ಶರಣರ ಸಂಘದಿಂದ ದುರ್ಗುಣ ದೂರ: ಶಾಂತವೀರ ಶ್ರೀ
Team Udayavani, Aug 14, 2018, 10:19 AM IST
ವಾಡಿ: ಶ್ರಾವಣ ಮಾಸ ಎನ್ನುವುದು ಭಾರತೀಯ ಪರಂಪರೆಯಲ್ಲಿ ಶ್ರೇಷ್ಠ ತಿಂಗಳು. ಶರಣರ ಸಂಘ ಮಾಡುವುದರಿಂದ ದುರ್ಗುಣಗಳನ್ನು ದೂರ ಇಡಲು ಸಾಧ್ಯವಾಗುತ್ತದೆ ಎಂದು ಗುರುಮಠಕಲ್ ಮಠದ ಪೂಜ್ಯ ಶ್ರೀ ಶಾಂತವೀರ ಸ್ವಾಮೀಜಿ ನುಡಿದರು.
ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರಾವಣ ಸಮಾರಂಭ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು.
ಬದುಕಿಗೆ ಅಂಟಿಸಿಕೊಂಡ ಕೆಟ್ಟ ಚಟಗಳನ್ನು ಬಿಟ್ಟು, ದೇವರ ಧ್ಯಾನ, ಸಜ್ಜನರ ಸಂಘ ಮತ್ತು ವಚನಗಳ ಪಠಣಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಮಾತ್ರ ಶ್ರಾವಣ ಮಾಸ ಆಚರಣೆಗೆ ಅರ್ಥ ಬರುತ್ತದೆ. ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮನುಷ್ಯ ಸಂಘ ಜೀವಿಯಾಗಿ ಬದುಕುವುದನ್ನು ಕಲಿತುಕೊಳ್ಳಬೇಕು ಎಂದು ಹೇಳಿದರು.
ಸಂಸಾರದ ಜಂಜಾಟ ಸಾಯುವ ವರೆಗೂ ನಮ್ಮ ಬೆನ್ನು ಹತ್ತುತ್ತದೆ. ಬದುಕಿನ ಒತ್ತಡಗಳ ಮಧ್ಯೆಯೂ ಪರರ ಸುಃಖ ಶಾಂತಿಗಾಗಿ ಸಮಯ ಮೀಸಲಿಡುವುದೇ ನಿಜವಾದ ದೇವರ ಸೇವೆಯಾಗಿದೆ. ಮನಸ್ಸು ಕೆಟ್ಟದ್ದರತ್ತ ಹೆಚ್ಚು ವಾಲುತ್ತದೆ. ಒಳ್ಳೆಯದು ಯಾವುದು ಎಂಬುದು ಗುರುತಿಸಲು ಸಾಧ್ಯವಾಗುವುದಿಲ್ಲ ಎಂದರು.
ವೀರಶೈವ ಸಮಾಜದ ಅಧ್ಯಕ್ಷ ಸಿದ್ದಣ್ಣ ಕಲಶೆಟ್ಟಿ, ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಲ್ಯಾಣರಾವ್ ಶೆಳ್ಳಗಿ, ಪುರಸಭೆ ಸದಸ್ಯ ಭೀಮಶಾ ಜಿರೊಳ್ಳಿ, ಹಿರಿಯ ಮುಖಂಡರಾದ ಶಾಂತಪ್ಪ ಶೆಳ್ಳಗಿ, ಪರುತಪ್ಪ ಕರದಳ್ಳಿ, ಶರಣಗೌಡ ಚಾಮನೂರ, ಬಸವರಾಜ ಶೆಟಗಾರ, ಅಣ್ಣಾರಾವ ಪಸಾರೆ, ಚಂದ್ರಶೇಖರ ಗೋಳಾ, ನಿಂಗಣ್ಣ ದೊಡ್ಡಮನಿ ಮತ್ತಿತರರು ಶ್ರೀ ಮಲ್ಲಿಕಾರ್ಜುನ ದೇವರ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್