ಜೇನುಗೂಡು ನಾವೆಲ್ಲಾ…


Team Udayavani, Aug 16, 2018, 11:54 AM IST

jenugoodu.jpg

ದಿನದಿಂದ ದಿನಕ್ಕೆ ಮನೆಯೊಳಗಿದ್ದ ಜೇನುಗೂಡು ಬೆಳೆಯುತ್ತಾ ಹೋಯಿತು. ಆಶ್ಚರ್ಯ ಎಂದರೆ ಜೇನುನೊಣಗಳು ಯಾರಿಗೂ ತೊಂದರೆ ಕೊಡದೇ ಇದ್ದುದು. ಸ್ನಾನಕ್ಕೆ ನೀರು ಕಾಯಿಸಲು ಬೆಂಕಿ ಹಾಕಿದಾಗಲೂ ಜೇನುನೊಣಗಳು ಕಾಲೆ¤ಗೆಯಲಿಲ್ಲ.

ಬೀಳಗಿಯ ಯಂಕಪ್ಪ, ದನಗಾಹಿಯಾಗಿದ್ದ. ಮನೆಯಲ್ಲಿ ತುಂಬಾ ಬಡತನ. ಹೆಂಡತಿ ಹಾಗೂ ಮಗಳೊಂದಿಗೆ ಜೀವನ ನಡೆಸುತ್ತಿದ್ದ. ಜಾನುವಾರುಗಳಿಂದ ಬರುತ್ತಿದ್ದ ಆದಾಯವಲ್ಲದೆ, ಊರಿನ ಜನ ವರ್ಷಕ್ಕೊಮ್ಮೆ ನೀಡುತ್ತಿದ್ದ ಜೋಳ, ಕಾಳುಕಡ್ಡಿ, ಅಲ್ಪ ಮೊತ್ತದ ಹಣ ಅವನ ಸಂಸಾರ ನಡೆಯಬೇಕಾಗಿದ್ದಿತು. ಬೆಳಗಿನ ಜಾವ ಊರ ಹೊರ ಬಯಲಿನಲ್ಲಿ ದನಗಳನ್ನು ಮೇಯಲು ಬಿಟ್ಟು, ಸಿದ್ಧೇಶ್ವರ ದೇವಸ್ಥಾನದ ಕಾಡಿಗೆ ಕರೆದೊಯ್ಯುತ್ತಿದ್ದ. ಮಧ್ಯಾಹ್ನದ ಸಮಯದಲ್ಲಿ, ದನಗಳು ಗಿಡಗಳ ನೆರಳಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದವು.

ಆ ಸಮಯದಲ್ಲಿ ಯಂಕಪ್ಪ ಹಾಗೂ ಅವನ ಗೆಳೆಯ ಗಂಗಪ್ಪ ಇಬ್ಬರೂ ಸೇರಿ, ತಾವು ತಂದ ಬುತ್ತಿಯನ್ನು ಹಂಚಿಕೊಂಡು ಊಟ ಮಾಡುತ್ತಿದ್ದರು. ಯಂಕಪ್ಪನಿಗೊಂದು ವಿಶಿಷ್ಟ ಹವ್ಯಾಸವಿತ್ತು. ಊಟವಾದ ನಂತರ ಅವನು ಬೆಲ್ಲ ತಿನ್ನುತ್ತಿದ್ದ. ಬೆಲ್ಲಕ್ಕೆ ಜೇನುನೊಣಗಳು ಮುತ್ತಿಗೆ ಹಾಕುವುದನ್ನು ನೋಡಿ ಸಂತೋಷಪಡುತ್ತಿದ್ದ. ನಂತರ ಜೇನುನೊಣಗಳಿಗಾಗಿಯೇ ಬೆಲ್ಲದ ನೀರನ್ನು ಬಟ್ಟಲಿನಲ್ಲಿ ಇಡಲು ಶುರು ಮಾಡಿದ. ಬಹಳ ಸಂಖ್ಯೆಯಲ್ಲಿ ಜೇನು ನೊಣಗಳು ಸಿಹಿ ನೀರಿಗೆ ಮುತ್ತಿಗೆ ಹಾಕಿ ಪಾಕವನ್ನು ಹೀರಿಕೊಂಡು ಗುಂಯುಟ್ಟುವ ಸದ್ದು ಕೇಳಿ ಸಂತೋಷಪಡುತ್ತಿದ್ದ.

ಯಂಕಪ್ಪನ ಈ ವಿಚಿತ್ರ ಹವ್ಯಾಸದ ನಡವಳಿಕೆಯು ಗಂಗಪ್ಪನಿಗೆ ಸೋಜಿಗೆ ತಂದಿತ್ತು. ಒಂದು ದಿನ ಅವನು “ಏಕೆ? ಈ ಕೀಟಗಳ ಬಗ್ಗೆ ಇಷ್ಟೊಂದು ಪ್ರೀತಿ?’ ಎಂದು ಕೇಳಿದ. “ಯಾಕೊ ಏನೋ, ಅವು ಕಷ್ಟಪಟ್ಟು ಊರೆಲ್ಲಾ ಅಲೆದು ಎಲ್ಲಾ ಹೂಗಳ ಮಕರಂದ ಹೀರಿ ಜೇನು ತಯಾರಿಸುತ್ತವೆ. ಆದರೆ ಇನ್ನೇನು ಕುಡಿಯಬೇಕು ಎನ್ನುವಷ್ಟರಲ್ಲಿ ನಮ್ಮಂಥ ಜನರ ಪಾಲಾಗುತ್ತದೆ. ಯಾರದೋ ಶ್ರಮ ಯಾರಿಗೋ ಸುಖ’ ಎಂದು ಮರುಕಪಟ್ಟಿದ್ದ. ಒಂದು ಮಧ್ಯಾಹ್ನ ಊಟಕ್ಕೆ ಕುಳಿತಾಗ ಗಂಗಪ್ಪ ಕೇಳಿದ, “ನಿನ್ನ ಮಗಳ ಮದುವೆ ವಿಚಾರ ಏನಾಯಿತು?’.

“ಯಾಕೋ ಏನೋ, ನೋಡಲು ಬಂದ ವರಗಳೆಲ್ಲಾ ನಿಲ್ಲುತ್ತಿಲ್ಲ. ಗ್ರಹಗತಿ ಸರಿ ಇಲ್ಲಾ ಅಂತಾ ಮಠದ ಆಚಾರಿಯವರು ಹೇಳ್ಯಾರ, ಎಲ್ಲಾ ದೇವರಿಗೆ ಬಿಟ್ಟಿದ್ದು’ ಎಂದು ನಿಟ್ಟುಸಿರು ಬಿಟ್ಟ ಯಂಕಪ್ಪ. ಹಾಗೆ ಹೇಳುತ್ತಿದ್ದಂತೆ ಜೇನುನೊಣಗಳಿಗೆ ಬೆಲ್ಲದ ನೀರು ಇಟ್ಟಿದ್ದ. ಇದಾದ ಒಂದು ವಾರಕ್ಕೆ ಯಂಕಪ್ಪನ ಬಚ್ಚಲು ಮನೆಯಲ್ಲಿ ಜೇನು ನೊಣಗಳು ಸೇರಿಕೊಳ್ಳತೊಡಗಿದವು. ಯಂಕಪ್ಪನ ಬಚ್ಚಲ ಮನೆಯಲ್ಲಿ ಜೇನುಗಳು ಗೂಡು ಕಟ್ಟಿದ ಸುದ್ದಿ ಇಡೀ ಊರಿಗೆ ಹಬ್ಬಿತು.

ಹಲವರು, “ಹುಷಾರು, ಹುಳಗಳು ಕಚ್ಚಿ ಬಿಟ್ಟಾವು, ಬಿಡಿಸುವುದು ಉತ್ತಮ’ ಎಂದರು. ಇನ್ನು ಕೆಲವರು ಇದು ಶುಭ ಶಕುನ ಎಂದರು. ಆಚಾರಿಯವರನ್ನು ಭೇಟಿ ಮಾಡಿದಾಗ “ಜೇನಿನ ತಂಟೆಗೆ ಹೋಗದೆ ಇರುವುದೇ ವಾಸಿ’ ಎಂದುಬಿಟ್ಟರು. ದಿನದಿಂದ ದಿನಕ್ಕೆ ಜೇನುಗೂಡು ಬೆಳೆಯುತ್ತಾ ಹೋಯಿತು. ಆಶ್ಚರ್ಯ ಎಂದರೆ ಜೇನುನೊಣಗಳು ಯಾರಿಗೂ ತೊಂದರೆ ಕೊಡದೇ ಇದ್ದುದು. ಸ್ನಾನಕ್ಕೆ ನೀರು ಕಾಯಿಸಲು ಬೆಂಕಿ ಹಾಕಿದಾಗಲೂ ಜೇನುನೊಣಗಳು ಕಾಲ್ತೆಗೆಯಲಿಲ್ಲ.

ಬರಬರುತ್ತಾ ಗೂಡಿನ ತುಂಬಾ ಜೇನುತುಪ್ಪ ಭರ್ತಿಯಾಯಿತು. ರುಚಿಕರ ಜೇನುತುಪ್ಪದ ಆಸೆಗೆ ಬಹಳಷ್ಟು ಜನರು ಜೇನು ಬಿಡಿಸಲು ಹಠ ಹಿಡಿದರು. ಆದರೆ ಯಂಕಪ್ಪ ಒಪ್ಪಲಿಲ್ಲ. ಕೆಲವೇ ದಿನಗಳಲ್ಲಿ ಪಕ್ಕದ ಸೊನ್ನದ ಊರಿನ ತಿಪ್ಪಣ್ಣನ ಜೊತೆಗೆ ಯಂಕಪ್ಪನ ಮಗಳ ನಿಶ್ಚಯವು ಆಯಿತು. ಸರಳ ರೀತಿಯಲ್ಲಿ ಮದುವೆಯೂ ಆಯಿತು. ಯಂಕಪ್ಪ ಮನದಲ್ಲಿಯೇ ಜೇನುಹುಳುಗಳನ್ನು ಸ್ಮರಿಸಿದ.

* ಪುರುಷೋತ್ತಮ್‌

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.