಸರಿಯಾದ ರೀತಿಯಲ್ಲಿ ಪ್ಲಾನ್‌ ಇಲ್ಲದೇ ಉಳಿಕೆ ಆಗುತ್ತಿಲ್ಲ. ಉಳಿಕೆ ಇರದಿದ್ದರೆ ಹೂಡಿಕೆ ಹೇಗೆ ಸಾಧ್ಯ? ಆಗ ಅವತ್ತಿನ ದುಡಿಮೆ ಅವತ್ತಿಗೆ. ಆಯಾ ತಿಂಗಳ ದುಡಿಮೆ ಆಯಾ ತಿಂಗಳಿಗೆ. ಏನಾದರೂ ಕಷ್ಟ ಎದುರಾದರೆ, ಹೆಚ್ಚುವರಿ ಖರ್ಚು ಎದುರಾದರೆ, ಏನು ಮಾಡಬೇಕು? ಗುರುತು ಪರಿಚಿತರಲ್ಲಿ ಹಣದ ಸಹಾಯ ಕೇಳಬೇಕು. ಹಣಕಾಸು ಸಂಸ್ಥೆಗಳಲ್ಲಿ ಸಾಲ ಮಾಡಬೇಕು. ಹೊರಗಿನಿಂದ ಹಣತಂದರೆ ಅದಕ್ಕೆ ಬಡ್ಡಿ ಕಟ್ಟಬೇಕು. ನೆಂಟರು, ಬಂಧುಗಳು, ಸ್ನೇಹಿತರಲ್ಲಿ ಹಣ ಕೇಳಿದರೂ ಆರಡಿ ದೇಹವನ್ನು ಮೂರಡಿ ಮಾಡಿಕೊಂಡು ಯಾಚಿಸಬೇಕು. ಹೀಗೆ ಪಡೆದ ಹಣ ಸಾಲವೊ, ಕೈಗಡವೋ ಆಗಿರುತ್ತದೆ. ಅನಂತರದ ದಿನಗಳಲ್ಲಿ ನಿತ್ಯವೂ ಅದನ್ನು ತೀರಿಸುವುದು ಹೇಗೆ ಎಂಬ ಯೋಚನೆ ಅಥವಾ ಹೆಚ್ಚುವರಿ ದುಡಿಮೆಗೆ ಬೇರೇನಾದರೂ ಎಕ್ಸ್‌ಟ್ರಾ ಕೆಲಸ ಮಾಡಬೇಕು ಎಂಬ ಯೋಚನೆ ಜತೆಯಾಗುತ್ತದೆ. ಯೋಚನೆ. ಸಾಲ ಮಾಡಿದರೂ ಶಾಂತಿ ಇರುವುದಿಲ್ಲ. ಹೀಗೆ ಮನಸ್ಸು ಶಾಂತವಾಗಿ ಇರದಿದ್ದರೆ ಕೆಲಸದಲ್ಲಿ ಅದು ವ್ಯಕ್ತವಾಗುತ್ತದೆ. ಎಷ್ಟೋ ಜನರು ಹೇಳುವುದನ್ನು ಕೇಳಿದ್ದೇವೆ; ಈ ಸಾಲ ತೀರಿಸಿದರೆ ಸಾಕಪ್ಪಾ. ಮೇಲ್ನೋಟಕ್ಕೆ ಸಾಲ ಅನ್ನಿಸುತ್ತದೆ. ಇದು ನಮ್ಮ ಮನೆಯಲ್ಲಿ ನೆಮ್ಮದಿಯನ್ನೇ ಹಾಳುಗೆಡವುತ್ತಿದೆ…

ನಮ್ಮೆಲ್ಲರ ಜೀವನದಲ್ಲಿ ನೋವು, ಸಂಕಷ್ಟ, ತುರ್ತು ಸಂದರ್ಭದಲ್ಲಿ, ಅಧಿಕ ವೆಚ್ಚ ಇದ್ದೇ ಇರುತ್ತದೆ. ನಾವು ಇದಕ್ಕೆ ಮೊದಲೇ ಸಿದ್ಧವಾಗಬೇಕು. ಬೆಂಕಿ ಬಿದ್ದಾಗ ಬಾವಿ ತೊಡುವ ಹಾಗಾಗಬಾರದು. ಅದೇ ರೀತಿ, ಸಂಕಷ್ಟ ಬಂದಾಗ ಕಂಗಾಲಾಗುವ ಬದಲು ಮೊದಲೇ ನಿರೀಕ್ಷಿತ ವೆಚ್ಚವನ್ನು ಲೆಕ್ಕ ಹಾಕಿ ಅದಕ್ಕೆ ತಯಾರಿ ನಡಸಬೇಕು.

ಮುಂದೆ ಹಬ್ಬಗಳ ಹಂಗಾಮ ಶುರು ಆಗುತ್ತದೆ. ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದು ಮೊದಲು ಮನೆಯಿಂದಲೇ ಆಗಲಿ. ಮನೆಯಲ್ಲಿ ತಂದೆ ತಾಯಿ ಅಚ್ಚು ಕಟ್ಟು ತನದಿಂದ, ಸರಿಯಾಗಿ ಯೋಚಿಸಿ ಕೆಲಸ ನಿರ್ವಹಿಸುವವರಾದರೆ ಮಕ್ಕಳೂ ಅದನ್ನು ಅನುಸರಿಸುತ್ತಾರೆ.

 ಸುಧಾಶರ್ಮ ಚವತ್ತಿ 

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.