ನಾಗರ ಪಂಚಮಿ ದಿನ ನಡೆಯುತ್ತೆ ಚೇಳು ಜಾತ್ರೆ! 


Team Udayavani, Aug 15, 2018, 6:00 AM IST

x-23.jpg

ಯಾದಗಿರಿ: ಗುರುಮಠಕಲ್‌ ತಾಲೂಕಿನ ಕಂದ ಕೂರ ಗ್ರಾಮದ ಬೆಟ್ಟದಲ್ಲಿ ನೆಲೆಸಿರುವ ಕೊಂಡ ಮಾಯಿ ದೇವಿ ಜಾತ್ರೆ ಪ್ರತಿವರ್ಷ ನಾಗರ ಪಂಚಮಿ ದಿನದಂದು ಸಂಭ್ರಮದಿಂದ ನೆರವೇರುತ್ತದೆ. ಈ ವೇಳೆ ಇಲ್ಲಿ ಚೇಳಿನ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಮಕ್ಕಳು, ಯುವಕರು, ಮಹಿಳೆಯರು ಜೀವಂತ ಚೇಳುಗಳೊಂದಿಗೆ ಚೆಲ್ಲಾಟವಾಡುತ್ತ ಕೆಲವರು ಬಾಯಿ, ಕೈ, ಮುಖದ ಮೇಲೆ ಚೇಳು ಬಿಟ್ಟುಕೊಂಡು ಸಂಭ್ರಮಿಸುತ್ತಾರೆ.

ನಾಗರ ಪಂಚಮಿ ದಿನ ಸಾಮಾನ್ಯವಾಗಿ ರಾಜ್ಯ ದೆಲ್ಲೆಡೆ ಮಹಿಳೆಯರು ಉಪವಾಸ ವ್ರತ ಆಚರಿಸಿ, ಭಕ್ತಿಯಿಂದ ನಾಗ ಮೂರ್ತಿಗಳಿಗೆ ಹಾಲೆರೆಯು ವುದನ್ನು ಕಾಣುತ್ತೇವೆ. ಆದರಿಲ್ಲಿ ಗ್ರಾಮಸ್ಥರೆಲ್ಲರೂ ತಳಿರು ತೋರಣಗಳಿಂದ ಮನೆಗಳನ್ನು ಶೃಂಗರಿಸಿ, ಗ್ರಾಮ ದೇವತೆ ಕೊಂಡಮಾಯಿ ಬೆಟ್ಟಕ್ಕೆ ಸಾಮೂಹಿಕವಾಗಿ ವಾದ್ಯ ಮೇಳಗಳೊಂದಿಗೆ ತೆರಳಿ ನೈವೇದ್ಯ ಅರ್ಪಿಸುತ್ತಾರೆ. 

ರಾಜ್ಯದ ಗಡಿ ಭಾಗವಾಗಿರುವುದರಿಂದ ಈ ವಿಶಿಷ್ಟ ಜಾತ್ರೆಗೆ ತೆಲಂಗಾಣ, ಆಂಧ್ರ ಹಾಗೂ ಮಹಾ ರಾಷ್ಟ್ರಗಳಿಂದಲೂ ಭಕ್ತರು ಆಗಮಿಸುತ್ತಾರೆ. ಜೀವಂತ ಚೇಳುಗಳನ್ನು ಹಿಡಿದು ಸಂಭ್ರಮಿಸುತ್ತಾರೆ. ಪಂಚಮಿ ದಿನ ಬೆಟ್ಟದ ತುಂಬೆಲ್ಲ ಕಲ್ಲುಗಳ ಕೆಳಗೆ ಕುಳಿತಿರುವ ಚೇಳುಗಳು ಕಲ್ಲು ಮೇಲೆತ್ತುತ್ತಲೇ ಹೊರಗೆ ಬರುತ್ತವೆ. ಎಲ್ಲೆಡೆ ಆವರಿಸುವ ಚೇಳುಗಳನ್ನು ಆಗಮಿಸಿದ ಭಕ್ತರು ದೇವಿ ಹೆಸರು ಜಪಿಸಿ ಅವು ಗಳನ್ನು ಹಿಡಿದುಕೊಂಡು 
ಆಟವಾಡುತ್ತಾರೆ. ಈ ಬೆಟ್ಟದಲ್ಲಿ ಸಾಮಾನ್ಯ ದಿನಗಳಲ್ಲಿ ಚೇಳುಗಳು ಕಂಡು ಬರುವುದಿಲ್ಲ. ನಾಗರ ಪಂಚಮಿ ದಿನ ಚೇಳುಗಳು ಕಾಣಿಸಿಕೊಳ್ಳುವುದು ಇಲ್ಲಿನ ದೈವೀ ಶಕ್ತಿಯ ಮಹಿಮೆಯಾಗಿದೆ ಎನ್ನುತ್ತಾರೆ ಇಲ್ಲಿನ ಹಿರಿಯರು.

ತಾತ್ಕಾಲಿಕ ಚಿಕಿತ್ಸಾ ಸೇವೆ ಲಭ್ಯ: ಕಳೆದೆರಡು ವರ್ಷ ಗಳಿಂದ ಚೇಳು ಕಚ್ಚುವ ಕುರಿತು ವರದಿ ಆಗಿರುವು ದರಿಂದ ಮುನ್ನೆಚ್ಚರಿಕೆಯಾಗಿ ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ತಾತ್ಕಾಲಿಕವಾಗಿ ಪ್ರಥಮ ಚಿಕಿತ್ಸೆ ನೀಡುವ ವ್ಯವಸ್ಥೆ ಕೈಗೊಳ್ಳುತ್ತಿದ್ದಾರೆ. ಕಂದಕೂರ ಗ್ರಾಪಂ ಕಾರ್ಯಾಲಯ ದಿಂದ ಜಾತ್ರೆ ನಡೆಯುವ ಬೆಟ್ಟದಲ್ಲಿ ಅಗತ್ಯ ಕುಡಿಯುವ ನೀರಿನ ಸೌಕರ್ಯ ಒದಗಿಸಲಾಗುತ್ತಿದೆ. ಬೆಟ್ಟಕ್ಕೆ ತೆರಳುವ ರಸ್ತೆಗೆ ಅನುಕೂಲ ಮಾಡಲಾಗಿದೆ ಎಂದು ಪಿಡಿಒ ತಿಳಿಸಿದ್ದಾರೆ.

ಜಾತ್ರೆಯಲ್ಲಿ ಚೇಳುಗಳನ್ನು ಹಿಡಿದು ಜನರು ಅವುಗಳೊಂದಿಗೆ ಆಟವಾಡುತ್ತಾರೆ. ಚೇಳು ಯಾರಿಗೂ ಕಚ್ಚುವುದಿಲ್ಲ ಎನ್ನುವ ನಂಬಿಕೆ ಜನರದ್ದಾಗಿದೆ.
● ಸಿದ್ದಲಿಂಗರೆಡ್ಡಿ ಪಾಟೀಲ, ಸ್ಥಳೀಯ

ಚೇಳುಗಳಲ್ಲಿ ವಿಷದ ಪ್ರಮಾಣ ಕಡಿಮೆಯಿರುತ್ತದೆ. ಇದು ಕಚ್ಚುವುದರಿಂದ ಸಾವುಗಳು ಸಂಭವಿಸಿರುವ ಪ್ರಕರಣಗಳಿಲ್ಲ. ಸಾಮಾನ್ಯವಾಗಿ 12ರಿಂದ 24 ಗಂಟೆಯವರೆಗೆ ದೇಹದ ಮೇಲೆ ಪರಿಣಾಮ ಬೀರುತ್ತದೆ. ಯಾವುದಕ್ಕೂ ಎಚ್ಚರ ವಹಿಸುವುದು ಸೂಕ್ತ. 
● ಡಾ| ಸಂಜೀವ ಕುಮಾರ  ರಾಯಚೂರಕರ್‌, ಜಿಲ್ಲಾ ಶಸ್ತ್ರಚಿಕಿತ್ಸಕರು

 ಅನೀಲ ಬಸೂದೆ

ಟಾಪ್ ನ್ಯೂಸ್

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.