ಗುತ್ತಿಗೆ ನೌಕರರಿಂದ ಮೊಂಬತ್ತಿ ಮೆರವಣಿಗ
Team Udayavani, Aug 16, 2018, 11:34 AM IST
ದಾವಣಗೆರೆ: ಕಾಯಮಾತಿಗೆ ಒತ್ತಾಯಿಸಿ ಸರ್ಕಾರಿ ಗುತ್ತಿಗೆ ನೌಕರರು ಬುಧವಾರ ಸಂಜೆ ಜಯದೇವ ವೃತ್ತದಲ್ಲಿ ಕ್ಯಾಂಡೆಲ್ ಲೈಟ್ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಅನೇಕ ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವರು ಕೆಲಸದ ಭದ್ರತೆ ಇಲ್ಲದೆ ಅಕ್ಷರಶಃ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಗುತ್ತಿಗೆ ಆಧಾರಿತ ನೌಕರರ ಕಾರಣಕ್ಕಾಗಿಯೇ ಸರ್ಕಾರದ ಆಡಳಿತ ಅತ್ಯಂತ ಸುಸೂತ್ರವಾಗಿ ನಡೆಯುತ್ತಿದೆ. ಆದರೆ, ಅದಕ್ಕೆ ಕಾರಣವಾಗುತ್ತಿರುವರ ಬದುಕು ಮಾತ್ರ ಸುಸೂತ್ರವಾಗಿಲ್ಲ ಎಂದು ಗುತ್ತಿಗೆ ಆಧಾರಿತ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಗುತ್ತಿಗೆ ನೌಕರರ ಸಮಸ್ಯೆ ಹಲವಾರು ವರ್ಷಗಳಿಂದ ಜೀವಂತವಾಗಿವೆ. ಈ ಕ್ಷಣಕ್ಕೂ ಸಮಸ್ಯೆಗೆ ಪರಿಹಾರ ಎಂಬುದು ದೊರೆತಿಲ್ಲ. ಸದಾ ಅಭದ್ರ ಸ್ಥಿತಿಯಲ್ಲೇ ಜೀವನ ನಿರ್ವಹಣೆ ಮಾಡಬೇಕಿದೆ. ದೇಶ 72ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದೆ. ಸರ್ಕಾರಿ ಗುತ್ತಿಗೆ ನೌಕರರಿಗೆ ಆಧುನಿಕ ಜೀತಪದ್ಧತಿಯಿಂದ ಸ್ವಾತಂತ್ರ್ಯ ದೊರೆತಿಲ್ಲ ಮಾತ್ರವಲ್ಲ ದೊರೆಯುವ ಲಕ್ಷಣವೂ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇವೆ ಕಾಯಂಗೆ ಒತ್ತಾಯಿಸಿ ಸ್ವಾತಂತ್ರ್ಯ ದಿನಾಚರಣೆಯಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳಾಗಿವೆ ನಮ್ಮನ್ನೇಕೆ ಜೀತಪದ್ಧತಿಗೆ ದೂಡುತ್ತಿದ್ದೀರಿ… ಎಂಬ ಘೋಷವಾಕ್ಯದೊಂದಿಗೆ ಒತ್ತಾಯಿಸುತ್ತಿದ್ದೇವೆ. ಸರ್ಕಾರ ಈಗಲಾದರೂ ಕಣ್ಣು ತೆರೆದು, ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು. ಆದಿಲ್ಖಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ