20ಕ್ಕೆ ಶ್ರೀ ಬನಶಂಕರಿ ದೇವಸ್ಥಾನ ಉದ್ಘಾಟನೆ
Team Udayavani, Aug 14, 2018, 3:04 PM IST
ದಾವಣಗೆರೆ: ಹಳೇ ಬೇತೂರು ರಸ್ತೆ ಶಾಸ್ತ್ರಿ ಕಣದಲ್ಲಿ ಪುನರ್ ನಿರ್ಮಾಣಗೊಳಿಸಿರುವ ಶ್ರೀ ಬನಶಂಕರಿ ದೇವಸ್ಥಾನದ ಉದ್ಘಾಟನೆ, ದೇವಿ ಪ್ರತಿಷ್ಠಾಪನೆ ಹಾಗೂ ರಜತ ಮಹೋತ್ಸವ ಸಮಾರಂಭ ಆ. 20 ರಂದು ನಡೆಯಲಿದೆ ಎಂದು ಶ್ರೀ ಬನಶಂಕರಿ ದೇವಿ ದೇವಾಂಗ ಸಮಾಜದ ಗೌರವ ಅಧ್ಯಕ್ಷ ಬಸವರಾಜಪ್ಪ ಸಿದ್ದಪ್ಪ ಮಂಡಕ್ಕಿ ತಿಳಿಸಿದ್ದಾರೆ.
ಬಹಳಷ್ಟು ಶಿಥಿಲವಾಗಿದ್ದ ದೇವಸ್ಥಾನವನ್ನು 1993ರ ಜ. 29ರಂದು ಕೆಡವಲಾಗಿತ್ತು. 40-45 ಲಕ್ಷ ವೆಚ್ಚದಲ್ಲಿ ದೇವಸ್ಥಾನವನ್ನು ಪುನರ್ ನಿರ್ಮಿಸಲಾಗಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ದೇವಸ್ಥಾನ ಉದ್ಘಾಟನೆ ನೆರವೇರಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆ. 17ರಂದು ಬೆಳಗ್ಗೆ 7.30ಕ್ಕೆ ರೇಣುಕ ಮಂದಿರದಿಂದ ದೇವಸ್ಥಾನದವರೆಗೆ ಕುಂಭಮೇಳದೊಂದಿಗೆ ಶ್ರೀ ಬನಶಂಕರಿ
ದೇವಿ ಮೆರವಣಿಗೆ, 18ರಂದು ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಹೋಮ-ಹವನ ಜರುಗಲಿದೆ. 19ರಂದು ಭಾನುವಾರ ಬೆಳಗ್ಗೆ 8 ರಿಂದ ಹಂಪಿ ಹೇಮಕೂಟ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ ಶ್ರೀ ಬನಶಂಕರಿ ದೇವಿ ಮೂರ್ತಿ ಪ್ರತಿಷ್ಠಾಪಿಸುವರು.
ತುಮ್ಮಿನಕಟ್ಟೆಯ ಗುರು ಮಾರ್ಕಂಡೇಶ್ವರ ಪದ್ಮಶಾಲಿ ಗುರುಮಠ ಮಹಾಸಂಸ್ಥಾನದ ಶ್ರೀ ಪ್ರಭುಲಿಂಗ ಸ್ವಾಮೀಜಿ
ಕಳಸಾರೋಹಣ ನೆರವೇರಿಸುವರು ಎಂದು ತಿಳಿಸಿದರು. ಸೋಮವಾರ ಬೆಳಗ್ಗೆ 9.30ಕ್ಕೆ ದೇವಾಂಗ ಸಮಾಜದ ಮಕ್ಕಳಿಗೆ ಸಾಮೂಹಿಕ ಉಪನಯನ ನಡೆಯಲಿದೆ. ಬೆಳಗ್ಗೆ 11ಕ್ಕೆ ಧರ್ಮಸಭೆಯಲ್ಲಿ ಶ್ರೀ ದಯಾನಂದಪುರಿ ಸ್ವಾಮೀಜಿ , ಶ್ರೀ ಪ್ರಭುಲಿಂಗ ಸ್ವಾಮೀಜಿ, ಶ್ರೀ ನಾಲ್ಮಡಿ ನೀಲಕಂಠ ಪಟ್ಟದಾರ್ಯ ಸ್ವಾಮೀಜಿ, ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ
ಜಡೇಸಿದ್ದೇಶ್ವರ ಸ್ವಾಮೀಜಿ ಇತರರು ಸಾನ್ನಿಧ್ಯ ವಹಿಸುವರು ಎಂದು ತಿಳಿಸಿದರು.
ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್,
ನೇಕಾರ ಒಕ್ಕೂಟದ ರಾಜ್ಯ ಅಧ್ಯಕ್ಷ ಎಂ.ಡಿ. ಲಕೀನಾರಾಯಣ, ದೇವಾಂಗ ಸಮಾಜದ ರಾಜ್ಯ ಅಧ್ಯಕ್ಷ ಡಾ| ಈ. ರಮೇಶ್, ಮೇಯರ್ ಶೋಭಾ ಪಲ್ಲಾಗಟ್ಟೆ, ಡೆಪ್ಯುಟಿ ಮೇಯರ್ ಕೆ. ಚಮನ್ಸಾಬ್, ಸದಸ್ಯ ಅಲ್ತಾಫ್ ಹುಸೇನ್, ಇತರರು ಭಾಗವಹಿಸುವರು ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಸೋಮಪ್ಪ ಬಿದಿರಿ, ನಾಗರಾಜಪ್ಪ ಚಂದ್ರಪ್ಪ ರಿತ್ತಿ, ಪ್ರಕಾಶ್ ಮಲ್ಲಪ್ಪ ಕಮಲಾಪುರ, ಕೃಷ್ಣಪ್ಪ ಮಹಾದೇವಪ್ಪ ಕರ್ಜಗಿ, ಶಂಕ್ರಪ್ಪ ಪಂಪಣ್ಣ ಜವಳಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ
Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?
Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್ ದರ ದುಪ್ಪಟ್ಟು
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…