ಮಹದಾಯಿ ಅಂತಿಮ ತೀರ್ಪು;ರಾಜ್ಯಕ್ಕೆ 13.5 TMC ನೀರು :ಸಂಭ್ರಮ
Team Udayavani, Aug 14, 2018, 4:24 PM IST
ಹೊಸದಿಲ್ಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಅಂತಿಮ ತೀರ್ಪು ಇಂದು ಮಂಗಳವಾರ ಸಂಜೆ ಹೊರ ಬಿದ್ದಿದ್ದು, ರಾಜ್ಯಕ್ಕೆ 13.5 ಟಿಎಂಸಿ ನೀರು ದೊರಕಿದ್ದು, ಕರ್ನಾಟಕಕ್ಕೆ ಒಂದು ಹಂತದಲ್ಲಿ ಯಶಸ್ಸು ದೊರಕಿದಂತಾಗಿದೆ.
ಜೆ.ಎಂ.ಪಾಂಚಾಲ ನೇತೃತ್ವದ ಮಹದಾಯಿ ನ್ಯಾಯ ಮಂಡಳಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನೀರನ್ನು ಹಂಚಿ ಅಂತಿಮ ತೀರ್ಪನ್ನು ಹೊರ ಹಾಕಿದೆ. 12 ಸಂಪುಟಗಳಲ್ಲಿ ತೀರ್ಪು ಪ್ರಕಟಿಸಿದ್ದು, ಪ್ರಕಟಿತ ಎಲ್ಲಾ ಸಂಪುಟಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.
5.5 ಟಿಎಂಸಿ ನೀರು ಕುಡಿಯುವ ನೀರಿಗಾಗಿ ಬಿಡುಗಡೆ ಮಾಡಲು ಅನುಮತಿ ನೀಡಿದೆ. ಆ ಪೈಕಿ 4 ಟಿಎಂಸಿ ನೀರನ್ನು ಮಲಪ್ರಭಾ ನದಿಗೆ ಹರಿಯ ಬಿಡಲಾಗುತ್ತದೆ.
ಮಹದಾಯಿ ಜಲವಿದ್ಯುತ್ ಯೋಜನೆಗೆ ಅನುಮತಿ ನೀಡಿದ್ದು, 8 ಟಿಎಂಸಿ ವಿದ್ಯುತ್ ಯೋಜನೆಗಾಗಿ ಬಳಸಿಕೊಳ್ಳಲು ಸೂಚನೆ ನೀಡಿದೆ.
ಭಾರೀ ಕುತೂಹಲ ಮೂಡಿಸಿದ್ದ ತೀರ್ಪಿನ ಕುರಿತಾಗಿ ಧಾರವಾಡ ಭಾಗದ ರೈತ ಹೋರಾಟಗಾರರು ಸಿಹಿ ಸಂಚಿ ಸಂಭ್ರಮಿಸಿದ್ದಾರೆ. ಕರ್ನಾಟಕದ ಪರ ವಾದ ಮಂಡನೆ ಮಾಡಿದ ವಕೀಲರಿಗೆ ಅಭಿನಂದಿಸಿದ್ದಾರೆ. ಸಾವಿರಕ್ಕೂ ಹೆಚ್ಚು ದಿನ ಮಹದಾಯಿಗಾಗಿ ಹೋರಾಟ ನಡೆದಿತ್ತು.
ಮಹದಾಯಿಯಲ್ಲಿಯ 200 ಟಿಎಂಸಿ ಅಡಿ ನೀರಿನಲ್ಲಿ ಕೇವಲ 9 ಟಿಎಂಸಿ ಅಡಿ ನೀರನ್ನು ಗೋವಾ ಬಳಸಿಕೊಳ್ಳುತ್ತಿತ್ತು. ಇನ್ನುಳಿದ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿತ್ತು. ಕರ್ನಾಟಕದಲ್ಲಿ ಹರಿಯುವ 45 ಟಿಎಂಸಿ ಅಡಿ ನೀರಿನ ಪೈಕಿ 14.98 ಟಿಎಂಸಿ ಅಡಿ ನೀರು ನೀಡುವಂತೆ ಕರ್ನಾಟಕ ವಾದ ಮಂಡನೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ