ಈಶ್ವರಪ್ಪ ಆರೋಪಕ್ಕೆ ರೇವಣ್ಣ ತಿರುಗೇಟು
Team Udayavani, Aug 16, 2018, 6:55 AM IST
ಹಾಸನ: ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಯಾವ ಅಧಿಕಾರಿಗಳ ವರ್ಗಾವಣೆಗೆ ಯಾವ ಸಚಿವರು ಎಷ್ಟೆಷ್ಟು ಲಂಚಪಡೆದಿದ್ದಾರೆಂಬುದನ್ನು ದಾಖಲೆ ಸಹಿತ ಬಹಿರಂಗಪಡಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ಹಿರಿಯ, ಜವಾಬ್ದಾರಿಯುತ ನಾಯಕರಾಗಿರುವ ಈಶ್ವರಪ್ಪ ಯಾವುದೇ ಆರೋಪ ಮಾಡಿದರೂ ದಾಖಲೆ ಸಹಿತಿ ಸಾಬೀತುಪಡಿಸಿ ಘನತೆ ಉಳಿಸಿಕೊಳ್ಳಬೇಕು. ಪುಕ್ಕಟೆ ಪ್ರಚಾರಕ್ಕೆ ಆರೋಪ ಮಾಡುವುದು ಸಲ್ಲದು ಎಂದರು.
ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳ ವರ್ಗಾವಣೆಗೆ ಕೆ.ಎಸ್.ಈಶ್ವರಪ್ಪ ಸಹಿತ ಹಲವು ಶಾಸಕರು ಶಿಫಾರಸು ಪತ್ರಗಳನ್ನು ನೀಡಿದ್ದಾರೆ. ಶಾಸಕರ ಎಲ್ಲಾ ಮನವಿಗಳಿಗೂ ಪಕ್ಷ ಭೇದ ಮಾಡದೆ ಸ್ಪಂದಿಸಿ ಎಂಜಿನಿಯರ್ಗಳು ಹಾಗೂ ಇತರೆ ಅಧಿಕಾರಿಗಳನ್ನು ವರ್ಗ ಮಾಡಿಕೊಟ್ಟಿದ್ಧೇನೆ. ವರ್ಗಾವಣೆ ಮಾಡಿಸಲು ಈಶ್ವರಪ್ಪ ಸಹಿತ ಯಾವುದೇ ಶಾಸಕರಿಂದಲಾದರೂ ನಾನು ಹಣ ತೆಗೆದುಕೊಂಡಿದ್ದೇನೆಯೇ? ಆರೋಪ ಮಾಡುವವರು ತನಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದನ್ನಾದರೂ ಹೇಳಲಿ ನೋಡೋಣ ಎಂದು ತಿರುಗೇಟು ನೀಡಿದರು.
ಅತಿವೃಷ್ಟಿಯಿಂದ ಶಿರಾಡಿ, ಚಾರ್ಮಾಡಿ ಸಹಿತಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೂ ಕುಸಿತವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಮಳೆ ನಿಂತ ನಂತರ ಹಾನಿಯ ಅಂದಾಜು ಮಾಡಿ ರಸ್ತೆಗಳ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ರೇವಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.