37ಸಾವಿರ ಕೋಟಿ ರೈತರ ಸಾಲಮನ್ನಾಕ್ಕೆ ಮುಹೂರ್ತ ಫಿಕ್ಸ್: HDK
Team Udayavani, Aug 13, 2018, 3:45 PM IST
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ಹಾಗೂ ಬಜೆಟ್ ನಲ್ಲಿ ಹೇಳಿದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಇರುವ ರೈತರ 37 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಂದಿನ ಗುರುವಾರ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಹಾಸನದ ಹರದನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ಥಿಕ ಶಿಸ್ತು ಉಲ್ಲಂಘಿಸದೆ ರೈತರ ಸಾಲಮನ್ನಾ ಮಾಡಲು ಕ್ರಮ ಕೈಗೊಂಡಿದ್ದೇನೆ. ರೈತರ ಎರಡು ಲಕ್ಷದವರೆಗಿನ ಸಾಲಮನ್ನಾ ಮಾಡಲು ಆದೇಶ ನೀಡುವುದಾಗಿ ಹೇಳಿದರು.
ಮುಂದಿನ ವರ್ಷವೇ ಬ್ಯಾಂಕ್ ಗಳಿಗೆ ಹಣ ನೀಡಲು ತಯಾರಿ ನಡೆದಿದೆ. ನಾನೇನು ಮಂತ್ರದಂಡ ಹಿಡಿದು ಕೆಲಸ ಮಾಡಿಲ್ಲ.ಸೋರಿಕೆ ತಡೆದಿದ್ದು ಆದಾಯ ಹೆಚ್ಚಿದೆ ಎಂದರು.
ನಾನು ಅಧಿಕಾರಕ್ಕೆ ಏರಿದ ಮೇಲೆ ಶೇ.32ರಷ್ಟು ಆದಾಯ ಏರಿಕೆ ಆಗಿದೆ ಎಂದರು. ಈ ವರ್ಷ ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾಕ್ಕೆ 6,500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
MUST WATCH
ಹೊಸ ಸೇರ್ಪಡೆ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ