ಜೆಡಿಎಸ್ ಪಕ್ಷವನ್ನು ಅಖಂಡ ಕರ್ನಾಟಕವಾಗಿಸುವೆ: ವಿಶ್ವನಾಥ್
Team Udayavani, Aug 14, 2018, 6:00 AM IST
ಹುಣಸೂರು: ಗಡಿಯಲ್ಲಿ ನೆತ್ತರ ಹನಿ ಬೀಳಲು ಬಿಡುವುದಿಲ್ಲ, ಡಾಲರ್ ಬೆಲೆ ಇಳಿಸುತ್ತೇವೆ, ಹೀಗೆಲ್ಲಾ ಹೇಳಿ ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರ ನೋಟು ಅಮಾನ್ಯಿàಕರಣ ಮಾಡಿ ದೇಶದ ಆರ್ಥಿಕ ನೀತಿ ಹದಗೆಡಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆರೋಪಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕು ಜೆಡಿಎಸ್ ಆಯೋಜಿಸಿದ್ದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆಯನ್ನು ಉತ್ತರ ಕರ್ನಾಟಕದಿಂದ ಆರಂಭಿಸಿ, ಕರಾವಳಿ ಕಡಲತಡಿವರೆಗೂ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇನೆ. ದೇವೇಗೌಡರ ಅವಧಿಯಲ್ಲಾದ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಡುತ್ತೇನೆ ಎಂದರು.
ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಪಕ್ಷದ ಕಚೇರಿಗೆ ಪ್ರತಿದಿನ ಒಬ್ಬರು ಮಂತ್ರಿ, 15 ದಿನಕ್ಕೊಮ್ಮೆ ಮುಖ್ಯಮಂತ್ರಿಗಳು ಭೇಟಿ ನೀಡುವಂತೆ ಆದೇಶಿಸಿದ್ದೇನೆ. ಜನಸಾಮಾನ್ಯರ, ಪಕ್ಷದ ಕಾರ್ಯಕರ್ತರ ಸಮಸ್ಯೆ ಪರಿಹರಿಸುವುದೇ ಪಕ್ಷದ ಗುರಿ ಎಂದರು. ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳ ಒಕ್ಕೂಟದ ಸರ್ಕಾರ ಆಡಳಿತಕ್ಕೆ ಬರಲಿದೆ. ದೇಶದ ನಾಲ್ಕು ದಿಕ್ಕುಗಳಲ್ಲೂ ಪ್ರಾದೇಶಿಕ ಪಕ್ಷಗಳ ಆಡಳಿತವಿದೆ. ರಾಜ್ಯದಲ್ಲೂ ಪಕ್ಷ ಹೆಚ್ಚಿನ ಸ್ಥಾನ ಗಳಿಸುವತ್ತ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ