ಡೀಸಿ ರೋಹಿಣಿ ಮೇಲೆ ರೇವಣ್ಣ ಗರಂ
Team Udayavani, Aug 16, 2018, 6:10 AM IST
ಹಾಸನ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ತಾವು ಆಗಮಿಸಿದ ನಂತರ ಬಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ರೇಗಾಡಿದ ಪ್ರಸಂಗ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆಯಿತು.
ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಸಚಿವ ಎಚ್.ಡಿ.ರೇವಣ್ಣರಿಂದ ಧ್ವಜಾರೋಹಣ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸುಮಾರು 10 ನಿಮಿಷ ಮೊದಲೇ ರೇವಣ್ಣ ಆಗಮಿಸಿದರು. ಆದರೆ ಆ ಸಮಯಕ್ಕೆ ಜಿಲ್ಲಾಧಿಕಾರಿ ಬಂದಿರಲಿಲ್ಲ. 9 ಗಂಟೆಗೆ ಕೆಲವೇ ಕ್ಷಣಗಳಿಗೆ ಮೊದಲು ವೇದಿಕೆಗೆ ಆಗಮಿಸಿದ ಜಿಲ್ಲಾಧಿಕಾರಿ ಮೇಲೆ ಗರಂ ಆದ ರೇವಣ್ಣ ಅವರು, ಸಚಿವರು ಬಂದರೂ ಜಿಲ್ಲಾಧಿಕಾರಿಯವರು ಬರುವುದಿಲ್ಲ ಎಂದರೆ ಏನರ್ಥ, ಇಂತಹ ನಡವಳಿಕೆ ನಾನು ಸಹಿಸಲ್ಲ. ಘನತೆಯಿಂದ ನಡೆದುಕೊಳ್ಳಬೇಕೆಂದು ಹೇಳುತ್ತಾ ವೇದಿಕೆಯಲ್ಲಿ ಆಸೀನರಾದರು.
ಬಳಿಕ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ನಂತರ ವೇದಿಕೆಯಲ್ಲಿ 2 ಗಂಟೆ ಪಕ್ಕ ಆಸೀನರಾಗಿದ್ದ ಜಿಲ್ಲಾಧಿಕಾರಿಯವರೊಂದಿಗೆ ಆಗಾಗ್ಗೆ ಮಾಹಿತಿ ಪಡೆಯುತ್ತಾ ಆತ್ಮೀಯವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ