ಮಹದಾಯಿ: ನಾಲ್ಕು ದಶಕಗಳ ¬ಬಳಿಕ ನೀರಿನ ಸದ್ದು


Team Udayavani, Aug 15, 2018, 6:00 AM IST

x-35.jpg

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಜನ್ಮ ತಳೆದು ಮುಂದೆ ಗೋವಾ ಸೇರುವ ಮಹದಾಯಿ, ರಾಜ್ಯದಲ್ಲಿ ಸುಮಾರು 29 ಕಿಮೀ ದೂರ ಹರಿದರೆ, ಗೋವಾದಲ್ಲಿ ಸುಮಾರು 52 ಕಿಮೀ ಉದ್ದ ಹರಿದು ನಂತರ ಅರಬ್ಬಿ ಸಮುದ್ರ ಸೇರುತ್ತದೆ. ಮಹದಾಯಿ ನದಿ ಒಟ್ಟು 2032 ಚದರ ಕಿಮೀ ಜಲಾನಯನ ವ್ಯಾಪ್ತಿ ಹೊಂದಿದೆ. ಮಹದಾಯಿ ತಿರುವ ಯೋಜನೆ ಮೂಲಕ ರಾಜ್ಯದ ಗಡಿ ಭಾಗ ಕೊಟ್ನಿ ಬಳಿ ಜಲಾಶಯ ನಿರ್ಮಾಣ ಮಾಡಿ ವಿದ್ಯುತ್‌ ಉತ್ಪಾದನೆ ಹಾಗೂ ನೀರನ್ನು ಮಲಪ್ರಭಾಕ್ಕೆ ಸೇರಿಸಬೇಕೆಂಬ ಚಿಂತನೆ ಹೊಂದಲಾಗಿತ್ತು. ಈ ಕುರಿತು 1976ರಲ್ಲಿ ಗುಳೇದಗುಡ್ಡದ
ಶಾಸಕರಾಗಿದ್ದ ಬಿ.ಎಂ.ಹೊರಕೇರಿಯವರು ಸದನದಲ್ಲಿ ಪ್ರಸ್ತಾಪ ಮಾಡಿದ್ದರು. ಖ್ಯಾತ ಎಂಜಿನಿಯರ್‌ ಬಾಳೆಕುಂದ್ರಿ ಅವರೊಂದಿಗೆ ಚರ್ಚಿಸಿ ಅಗತ್ಯ ನೀಲನಕ್ಷೆ ಸಿದಟಛಿಪಡಿಸುವಲ್ಲಿ ತಮ್ಮದೇ ಶ್ರಮ ಹಾಕಿದ್ದರು.

ಪ್ರಸ್ತಾಪಕ್ಕೆ ಸ್ಪಂದಿಸಿದ್ದ ಅಂದಿನ ಸರ್ಕಾರ, 1978ರಲ್ಲಿ ಎಸ್‌. ಆರ್‌. ಬೊಮ್ಮಾಯಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅಧ್ಯಯನ ನಡೆಸಿ ಸಮಿತಿ ವರದಿ ನೀಡಿತ್ತು. 1988ರಲ್ಲಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಗೋವಾ ವಿರೋಧ ತೋರಿತ್ತು. ಮುಂದೆ ಎಸ್‌.ಆರ್‌.ಬೊಮ್ಮಾಯಿ 1989ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಅಂದಿನ ಗೋವಾ ಮುಖ್ಯಮಂತ್ರಿ ಪ್ರತಾಪಸಿಂಗ್‌ ರಾಣಾ ಅವರೊಂದಿಗೆ ಮಾತುಕತೆ ನಡೆಸಿ, ಯೋಜನೆ ಜಾರಿಗೆ ಸೌಹಾರ್ದ ಪರಿಹಾರ ಕಂಡುಕೊಂಡಿದ್ದರು. ನಂತರ ತನ್ನ ನಿಲುವು ಬದಲಾಯಿಸಿದ್ದ ಗೋವಾ, ಮೊಂಡುತನಕ್ಕೆ
ಅಂಟಿಕೊಂಡಿತ್ತು. ರಾಜ್ಯ ಸರ್ಕಾರ 2000ರಲ್ಲಿ ನಮ್ಮದೇ ಆದ ಕಳಸಾ-ಬಂಡೂರಿ ಹಳ್ಳಗಳನ್ನು ಬಳಸಿಕೊಂಡು ಒಟ್ಟು 7.56 ಟಿಎಂಸಿ ನೀರು ಪಡೆದುಕೊಳ್ಳುವ ಯೋಜನೆಗೆ ಮುಂದಾಗಿತ್ತು. 2002ರಲ್ಲಿ ಅಂದಿನ ಜಲಸಂಪನ್ಮೂಲ ಸಚಿವ ಎಚ್‌.ಕೆ.ಪಾಟೀಲ ಈ ಯೋಜನೆಗೆ ಚಾಲನೆ
ನೀಡಿದ್ದರು. ಯೋಜನೆಗೆ ಅರಣ್ಯ ಇಲಾಖೆ, ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿತ್ತಾದರೂ, ಗೋವಾದ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಾನೇ ನೀಡಿದ್ದ ಒಪ್ಪಿಗೆಯನ್ನು ತಡೆ ಹಿಡಿಯಿತು. ಆ ಮೂಲಕ ಕಳಸಾ-ಬಂಡೂರಿ ನಾಲಾ ಕೂಡ ನನೆಗುದಿಗೆ ಬಿದ್ದಿತ್ತು.

ನ್ಯಾಯಾಧಿಕರಣ ರಚನೆ: 2006ರಲ್ಲಿ ಕೇಂದ್ರ ಸರ್ಕಾರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಸಿಎಂಗಳ ಸಭೆ ಕರೆದು ಚರ್ಚಿಸಿತ್ತಾದರೂ ಗೋವಾ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಬದಲಾಗಿ ನ್ಯಾಯಾಧಿಕರಣಕ್ಕೆ ಒತ್ತಾಯಿಸಿತ್ತು. ಜತೆಗೆ ಸುಪ್ರೀಂಕೊರ್ಟ್‌ ಮೊರೆ ಹೋಗಿದ್ದರಿಂದ ಕೇಂದ್ರ ಸರ್ಕಾರ 2010, ನ.16ರಂದು ನ್ಯಾಯಮೂರ್ತಿ ಜೆ.ಎಂ.ಪಾಂಚಾಲ ನೇತೃತ್ವದಲ್ಲಿ ಮಹದಾಯಿ ನ್ಯಾಯಾಧಿಕರಣ ರಚನೆ ಮಾಡಿತ್ತು. ನ್ಯಾಯಾಧಿಕರಣದ ಅವಧಿಯನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತಾದರೂ ತೀರ್ಪು ನೀಡಲು ಎಂಟು ವರ್ಷಗಳೇ ಬೇಕಾಯಿತು. ಈ ನಡುವೆ 2015ರಲ್ಲಿ ತೀವ್ರ ಬರದ ಹಿನ್ನೆಲೆಯಲ್ಲಿ ನೀರು ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಾಧಿಕರಣ 2016ರಲ್ಲಿ ತಿರಸ್ಕರಿಸಿತ್ತು. 

● ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.