ಆಟೋ ಚಾಲಕರಿಗೆ ಪಿಎಫ್, ಇಎಸ್‌ಐ


Team Udayavani, Aug 14, 2018, 11:24 AM IST

auto1.jpg

 ಮಂಗಳೂರು: ಆಟೋ ರಿಕ್ಷಾ ಚಾಲಕರಿಗೂ ಭವಿಷ್ಯ ನಿಧಿ ಮತ್ತು ಇಎಸ್‌ಐ ಸೌಲಭ್ಯ ಕಲ್ಪಿಸುವ ಯೋಜನೆ ನಗರದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳಲಿದೆ. ಇದು ಯಶಸ್ವಿಯಾದರೆ ದೇಶಕ್ಕೇ ಮಾದರಿ ಎನಿಸಲಿದೆ. ಮಂಗಳೂರಿನ ಹಲವು ಪ್ರಥಮಗಳ ಸಾಲಿಗೆ ಸೇರ್ಪಡೆಗೊಳ್ಳಲಿದೆ. 

ಪ್ರಸ್ತುತ ಆಟೋ ಚಾಲಕರು ಅಸಂಘಟಿತ ವಲಯದವರು. ಸಂಘಟಿತ ವಲಯದ ಕಾರ್ಮಿಕರಿಗಿರುವ ಪಿಎಫ್‌, ಇಎಸ್‌ಐ ಮತ್ತಿತರ ಸವಲತ್ತುಗಳಿಲ್ಲ. ಅವರ ಕುಟುಂಬಕ್ಕೂ ಸಾಮಾಜಿಕ ಭದ್ರತೆ ಇಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಮತ್ತು ರಿಕ್ಷಾ ಚಾಲಕರ ಸಂಘಟನೆಗಳು ಜತೆಗೂಡಿ ಭವಿಷ್ಯ ನಿಧಿ ಮತ್ತು ಇಎಸ್‌ಐ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಈ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿವೆ.

ಟ್ರಸ್ಟ್‌ ಸ್ಥಾಪನೆ
ಈ ಸೌಲಭ್ಯಗಳನ್ನು ಒದಗಿಸಲು ಕಂಪೆನಿ/ಸಂಸ್ಥೆ/ಮಾಲಕ-ಕಾರ್ಮಿಕ ಪರಿಕಲ್ಪನೆಯೊಂದಿಗೆ ಮಾಲಕರ ಮತ್ತು ಕಾರ್ಮಿಕರ ವಂತಿಗೆ ಅಗತ್ಯ. ಹಾಗಾಗಿ ರಿಕ್ಷಾ ಚಾಲಕರು ಟ್ರಸ್ಟ್‌ ರಚಿಸಲಿದ್ದು, ಅದರಲ್ಲಿ ನೋಂದಣಿಯಾದವರನ್ನು ಟ್ರಸ್ಟ್‌ನ ಕಾರ್ಮಿಕರೆಂದು ಪರಿಗಣಿಸಿ ಸೌಲಭ್ಯ ಒದಗಿಸಲಾಗುವುದು. ಇಪ್ಪತ್ತಕ್ಕೂ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಕಂಪೆನಿ ಕಡ್ಡಾಯವಾಗಿ ತನ್ನ ಕಾರ್ಮಿಕರನ್ನು ಪಿ.ಎಫ್. ಮತ್ತು ಇ.ಎಸ್‌.ಐ. ವ್ಯಾಪ್ತಿಗೆ ತರಬೇಕೆನ್ನುತ್ತದೆ ಕಾನೂನು. 

ಕಾರ್ಮಿಕರು ಮತ್ತು ಕಂಪೆನಿ ತಲಾ ಶೇ.12ನ್ನು ಪಿ.ಎಫ್ ಸಂಸ್ಥೆಗೆ ಪಾವತಿಸಬೇಕು. ಅದೇ ರೀತಿ ಇಎಸ್‌ಐ ವಂತಿಗೆಯಾಗಿ ಕಾರ್ಮಿಕರಿಂದ ಶೇ. 1.50, ಉದ್ಯೋಗದಾತರಿಂದ ಶೇ. 4.50ರಷ್ಟನ್ನು ಇ.ಎಸ್‌.ಐ. ಇಲಾಖೆಗೆ ಪ್ರತಿ ತಿಂಗಳ ನಿರ್ದಿಷ್ಟ ದಿನದೊಳಗೆ ಪಾವತಿಸಬೇಕು. ಪಿ.ಎಫ್ ಫಲಾನುಭವಿ 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ನಿರ್ವಹಿಸಿದಲ್ಲಿ ಪಿಂಚಣಿಗೆ ಅರ್ಹ ಎನ್ನುತ್ತದೆ ನಿಯಮ. ಹಾಗಾಗಿ ಮೊದಲಿಗೆ 20 ಮಂದಿಯನ್ನು ನೋಂದಾ 
ಯಿಸಿಕೊಂಡು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ನಗರದಲ್ಲಿ ಸುಮಾರು 5 ಸಾವಿರ ರಿಕ್ಷಾಗಳಿದ್ದು, ಯೋಜನೆ ಯಶಸ್ವಿಯಾದರೆ ಉಳಿದವರಿಗೂ ಅನ್ವಯವಾಗಬಹುದು. 

ಉದ್ದೇಶಿತ ಟ್ರಸ್ಟ್‌ನ್ನು ಆಟೋ ರಿಕ್ಷಾ ಡ್ರೈವರ್ ವೆಲ್‌ಫೇರ್‌ ಟ್ರಸ್ಟ್‌ ಎಂಬುದಾಗಿ ಹೆಸರಿಸಲಾಗಿದೆ. ಅದಕ್ಕೊಂದು ಕಚೇರಿ ಇರಲಿದ್ದು, ನೋಂದಾಯಿತರು ಪ್ರತಿ ದಿನ ನಿಗದಿತ ಮೊತ್ತವನ್ನು (100 ರೂ. ಎಂದು ಅಂದಾಜು) ಟ್ರಸ್ಟ್‌ಗೆ ಪಾವತಿಸಬೇಕು. ಟ್ರಸ್ಟ್‌ ತಿಂಗಳಿಗೆ ಒಬ್ಬ ಚಾಲಕನಿಗೆ 2,500 ರೂ.ನಂತೆ ಪಿ.ಎಫ್. ಗೆ ಹಾಗೂ 300 ರೂ. ಗಳನ್ನು ಇ.ಎಸ್‌.ಐ. ಸಂಸ್ಥೆಗೆ ವಂತಿಗೆಯಾಗಿ ಪಾವತಿಸಲಿದೆ. 

ಪ್ರಾಯೋಗಿಕ ಪ್ರಯತ್ನ
ರಿಕ್ಷಾ ಚಾಲಕರಿಗೆ ಸಾಮಾಜಿಕ ಭದ್ರತೆೆ ಒದಗಿಸಲು ಈ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸ‌ಲಾಗುತ್ತಿದೆ. ಈ ಯೋಜನೆಗೆ ಕೆಲವು ಸಂಘ ಸಂಸ್ಥೆಗಳು ಸಲಹೆ ನೀಡಿವೆ. ಪಿ.ಎಫ್‌. ಮತ್ತು ಇಎಸ್‌ಐ ಸಂಸ್ಥೆಗಳ ಅಧಿಕಾರಿಗಳ ಜತೆ ಮಾತನಾಡಿದ್ದು, ಶೀಘ್ರವೇ ಅಂತಿಮಗೊಳಿಸಲಾಗುವುದು. 
ಸುದನ್‌ ಕುಮಾರ್‌ಉರ್ವ,   ರಿಕ್ಷಾ ಚಾಲಕರ ಸಂಘಟನೆಯ ಮುಖಂಡ. 

 ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.